ಕೇವಲ ಹಣ ನೀಡಿದರೆ ಪೆಟ್ರೋಲ್ ಸಿಗದು!
ನವದೆಹಲಿ, ಆ, 21 : ಇಷ್ಟು ದಿನ ಕೇವಲ ಹಣ ನೀಡಿದರೇ ಸಾಕು ಮನಸಿಗೆ ಬಂದಷ್ಟು ಪೆಟ್ರೋಲ್ ತುಂಬಿಸಿಕೊಂಡು ಕಂಡ ಕಂಡಲ್ಲಿ ರೈಡ್ ಮಾಡಬಹುದಿತ್ತು. ಆದರೆ ದೆಹಲಿ ಸರ್ಕಾರ ಇದಕ್ಕೆಲ್ಲ ಬ್ರೇಕ್ ಹಾಕಲು ಮುಂದಾಗಿದೆ. ಪೆಟ್ರೋಲ್ ಅಥವಾ ಡಿಸೇಲ್ ತುಂಬಿಸಲು ನಿರ್ದಿಷ್ಟ ಪ್ರಮಾಣ ಪತ್ರ ಹಾಜರುಪಡಿಸಬೇಕು ಎಂದು ತಿಳಿಸಿದೆ.
ಚಾಲನಾ ಪರವಾನಗಿ, ವಾಹನದ ಪ್ರಮಾಣ ಪತ್ರದ ಜತೆ ಈ ಮಾಲಿನ್ಯ ನಿಯಂತ್ರಣ ಪ್ರಮಾಣ ಪತ್ರವೂ ಕಡ್ಡಾಯವಾಗಲಿದೆ. ಹೌದು... ಹೆಚ್ಚುತ್ತಿರುವ ವಾಯುಮಾಲಿನ್ಯ ತಡೆಗೆ ದೆಹಲಿ ಸರ್ಕಾರ ಹೊಸ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ. ವಾಹನ ಮಾಲೀಕರು ಇನ್ನು ಮುಂದೆ ಬಂಕ್ಗಳಲ್ಲಿ ಇಂಧನ ತುಂಬಿಸಲು ಪ್ರಮಾಣ ಪತ್ರ ಹಾಜರುಪಡಿಸಬೇಕಾಗುತ್ತದೆ.

ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಎಸ್.ಕೆ.ಶ್ರೀವಾತ್ಸವ ನೇತೃತ್ವದಲ್ಲಿ ನಡೆದ ಸಭೆ ಹೆಚ್ಚುತ್ತಿರುವ ವಾಯುಮಾಲಿನ್ಯದ ಕುರಿತು ಗಹನ ಚರ್ಚೆ ನಡೆಸಿತು.
ತಜ್ಞರ ಸಮಿತಿಯೊಂದು ವಾಹನಗಳನ್ನು ತಪಾಸಣೆ ಮಾಡಲಿದ್ದು ಮಾಲಿನ್ಯದ ಪ್ರಮಾಣ ನಿರ್ದಿಷ್ಟಪಡಿಸಲಿದೆ. ಈ ಸಮಿತಿ ನೀಡಿದ ಪ್ರಮಾಣ ಪತ್ರ ಉಳ್ಳವರು ಮಾತ್ರ ಇಂಧನ ತುಂಬಿಸಿಕೊಳ್ಳಲು ಅರ್ಹರಾಗಿರುತ್ತಾರೆ ಎಂದು ಸಭೆ ತೀರ್ಮಾನ ತೆಗೆದುಕೊಂಡಿದೆ.
ಈ ಅಂಶಗಳು ಜಾರಿಯಾಗಲು ಒಂದೆರಡು ತಿಂಗಳುಗಳು ಹಿಡಿಯಬಹುದು. ಮೊದಲು ದೆಹಲಿ ನಾಗರಿಕರಲ್ಲಿ ಜಾಗೃತಿ ಮೂಡಿಸಬೇಕಾಗಿದೆ. ಕೆಲವು ಜನರು ಸ್ವಯಂಪ್ರೇರಣೆಯಿಂದಲೇ ತಮ್ಮ ವಾಹನಗಳನ್ನು ನಿಯಮಿತ ತಪಾಸಣೆಗೆ ಒಳಪಡಿಸಲಿದ್ದಾರೆ. ಕೆಲ ಪೆಟ್ರೊಲ್ ಬಂಕ್ಗಳಲ್ಲಿ ಮಾಲಿನ್ಯ ನಿಯಂತ್ರಣ ಪ್ರಮಾಣ ಪತ್ರ ಪಡೆಯಬಹುದಾಗಿದೆ ಎಂದು ಶ್ರೀವಾತ್ಸವ ತಿಳಿಸಿದರು.
ಯೋಜನೆ ಕಾರ್ಯಗತವಾದ ನಂತರ ಇಂಧನ ತುಂಬಿಸಲು ನಿರ್ದಿಷ್ಟಪಡಿಸಿದ ಮಾಲಿನ್ಯ ನಿಯಂತ್ರಣ ಪ್ರಮಾಣ ಪತ್ರ ಕಡ್ಡಾಯ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ!












Click it and Unblock the Notifications