ಸಂಸತ್ ಅಧಿವೇಶನಕ್ಕೂ ಮುನ್ನ ಕಾಂಗ್ರೆಸ್ ಸಮಿತಿ ಬದಲಾವಣೆ!
ನವದೆಹಲಿ, ಜುಲೈ 18: ಮುಂಗಾರು ಅಧಿವೇಶನಕ್ಕೂ ಮುನ್ನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವಾರು ಕಾಂಗ್ರೆಸ್ ಪಕ್ಷದ ಸಂಸದೀಯ ಸಮಿತಿಯನ್ನು ಬದಲಾಯಿಸಿದ್ದಾರೆ. ಅಧೀರ್ ರಂಜನ್ ಚೌಧುರಿ ಲೋಕಸಭೆ ವಿಪಕ್ಷ ನಾಯಕರಾಗಿ ಮುಂದುವರೆಯಲಿದ್ದಾರೆ.
ಕಾಂಗ್ರೆಸ್ ಸಂಸದೀಯ ಸಮಿತಿಯನ್ನು ಪುನರ್ ರಚನೆಯನ್ನು ಮಾಡಿರುವುದಾಗಿ ಸೋನಿಯಾ ಗಾಂಧಿ ಅವರ ಸಹಿಯಿರುವ ಪತ್ರವನ್ನು ಪ್ರಕಟಿಸಲಾಗಿದೆ.
ಲೋಕಸಭೆ ಸಮಿತಿಯಲ್ಲಿ ಅಧೀರ್ ರಂಜನ್ ಚೌಧರಿ, ಗೌರವ್ ಗೊಗಾಯಿ, ಮನೀಶ್ ತಿವಾರಿ ,ಕೆ ಸುರೇಶ್, ಮಾಣಿಕಂ ಠಾಗೋರ್, ಶಶಿ ತರೂರ್ ಹಾಗೂ ರವನೀರ್ ಬಿಟ್ಟು ಇದ್ದಾರೆ.
ರಾಜ್ಯಸಭೆ ಸಮಿತಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಆನಂದ್ ಶರ್ಮ, ಜೈರಾಮ್ ರಮೇಶ್, ಅಂಬಿಕಾ ಸೋನಿ, ದಿಗ್ವಿಜಯ ಸಿಂಗ್, ಪಿ ಚಿದಂಬರಂ ಹಾಗೂ ಕೆ.ಸಿ ವೇಣುಗೋಪಾಲ್ ಇದ್ದಾರೆ.
ಉಭಯ ಸದನ ಸಮಿತಿಯ ಜಂಟಿ ಸಭೆಯನ್ನು ಕರೆಯಲು ಖರ್ಗೆ ಅವರಿಗೆ ಅಧಿಕಾರ ನೀಡಲಾಗಿದೆ. ಮುಂಗಾರು ಅಧಿವೇಶನದಲ್ಲಿ ಹಣದುಬ್ಬರ, ಬೆಲೆ ಏರಿಕೆ, ಕೋವಿಡ್ 19 ನಿರ್ವಹಣೆ, ಚೀನಾ ಗಡಿ ವಿವಾದಗಳ ಬಗ್ಗೆ ದನಿಯೆತ್ತಲು ಕಾಂಗ್ರೆಸ್ ನಿರ್ಧರಿಸಿದೆ.

ತಂತ್ರಗಾರಿಕೆಯನ್ನು ರೂಪಿಸಲು ರಚಿಸಲಾಗಿರುವ ಸಮಿತಿಯ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ಅವರು ಬುಧವಾರದಂದು ಸಭೆ ಸೇರಿ ರಫೆಲ್ ವಿವಾದ, ತನಿಖೆ ಬಗ್ಗೆ ಫ್ರಾನ್ಸ್ ದೇಶದಲ್ಲಿ ನಡೆದಿರುವ ಬೆಳವಣಿಗೆಗಳ ಬಗ್ಗೆ ಕಾಂಗ್ರೆಸ್ ತೆಗೆದುಕೊಳ್ಳುವ ನಡೆ ಬಗ್ಗೆ ಚರ್ಚಿಸಲಾಯಿತು.
''ಹಣದುಬ್ಬರ, ಬೆಲೆ ಏರಿಕೆ ಬಗ್ಗೆ ಸಂಸತ್ತಿನಲ್ಲಿ ದನಿಯೆತ್ತಲು ಕಾಂಗ್ರೆಸ್ ಮುಂದಾಗಿದೆ, ಮುಂಬರುವ ಚುನಾವಣೆಯಲ್ಲಿ ಇದೇ ವಿಷಯಗಳನ್ನು ಚುನಾವಣೆ ವಿಷಯವಾಗಿ ಮುಂದಿಡಲು ಪಕ್ಷ ನಿರ್ಧರಿಸಿದೆ'' ಎಂದು ಕಾಂಗ್ರೆಸ್ ಮುಖಂಡ ಪಿ ಚಿದಂಬರಂ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಪಕ್ಷದ ಕಾರ್ಯವೈಖರಿಯ ಬಗ್ಗೆ ಬಹಿರಂಗವಾಗಿಯೇ ಧ್ವನಿ ಎತ್ತಿದ್ದ G-23 (ಸೋನಿಯಾ ಗಾಂಧಿಗೆ ಪತ್ರ ಬರೆದು ಸಹಿ ಹಾಕಿದ್ದ 23 ಮುಖಂಡರು) ನಾಯಕರೊಬ್ಬರನ್ನು ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರನ್ನಾಗಿ ಮಾಡಲು ನಿರ್ಧರಿಸಿದ್ದಾರೆ. ಆ ಮೂಲಕ, ಈ ಮುಖಂಡರನ್ನು ಒಗ್ಗೂಡಿಸುವ ಕೆಲಸಕ್ಕೆ ಸೋನಿಯಾ ಮುಂದಾಗಿದ್ದಾರೆ.
ಲೋಕಸಭೆಯ ಮುಂಗಾರು ಅಧಿವೇಶನ ಇದೇ ಜುಲೈ 19ರಿಂದ ಆರಂಭವಾಗಲಿದೆ. ಅಧಿಕೃತ ವಿರೋಧ ಪಕ್ಷದ ನಾಯಕನ ಪಟ್ಟ ಸಿಗಲು ಕಾಂಗ್ರೆಸ್ಸಿಗೆ ಸಂಖ್ಯಾಬಲದ ಕೊರತೆಯಿದೆ. ಆದರೂ, ವಿರೋಧ ಪಕ್ಷದ ಸಾಲಿನಲ್ಲಿ ದೊಡ್ಡ ಪಕ್ಷವಾಗಿರುವುದರಿಂದ, ಈ ಹುದ್ದೆ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ನಾಲ್ವರ ಹೆಸರನ್ನು ಸೋನಿಯಾ ಗಾಂಧಿ ಪರಿಶೀಲಿಸುತ್ತಿದ್ದಾರೆ. (ಐಎಎನ್ಎಸ್)
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications