ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು, ಆಸ್ಪತ್ರೆಗೆ ದಾಖಲು... Sonia Gandhi
ಕಾಂಗ್ರೆಸ್ ಪಕ್ಷ ಸಂಕಷ್ಟದಲ್ಲಿ ಇದ್ದ ಸಮಯದಲ್ಲಿ, ಇನ್ನೇನು ಕಾಂಗ್ರೆಸ್ ಮತ್ತೆ ಗೆಲ್ಲುವುದಿಲ್ಲ ಎಂಬ ಪರಿಸ್ಥಿತಿ ಎದುರಾದ ಸಮಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೊಸ ಹುರುಪು ನೀಡಿದ್ದು ಸೋನಿಯಾ ಗಾಂಧಿ. ಹೀಗೆ 2004 ಯುಪಿಎ ಸರ್ಕಾರವನ್ನು ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾಗಿ, 2009 ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷವೇ ಸರ್ಕಾರ ರಚಿಸುವಂತೆ ಮಾಡಿದ್ದ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಕೆಲವು ದಿನಗಳ ಹಿಂದಷ್ಟೇ ಆಸ್ಪತ್ರೆಗೆ ದಾಖಲು ಆಗಿ, ಮತ್ತೆ ಡಿಸ್ಚಾರ್ಜ್ ಆಗಿದ್ದ ಸೋನಿಯಾ ಗಾಂಧಿ ಅವರು ಇದೀಗ ದಿಢೀರ್ ಮತ್ತೆ ಆಸ್ಪತ್ರೆ ಸೇರಿದ್ದಾರೆ.
ಹೌದು, ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಆಗಿರುವ ಕಾರಣಕ್ಕೆ ಅವರನ್ನು ಆ ತಕ್ಷಣವೇ ನವದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾಂಗ್ರೆಸ್ ಪಕ್ಷದ ಸಂಸದೀಯ ಪಕ್ಷದ ಅಧ್ಯಕ್ಷೆ ಕೂಡ ಆಗಿರುವ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಪದೇ ಪದೇ ಏರುಪೇರು ಉಂಟಾಗುತ್ತಿದ್ದು, ಕಳೆದ ವಾರ ಅಧಿಕ ರಕ್ತದೊತ್ತಡ ಕಾರಣ ಶಿಮ್ಲಾದಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡು ಡಿಸ್ಚಾರ್ಜ್ ಅಗಿದ್ದರು. ಹೀಗಿದ್ದಾಗಲೇ ಇಂದು ದಿಢಿರ್ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ನವದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಾಗಾದ್ರೆ ಸೋನಿಯಾ ಗಾಂಧಿ ಅವರಿಗೆ ಏನಾಯ್ತು?

ಸೋನಿಯಾ ಗಾಂಧಿ ಅವರಿಗೆ 78 ವರ್ಷ
1946 ಡಿಸೆಂಬರ್ 9 ಸೋಮವಾರ ಜನಸಿದ್ದ ಸೋನಿಯಾ ಗಾಂಧಿ ಅವರಿಗೆ ಈಗ 78 ವರ್ಷ ವಯಸ್ಸು. ಹೀಗಾಗಿ ಅವರು ವಯೋ ಸಹಜ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದು, ಅದಕ್ಕೆ ನಿಯಮಿತ ಚಿಕಿತ್ಸೆ ಕೂಡ ಪಡೆಯುತ್ತಿದ್ದಾರೆ. ಹೀಗಿದ್ದಾಗಲೇ ಭಾನುವಾರ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರು ಆಗಿದೆ, ಹೊಟ್ಟೆಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಯನ್ನ ಅವರು ಈಗ ಎದುರಿಸುತ್ತಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಈ ಸುದ್ದಿ ಇದೀಗ ಸಂಚಲನ ಸೃಷ್ಟಿ ಮಾಡಿದ್ದು, ಬೆಂಬಲಿಗರು ಹಾಗೂ ಕಾಂಗ್ರೆಸ್ ವರಿಷ್ಠರು ಆಸ್ಪತ್ರೆಗೆ ದೌಡಾಯಿಸಿ ಆರೋಗ್ಯ ವಿಚಾರಿಸುತ್ತಿದ್ದಾರೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications