Ladakh Protest: ಲಡಾಖ್ ನೆಲದಲ್ಲಿ ಪ್ರತಿಭಟನೆಯ ಕಿಡಿ ಹೊತ್ತಿಸಿದ್ದ ವ್ಯಕ್ತಿ ಅರೆಸ್ಟ್!
ಭಾರತದ ಗಡಿ ಪ್ರದೇಶ ಸೂಕ್ಷ್ಮವಾಗಿದೆ, ಇದಕ್ಕೆ ಕಾರಣವಾಗಿದ್ದು ಲಡಾಖ್ ನೆಲದಲ್ಲಿ ಎರಡು ದಿನದ ಹಿಂದೆ ನಡೆದಿದ್ದ ಭೀಕರ ಪ್ರತಿಭಟನೆ. ಭಾರತದ ನೆರೆಯ ದೇಶ ನೇಪಾಳ & ಬಾಂಗ್ಲಾದೇಶ ಸೇರಿದಂತೆ ಶ್ರೀಲಂಕಾ ನೆಲದಲ್ಲಿ ಭಾರಿ ದೊಡ್ಡ ದೊಡ್ಡ ಪ್ರತಿಭಟನೆ ನಡೆದು ಹಿಂಸಾಚಾರ ಭುಗಿಲೆದ್ದಿತ್ತು. ಹೀಗೆ ಭಾರಿ ದೊಡ್ಡ ಹೋರಾಟಗಳ ನಂತರ ಈ ದೇಶಗಳು ಈ ಸೈಲೆಂಟ್ ಆಗಿವೆ, ಆದರೆ ಇದೇ ರೀತಿಯಾಗಿ ಭಾರತದಲ್ಲಿ ಹಿಂಸೆಯ ಕಿಡಿ ಹೊತ್ತಿಸುವ ಕುತಂತ್ರ ನಡೆದಿರುವ ಆರೋಪ ಕೇಳಿ ಬಂದಿತ್ತು. ಅದರಲ್ಲೂ ಭಾರತದ ಗಡಿಯಲ್ಲಿ ಹೀಗೆ ದೊಡ್ಡ ಗಲಾಟೆ ನಡೆದಿತ್ತು.
ಲಡಾಖ್ಗೆ ರಾಜ್ಯ ಸ್ಥಾನಮಾನ ಸೇರಿದಂತೆ 6ನೇ ಪರಿಚ್ಛೇದದ ಅಡಿ ಸೇರಿಸಲು ಒತ್ತಾಯಿಸಿ ದಿಢೀರ್ ಅಂತಾ ಪ್ರತಿಭಟನೆ ಆರಂಭವಾಗಿದ್ದವು. ಹೀಗೆ ಶುರುವಾದ ಪ್ರತಿಭಟನೆ ಹಿಂಸೆಯ ಸ್ವರೂಪ ತಾಳಿ ಭಾರಿ ದೊಡ್ಡ ದುರ್ಘಟನೆಗಳು ನಡೆದಿದ್ದವು. ಕಂಡ ಕಂಡಲ್ಲಿ ಬೆಂಕಿ ಹಚ್ಚಿದ್ದ ಉದ್ರಿಕ್ತರ ಗುಂಪು, ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದರು. ಹೀಗಾಗಿ ಲಡಾಖ್ ಕಾದ ಕಬ್ಬಿಣದಂತೆ ಆಗಿತ್ತು, ಭಾರತದ ಗಡಿ ಭಾಗ ಸೂಕ್ಷ್ಮ ಪರಿಸ್ಥಿತಿಗೆ ಸಿಲುಕಿತ್ತು. ಆದರೆ ಇದೀಗ ಈ ಅಲ್ಲೋಲ ಕಲ್ಲೋಲಕ್ಕೆ ಕಾರಣವಾದ ವ್ಯಕ್ತಿಯನ್ನೇ ಅರೆಸ್ಟ್ ಮಾಡಿದೆ ಎನ್ಎಸ್ಎ.

ಖ್ಯಾತ ಪರಿಸರವಾದಿ ವಾಂಗ್ಚುಕ್ ವಶಕ್ಕೆ
ಹೌದು, ಲಡಾಖ್ ಭಾರತದ ತುತ್ತ ತುದಿಯಲ್ಲಿ ಇರುವ ಪ್ರದೇಶವಾಗಿದೆ. ಹೀಗಾಗಿ ಗಡಿ ಭಾಗದಲ್ಲಿರುವ ಈ ಪ್ರದೇಶ ಅತ್ಯಂತ ಸೂಕ್ಷ್ಮ ವಲಯವೂ ಹೌದು. ಹೀಗಿದ್ದಾಗ ದಿಢೀರ್ ಅಂತಾ ಪ್ರತಿಭಟನೆಗಳು ಶುರು ಆಗಿದ್ದು ಸಹಜವಾಗಿ ಆತಂಕ ಹೆಚ್ಚು ಮಾಡಿತ್ತು, ಅಲ್ಲದೆ ಲಡಾಖ್ ಬೆಳವಣಿಗೆ ಬಗ್ಗೆ ಕೇಂದ್ರ ಸರ್ಕಾರ ಕೂಡ ಸೂಕ್ಷ್ಮವಾಗಿ ಗಮನ ಹರಿಸಿತ್ತು. ಹೀಗಿದ್ದಾಗ ದಿಢೀರ್ ಅಂತಾ ಇವತ್ತು ನೂರಾರು ಜನ ಬೀದಿಗಿಳಿದು ಪ್ರತಿಭಟಿಸುವ ನೆಪದಲ್ಲಿ ಹಿಂಸಾಚಾರ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಲಡಾಖ್ ಭಾಗದ ಲೇಹ್ ಬಳಿ ಬಿಜೆಪಿ ಕಚೇರಿ ಮೇಲೆ ಕೂಡ ದಾಳಿ ಮಾಡಿರುವ ಆರೋಪ ಮಾಡಲಾಗಿತ್ತು. ಇಷ್ಟೆಲ್ಲದರ ನಡುವೆ ಇದೀಗ ಖ್ಯಾತ ಪರಿಸರವಾದಿ ಸೋನಮ್ ವಾಂಗ್ಚುಕ್ ಅರೆಸ್ಟ್ ಆಗಿದ್ದು, ಎನ್ಎಸ್ಎ ಇದೀಗ ವಿಚಾರಣೆ ನಡೆಸುತ್ತಿದೆ.
ಭಾರತದ ಶತ್ರು ರಾಷ್ಟ್ರಗಳ ಕುತಂತ್ರ?
ಒಟ್ನಲ್ಲಿ ಲಡಾಖ್ ನೆಲದಲ್ಲಿ ಸಂಭವಿಸಿರುವ ಘಟನೆ ಕುರಿತು ಹಲವು ರೀತಿ ಅನುಮಾನ ಕಾಡುತ್ತಿದೆ, ಹೀಗಾಗಿ ಕೇಂದ್ರ ಸರ್ಕಾರ ಕೂಡ ಅತ್ಯಂತ ಸೂಕ್ಷ್ಮ ಹೆಜ್ಜೆ ಇಟ್ಟಿದೆ. ಭಾರತದ ಶತ್ರು ದೇಶಗಳು ನಮ್ಮ ಆಂತರಿಕ ವಿಚಾರದಲ್ಲಿ ಕೈಹಾಕಿ ಹೀಗೆ ಆಟ ಆಡಿದ್ದವಾ? ಅನ್ನೋ ಅನುಮಾನದ ನಡುವೆ ಸಾಕಷ್ಟು ದೊಡ್ಡ ಮಟ್ಟದ ಬೆಳವಣಿಗೆಗೆ ಇದೀಗ ಲಡಾಖ್ ಸಾಕ್ಷಿಯಾಗಿದೆ. ಹೀಗಾಗಿ, ಪರಿಸರವಾದಿ ಸೋನಮ್ ವಾಂಗ್ಚುಕ್ ವಿಚಾರಣೆ ನಡೆಯುತ್ತಿದ್ದು ಶೀಘ್ರದಲ್ಲೇ ಎಲ್ಲಾ ಸತ್ಯ ಹೊರ ಬೀಳುವ ನಿರೀಕ್ಷೆ ಇದೆ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications