ಎಕ್ಸಿಟ್ ಪೋಲ್ ಬಳಿಕ ಸೋನಿಯಾ ಗಾಂಧಿ ಮೊದಲ ಪ್ರತಿಕ್ರಿಯೆ? ಹೇಳಿದ್ದೇನು?
18ನೇ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಮುಗಿದಿದೆ. ಚುನಾವಣೋತ್ತರ ಸಮೀಕ್ಷೆಗಳು ಸಹ ಹೊರ ಬಿದ್ದಿವೆ. ಈ ಬಗ್ಗೆ ಹಲವು ಪಕ್ಷಗಳು ಮುಖಂಡರು ತಮ್ಮ ತಮ್ಮ ಅಭಿಪ್ರಾಯವನ್ನು ನೀಡಿದ್ದಾರೆ. ಆದರೆ ಈ ಬಗ್ಗೆ ಸೋನಿಯಾ ಗಾಂಧಿ ಮಾತ್ರ ಮೌನಕ್ಕೆ ಶರಣಾಗಿದ್ದಾರು. ಅವರು ಸಹ ಸೋಮವಾರ ಈ ಬಗ್ಗೆ ತಮ್ಮ ಮಾತುಗಳನ್ನು ತಿಳಿಸಿದ್ದಾರೆ.
ಹಲವು ಸಂಸ್ಥೆಗಳು ನಡೆಸಿರುವ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಹಿನ್ನಡೆ ಅನುಭಸಿದೆ ಎಂದು ತಿಳಿಸಿವೆ. ಅಲ್ಲದೆ ಬಿಜೆಪಿ ಹ್ಯಾಟ್ರಿಕ್ ಸಾಧನೆ ಮಾಡುವುದು ಕನ್ಫರ್ಮ್ ಎಂದು ತಿಳಿಸಿವೆ. ಬಿಜೆಪಿ 400 ಗಡಿ ಮುಟ್ಟುವುದಿಲ್ಲ ಎಂದು ಸಮೀಕ್ಷೆಗಳು ತಿಳಿಸಿವೆ. ಈ ಬಗ್ಗೆ ಪರ ಹಾಗೂ ವಿರೋಧ ಚರ್ಚೆಗಳು ಆರಂಭವಾಗಿವೆ. ಈ ನಡುವೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸಹ ತಮ್ಮ ಮನದಾಳದ ಮಾತನ್ನು ಹೇಳಿದ್ದಾರೆ.

ಸೋನಿಯಾ ಹೇಳಿದ್ದೇನು?
ಈಗ ಎಕ್ಸಿಟ್ ಪೋಲ್ ರಿಸಲ್ಟ್ ಮಾತ್ರ ಬಂದಿದೆ. ಇನ್ನು ನಿಶ್ಚಿತ ಫಲಿತಾಂಶ ಬರುವುದು ಮಾತ್ರ ಬಾಕಿ ಇದೆ ಎಂದು ಸೋನಿಯಾ ಗಾಂಧಿ ತಿಳಿಸಿದ್ದರು.
ವಾಸ್ತವವಾಗಿ, ಸಾರ್ವಜನಿಕ ಎಕ್ಸಿಟ್ ಪೋಲ್ನಲ್ಲಿ 295 ಸ್ಥಾನಗಳನ್ನು ಪಡೆಯಲಿದೆ ಎಂದು ವಿರೋಧ ಪಕ್ಷದ ಮೈತ್ರಿಕೂಟ 'INDIA' ಹೇಳಿಕೊಳ್ಳುತ್ತಿದೆ. ಇತ್ತೀಚೆಗಷ್ಟೇ ವಿಪಕ್ಷಗಳ ಮೈತ್ರಿಕೂಟದ 'INDIA' ಸಭೆಯ ನಂತರವೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ವಿಷಯವನ್ನು ಪುನರುಚ್ಚರಿಸಿದ್ದಾರೆ.
ಇತ್ತೀಚಿಗಷ್ಟೇ ಎಕ್ಸಿಟ್ ಪೋಲ್ ಆರಂಭಕ್ಕೂ ಮುನ್ನ INDIA ಮೈತ್ರಿ ಕೂಟದ ಸಭೆ ನಡೆದಿತ್ತು. ಈ ಸಭೆಯಲ್ಲಿ INDIA ಮೈತ್ರಿ ಕೂಟ ಅಧಿಕಾರಕ್ಕೆ ಬರುವ ವಿಶ್ವಾಸವನ್ನು ಹೊಂದಲಾಗಿದೆ. ಅಲ್ಲದೆ ಸಭೆ ಬಳಿಕ ಮಲ್ಲಿಕಾರ್ಜುನ್ ಖರ್ಗೆ ತಮ್ಮ ಮೈತ್ರಿ ಕೂಟ 295 ಸ್ಥಾನಗಳಿಗಿಂತಲೂ ಹೆಚ್ಚಿನ ಸ್ಥಾನವನ್ನು ಗೆಲ್ಲ ಬಹುದು ಎಂದು ತಿಳಿಸಿತ್ತು.

ಬಹುತೇಕ ಎಕ್ಸಿಟ್ ಪೋಲ್ಗಳು ಬಿಜೆಪಿ ನೇತೃತ್ವದ ಎನ್ಡಿಎ ಮತ್ತೆ ಅಧಿಕಾರಕ್ಕೆ ಬರಬಹುದು ಎಂದು ಹೇಳಿವೆ. ವಿರೋಧ ಪಕ್ಷಗಳ ಒಕ್ಕೂಟ 'INDIA' ಇದನ್ನು ಅಲ್ಲಗಳೆಯುತ್ತಿದೆ.
ಜೂನ್ 4 ರಂದು ಫಲಿತಾಂಶ
ದೇಶದಲ್ಲಿ ಈಗಾಗಲೇ ಏಳು ಹಂತದಲ್ಲಿ ಚುನಾವಣೆಗಳು ಮುಗಿದಿವೆ. ಕರ್ನಾಟಕದಲ್ಲೂ ಎರಡೂ ಹಂತದಲ್ಲಿ ಚುನಾವಣೆಗಳು ಮುಗಿದಿದ್ದು, ರಾಜ್ಯದ ಜನರು ಯಾವ ಪಕ್ಷದ ಪರ ಒಲವು ಹೊಂದಿದ್ದಾರೆ ಎಂಬುದನ್ನು ನೋಡಲು ಕ್ಷಣ ಗಣನೆ ಆರಂಭವಾಗಿದೆ. ದೇಶದ 543 ಕ್ಷೇತ್ರದ ಚುನಾವಣಾ ಫಲಿತಾಂಶ ಜೂನ್ 4 ರಂದು ಹೊರ ಬೀಳಲಿದೆ.
ಕರ್ನಾಟಕದಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಲಿದೆ ಎಂದು ಎಕ್ಸಿಟ್ ಪೋಲ್ಗಳು ಭವಿಷ್ಯ ನುಡಿದಿವೆ. ಇನ್ನು ಕಾಂಗ್ರೆಸ್ ಡಬಲ್ ಡಿಜಿಟ್ ಸಾಧನೆಯನ್ನು ಸಹ ಮಾಡುವುದಿಲ್ಲ ಎಂದು ಭವಿಷ್ಯ ನುಡಿದಿವೆ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್












Click it and Unblock the Notifications