Get Updates
Get notified of breaking news, exclusive insights, and must-see stories!

Sonia Gandhi: ರಾಷ್ಟ್ರಪತಿಗೆ ಸೋನಿಯಾ ಅವಮಾನ ಆರೋಪ- ಭುಗಿಲೆದ್ದ ಆಕ್ರೋಶ

ನವದೆಹಲಿ, ಜನವರಿ, 31: ಇಂದು ಸಂಸತ್‌ನಲ್ಲಿ ಕೇಂದ್ರ ಬಜೆಟ್‌ ಅಧಿವೇಶನ ನಡೆಯಿತು. ಈ ವೇಳೆ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ರಾಜ್ಯಸಭಾ ಸದಸ್ಯೆ ಸೋನಿಯಾ ಗಾಂಧಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಮಾತನಾಡಿದ ಒಂದು ಹೇಳಿಕೆ ಇದೂ ವಿವಾದಕ್ಕೆ ಕಾರಣವಾಗಿದೆ. ಹಾಗಾದರೆ ಆ ಹೇಳಿಕೆ ಏನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ನಾಳೆ ಅಂದರೆ, ಫೆಬ್ರವರಿ 2ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಕೇಂದ್ರ ಬಜೆಟ್‌ ಮಂಡನೆ ಮಾಡಲಿದ್ದಾರೆ. ಇದು ಅವರು ಮಂಡನೆ ಮಾಡಲಿರುವ 8ನೇ ಬಜೆಟ್‌ ಆಗಲಿದೆ. ಅಲ್ಲದೆ ಅತೀ ಹೆಚ್ಚು ಬಜೆಟ್‌ ಮಂಡನೆ ಮಾಡಿದ ಕೀರ್ತಿಗೂ ಪಾತ್ರರಾಗಲಿದ್ದಾರೆ.

Sonia Gandhi Controversial statement allegations Against President Droupadi Murmu

ಬಜೆಟ್‌ ಅಧಿವೇಶನದ ಮುನ್ನ ದಿನವಾದ ಇಂದು (ಜನವರಿ 31) ಬೆಳಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನವನ್ನು ಉದ್ದೇಶಿಸಿ ಮಾತನಾಡಿದರು. ರಾಷ್ಟ್ರಪತಿ ಭಾಷಣ ಮುಕ್ತಾಯದ ಬಳಿಕ ಸಂಸತ್‌ ಹೊರಗಡೆ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು, ರಾಷ್ಟ್ರಪತಿ ತಮ್ಮ ದೀರ್ಘ ಸಾಂಪ್ರದಾಯಿಕ ಭಾಷಣದ ನಂತರ ಸುಸ್ತಾಗಿದ್ದರು ಎಂದು ಹೇಳಿದರು.

ಈ ವೇಳೆ ಸೋನಿಯಾ ಗಾಂಧಿ, Poor Lady, ಭಾಷಣ ಮುಗಿಸುವ ಹೊತ್ತಿಗೆ ರಾಷ್ಟ್ರಪತಿಗಳು ಸುಸ್ತಾಗಿ ಹೋಗಿದ್ದರು. ಅವರಿಗೆ ಮಾತನಾಡಲು ಕಷ್ಟ ಆಗುತ್ತಿತ್ತು ಎಂದು ಹೇಳಿದರು. ಈ ವೇಳೆ ರಾಹುಲ್‌ ಗಾಂಧಿ ಭಾಷಣ ತುಂಬಾ ಬೋರ್‌ ಆಗಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದು, ಈ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದೆ.

ಸೋನಿಯಾ ಗಾಂಧಿ ದ್ರೌಪತಿ ಮುರ್ಮು ಅವರನ್ನು Poor Lady ಎಂದು ಕರೆದಿದ್ದಕ್ಕೆ ಬಿಜೆಪಿ ನಾಯಕರು ಕಾಂಗ್ರೆಸ್‌ ವಿರುದ್ಧ ಆಕ್ರೋಶಗಳನ್ನು ವ್ಯಕ್ತಪಡಿಸುತ್ತಲೇ ಇದ್ದಾರೆ. ಇನ್ನು ಪತ್ರಿಕಾಗೋಷ್ಠಿಯಲ್ಲಿ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಉಪಸ್ಥಿತರಿದ್ದರು.

ಬಿಜೆಪಿ ನಾಯಕರು ರಾಷ್ಟ್ರಪತಿ ದ್ರೌಪದಿ ಮುರ್ಮು ಬಗ್ಗೆ ಈ ರೀತಿಯಾಗಿ ಮಾತನಾಡಿದ ಕಾಂಗ್ರೆಸ್‌ ನಾಯಕರು ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ. ಇನ್ನು ರಾಷ್ಟ್ರಪತಿ ಭವನವು ರಾಷ್ಟ್ರಪತಿ ಅವರು ಯಾವುದೇ ಹಂತದಲ್ಲಿ ಸುಸ್ತಾಗಿರಲಿಲ್ಲ. ವಾಸ್ತವವಾಗಿ, ಅವರು ಅಲ್ಪಸಂಖ್ಯಾತ ಸಮುದಾಯಗಳು, ಮಹಿಳೆಯರು ಮತ್ತು ರೈತರ ಬಗ್ಗೆ ಮಾತನಾಡುವಾಗ ಎಂದಿಗೂ ಸುಸ್ತಾಗುವುದಿಲ್ಲ ಎಂದು ತಿಳಿಸುವ ಮೂಲಕ ಸೋನಿಯಾಗಾಂಧಿ ಮಾಡಿದ ಆರೋಪಗಳನ್ನು ತಳ್ಳಿಹಾಕಿದೆ.

"ಹಿಂದಿ ಮುಂತಾದ ಭಾರತೀಯ ಭಾಷೆಗಳ ಸಂಭಾಷಣೆ ಮತ್ತು ಶೈಲಿಯೊಂದಿಗೆ ಪರಿಚಿತರಾಗಿಲ್ಲದಿರಬಹುದು. ಆದ್ದರಿಂದ ತಪ್ಪು ಅಭಿಪ್ರಾಯವನ್ನು ಸೃಷ್ಟಿಸಿದ್ದಾರೆ. ಯಾವುದೇ ಸಂದರ್ಭದಲ್ಲಿಯೂ ಅಂತಹ ಹೇಳಿಕೆಗಳನ್ನು ನೀಡುವುದು ಸರಿಯಲ್ಲ. ಜೊತೆಗೆ ಕಾಂಗ್ರೆಸ್ ಪಕ್ಷದ ಕೆಲವು ಪ್ರಮುಖ ನಾಯಕರು ಉನ್ನತ ಹುದ್ದೆಯ ಘನತೆಗೆ ಹಾನಿ ಉಂಟುಮಾಡುವ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ರಾಷ್ಟ್ರಪತಿ ಭವನ ತಿಳಿಸಿದೆ.

ಸಂಸದೀಯ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ಅವರು ಮಾತನಾಡಿ, ರಾಷ್ಟ್ರಪತಿ ಮುರ್ಮು ಅವರು ಆದಿವಾಸಿ ಮಹಿಳೆಯಾಗಿರಬಹುದು. ಆದರೆ, ಅವರು ದುರ್ಬಲರಲ್ಲ ಮತ್ತು ದೇಶಕ್ಕಾಗಿ ತುಂಬಾ ಶ್ರಮವಹಿಸಿ ಕೆಲಸ ಮಾಡಿದ್ದಾರೆ ಎಂದು ಹೇಳಿದರು.

ಸೋನಿಯಾ ಗಾಂಧಿ ಮತ್ತು ಇತರ ವಿರೋಧ ಪಕ್ಷದ ನಾಯಕರು ಮಾಡಿದ ಹೇಳಿಕೆಗಳನ್ನು ನಾನು ಖಂಡಿಸುತ್ತೇನೆ. ನಮ್ಮ ರಾಷ್ಟ್ರಪತಿ, ಒಬ್ಬ ಆದಿವಾಸಿ ಮಹಿಳೆ, ದುರ್ಬಲರಲ್ಲ. ದ್ರೌಪದಿ ಮುರ್ಮು ಅವರು ದೇಶ ಮತ್ತು ಸಮಾಜಕ್ಕಾಗಿ ವ್ಯಾಪಕವಾಗಿ ಕೆಲಸ ಮಾಡಿದ್ದಾರೆ, ಅವರು ಅದನ್ನು ಕಲ್ಪಿಸಲೂ ಸಾಧ್ಯವಿಲ್ಲ. ಆದ್ದರಿಂದ ಕಾಂಗ್ರೆಸ್‌ ನಾಯಕರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಕ್ಷಮೆ ಕೇಳಬೇಕು ಎಂದು ಹೇಳಿದರು.

ರಾಷ್ಟ್ರಪತಿ ಮುರ್ಮು ಅವರು ಭಾಷಣದಲ್ಲಿ, ಮಹಾಮಾರಿ ಸರ್ಕಾರವು ಕೋವಿಡ್-19 ಮತ್ತು ಜಾಗತಿಕ ಸಂಘರ್ಷಗಳಂತಹ ಸವಾಲುಗಳ ಹೊರತಾಗಿಯೂ ಪಕ್ಷಾಘಾತದಿಂದ ಆರ್ಥಿಕತೆಯನ್ನು ಎತ್ತುವ ಕಡೆಗೆ ಕೆಲಸ ಮಾಡಿದೆ ಎಂದು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+