ಅನಾರೋಗ್ಯಪೀಡಿತಳೆಂದು ತಾಯಿಯನ್ನು ಟೆರೆಸ್ ನಿಂದ ನೂಕಿ ಕೊಂದ ಮಗ!
ರಾಜ್ ಕೋಟ್, ಜನವರಿ 05: ಅನಾರೋಗ್ಯ ಪೀಡಿತ ತಾಯಿ ಜಯಶ್ರೀ(64) ಎಂಬುವವರನ್ನು ಸ್ವಂತ ಮಗನೇ ಟೆರೆಸ್ ನಿಂದ ನೂಕಿ ಕೊಲೆ ಮಾಡಿದ ಅಮಾನವೀಯ, ಹೀನಾತಿಹೀನ ಘಟನೆ ಗುಜರಾತಿನ ರಾಜಕೋಟ್ ನಲ್ಲಿ ನಡೆದಿದೆ.
ತಾಯಿಯನ್ನು ಟೆರೆಸ್ ನಿಂದ ನೂಕಿ ಕೊಲೆ ಮಾಡಿದ ನಂತರ, ಮನೆಯಲ್ಲಿ ಏನೂ ಆಗಿಯೇ ಇಲ್ಲ ಎಂಬಂತೆ ಕುಳಿತಿದ್ದ ಮಗ ಸಂದೀಪ್(36) ಗೆ ಅಪಾರ್ಟ್ ಮೆಂಟಿನ ಭದ್ರತಾ ಸಿಬ್ಬಂದಿ ಬಂದು, 'ನಿಮ್ಮ ತಾಯಿ ಟೆರೆಸ್ ನಿಂದ ಬಿದ್ದಿದ್ದಾರೆ' ಎಂಬ ಮಾಹಿತಿ ನೀಡಿದ್ದಾರೆ. ನಂತರ ಆತಂಕಗೊಂಡವನಂತೆ ಓಡಿದ ಕಾಲೇಜೊಂದರಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಆಗಿರುವ ಸಂದೀಪ್, 'ಈ ಘಟನೆ ನಡೆದಾಗ ನಾನು ಟೆರೆಸ್ ನಲ್ಲಿ ಇರಲೇ ಇಲ್ಲ. ಟೆರೆಸ್ ಗೆ ತೆರಳಿದ್ದ ನನ್ನ ತಾಯಿ ನೀರು ತರುವಂತೆ ನನ್ನನ್ನು ಮನೆಗೆ ಕಳಿಸಿದ್ದರು. ಆಗ ಅವರು ಆಯತಪ್ಪಿ ಬಿದ್ದಿರಬೇಕು' ಎಂದು ಪೊಲೀಸರ ಮುಂದೆ ನಾಟಕವಾಡಿದ್ದಾನೆ.
ಕೆಲವು ದಿನಗಳಿಂದ ಬ್ರೈನ್ ಹೆಮರೆಜ್ ಕಾಯಿಲೆಯಿಂದ ಬಳಲುತ್ತಿದ್ದ ತಾಯಿ ಜಯಶ್ರೀ ಅವರು ಬಾತ್ ರೂಮ್ ಕೆಲಸಗಳಿಗೂ ಮತ್ತೊಬ್ಬರ ಮೇಲೆ ಅವಲಂಬಿತರಾಗಿದ್ದರು. ಈ ವಿಷಯವನ್ನು ತಿಳಿದ ಪೊಲೀಸರು ತಕ್ಷಣವೇ ಸಂದೀಪ್ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಬಾತ್ ರೂಮ್ ಗೆ ಹೋಗುವುದಕ್ಕೂ ಮತ್ತೊಬ್ಬರ ಮೇಲೆ ಅವಲಂಬಿತರಾಗುವ ವ್ಯಕ್ತಿ, ಟೆರೆಸ್ ವರೆಗೂ ಒಬ್ಬರೇ ನಡೆದುಕೊಂಡು ಹೋಗಲು ಸಾಧ್ಯವಿಲ್ಲ ಎಂಬುದನ್ನು ಅರಿತ ಪೊಲೀಸರು ತಕ್ಷಣವೇ ಅಪಾರ್ಟ್ ಮೆಂಟಿನ ಸಿಸಿಟಿವಿ ಕ್ಯಾಮೆರಾ ಫೂಟೇಜ್ ಪರೀಕ್ಷಿಸಿದ್ದಾರೆ.

ತಾಯಿಯನ್ನು ಮಗ ಬಲವಂತವಾಗಿ ಟೆರೆಸ್ ಗೆ ಕರೆದೊಯ್ಯುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿರುವುದರಿಂದ ಸಂದೀಪನೇ ಕೊಲೆಗಾರ ಎಂದು ಪೊಲೀಸರು ಅಭಿಪ್ರಾಯಪಟ್ಟಿದ್ದಾರೆ. ಪೊಲೀಸರು ಅನುಮಾನ ವ್ಯಕ್ತಪಡಿಸುತ್ತಿದ್ದಂತೆಯೇ ಎದೆ ನೋವು ಎಂದು ಹೇಳಿ ಸಂದೀಪ್ ಆಸ್ಪತ್ರೆ ಸೇರಿದ್ದಾನೆ. ಆತ ಗುಣಮುಖನಾಗುತ್ತಿದ್ದಂತೆಯೇ ಬಂಧಿಸಿ, ವಿಚಾರಣೆ ನಡೆಸುವುದಾಗಿ ಪೊಲೀಸರು ಹೇಳಿದ್ದಾರೆ.
ಅನಾರೋಗ್ಯಪೀಡಿತಳಾಗಿರುವ ಕಾರಣಕ್ಕೆ ಹೆತ್ತ ತಾಯಿಯನ್ನೇ ಕೊಲ್ಲುವುದು ಎಷ್ಟು ಕ್ರೌರ್ಯ? ಅನಾರೋಗ್ಯ ಪೀಡಿತ ಮಗುವನ್ನು ನಿದ್ದೆ ಬಿಟ್ಟು, ಕಣ್ಣಲ್ಲಿ ಕಣ್ಣಿಟ್ಟು ಸಾಕುವ ಅಮ್ಮಂದಿರಿಗೆ ಮಕ್ಕಳ ಕೊಡುಗೆ ಇದೇನಾ..?
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications