ವಿಮಾನಕ್ಕೆ ಗಗನಸಖಿಯಾದರೆ, ರೈಲಿನ ಸಖಿಗೆ ಹೆಸರೇನು?
ನವದೆಹಲಿ, ಫೆ. 21: ವಿಮಾನಯಾನದಲ್ಲಿ ಗಗನಸಖಿಯರಿರುವಂತೆ ಪ್ರಯಾಣಿಕರ ಸೌಲಭ್ಯ ನೋಡಿಕೊಳ್ಳಲು ಎಕ್ಸ್ ಪ್ರೆಸ್ ರೈಲುಗಳಲ್ಲಿ ಸಖಿಯನ್ನು ನೇಮಿಸಲು ಭಾರತೀಯ ರೈಲ್ವೆ ನಿರ್ಧರಿಸಿದೆ. ವಿಷಯ ಕೇಳಿ ಥ್ರಿಲ್ ಆದ ಜನತೆ, ರೈಲು ಸಖಿಗೆ ಏನು ಕರೆಯಬಹುದು ಎಂದು ಯೋಚಿಸುತ್ತಿದ್ದಾರೆ.
ದೆಹಲಿ- ಆಗ್ರಾ ನಡುವೆ ಗಂಟೆಗೆ 160 ಕಿ,ಮೀ ಪ್ರತಿ ಗಂಟೆ ವೇಗದಲ್ಲಿ ಸಂಚರಿಸುವ ಗತಿಮಾನ್ ಎಕ್ಸ್ಪ್ರೆಸ್ ರೈಲಿನಲ್ಲಿ ಕಾರ್ಯನಿರ್ವಹಿಸಲು 'ಹೋಸ್ಟೆಸ್' ರನ್ನು ಶೀಘ್ರವೇ ನೇಮಿಸಿಕೊಳ್ಳುವ ಪ್ರಕ್ರಿಯೆ ಈಗಾಗಲೇ ಆರಂಭವಾಗಲಿದೆ. ಫೆ.25ರಂದು ಮಂಡನೆಯಾಗಲಿರುವ ರೈಲ್ವೆ ಬಜೆಟ್ನಲ್ಲಿ ಸಚಿವ ಸುರೇಶ್ಪ್ರಭು ಇದನ್ನು ಘೋಷಿಸಲಿದ್ದಾರೆ. [ಚುಕು ಬುಕು ಸಖಿ, ರೈಲು ಸಖಿ, ಆಹಾ! ಎಷ್ಟೊಂದು ಹೆಸರು]
ಈ ಏಕ್ಸ್ ಪ್ರೆಸ್ ರೈಲಿನಲ್ಲಿ ಟಿವಿ ಸೇವೆ, ಅಪಾಯ ಸೂಚನೆ ವ್ಯವಸ್ಥೆ, ತುರ್ತು ಪರಿಸ್ಥಿತಿಯಲ್ಲಿ ಬ್ರೇಕಿಂಗ್ ವ್ಯವಸ್ಥೆ, ಜಿಪಿಎಸ್ ಆಧಾರಿತ ಪ್ರಯಾಣಿಕರ ಮಾಹಿತಿ ವ್ಯವಸ್ಥೆ,ಕೇಟರಿಂಗ್ ವ್ಯವಸ್ಥೆ ಸೇರಿದಂತೆ ಹಲವು ಸೌಲಭ್ಯ ಗಳು ಇರಲಿದೆ.
ಒಂದು ತಾಸಿಗೆ 160 ಕಿ.ಮೀ. ಓಡುವ 5,4000 ಎಚ್ ಪಿ ಇಂಜಿನ್ ವಾಹನದಲ್ಲಿ 12 ಕೋಚುಗಳಿರುತ್ತದೆ. ಶತಾಬ್ದಿ ಏಕ್ಸ್ ಪ್ರೆಸ್ 200 ಕಿಲೋ ಮೀಟರ್ ಅಂತರವನ್ನು 120 ನಿಮಿಷಗಳಲ್ಲಿ ಕ್ರಮಿಸಿದರೆ, ಗತಿಮಾನ್ ಎಕ್ಸ್ ಪ್ರೆಸ್ 105 ನಿಮಿಷಗಳಲ್ಲಿ ಕ್ರಮಿಸುವ ಸಾಧ್ಯತೆಯಿದೆ. ಗಗನಸಖಿರಂತೆ ರೈಲಿನ ಸಖಿಯರ ಬಗ್ಗೆಇನ್ನಷ್ಟು ವಿವರ ಮುಂದಿದೆ ಓದಿ...

9 ರೈಲು ಮಾರ್ಗಗಳಲ್ಲಿ ರೈಲು ಸಖಿ ಸೌಲಭ್ಯ
ಕಾನ್ಪುರ-ದೆಹಲಿ, ಚಂಡೀಗಢ-ದೆಹಲಿ, ಹೈದರಾಬಾದ್-ಚೆನ್ನೈ, ನಾಗಪುರ್-ಬಿಲಾಸ್ಪುರ್, ಗೋವಾ-ಮುಂಬೈ, ನಾಗಪುರ ಸಿಕಂದರಾಬಾದ್ ಮಾರ್ಗಗಳಲ್ಲಿ ಇನ್ನೂ 9 ಇಂಥ ರೈಲುಗಳನ್ನು ಓಡಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.

ಪ್ರಯಾಣ ದರ ಶತಾಬ್ದಿ ಎಕ್ಸ್ಪ್ರೆಸ್ ಗಿಂತ ಹೆಚ್ಚು
ಪ್ರಯಾಣದರ ಶತಾಬ್ದಿ ಎಕ್ಸ್ಪ್ರೆಸ್ ದರಕ್ಕಿಂತ ಶೇ.25ರಷ್ಟು ಹೆಚ್ಚಿರುತ್ತದೆ. ಪೂರ್ತಿ ಎಸಿ ಚೇರ್ ಕ್ಲಾಸ್ ಗತಿಮಾನ್ ಎಕ್ಸ್ ಪ್ರೆಸ್ ಪ್ರಯಾಣ ದರ 690ರು ಆಗಲಿದೆ. ಎಕ್ಸಿಕ್ಯೂಟಿವ್ ಕ್ಲಾಸ್ ನಲಿ ಪ್ರಯಾಣಿಸಲು 1,365 ರು ತೆರಬೇಕಾಗುತ್ತದೆ. ದೆಹಲಿ-ಅಗ್ರಾ ಶತಾಬ್ದಿ ಎಕ್ಸ್ ಪ್ರೆಸ್ ಚೇರ್ ಕ್ಲಾಸ್ ಬೆಲೆ 540 ರು ಇದ್ದರೆ, ಎಕ್ಸಿ ಕ್ಯೂಟಿವ್ ಕ್ಲಾಸ್ ದರ 1,040 ರು ಮಾತ್ರ ಇದೆ.

ದೇಶಿ, ವಿದೇಶಿ ಆಹಾರ ಸೌಲಭ್ಯ ಇರುತ್ತದೆ
ಗೋ ಉಪ್ಪಿಟ್ಟು (ಉಪ್ಮಾ) ಮಿನಿದೋಸೆ, ಕಾಂಜಿವರಂ ಇಡ್ಲಿ, ಹೆಚ್ಚಿದ (ತಾಜಾ) ಹಣ್ಣುಗಳು, ಆಲೂಕುಲ್ಟ, ಡ್ರೈಫ್ರೂಟ್, ಚಿಕನ್ ರೋಲ್, ಸ್ಯಾನಿಷ್ ಎಗ್ ವೈಟ್ ಆಮ್ಲೆಟ್ ಸೇರಿದಂತೆ ಇನ್ನೂ ಹಲವು ದೇಶೀ, ವಿದೇಶಿ ಆಹಾರ ಲಭ್ಯವಿರುತ್ತದೆ..
ತೋರ ಮೈಯ ರೈಲು ಸಖಿಯರನ್ನು ನೇಮಿಸುತ್ತಾರಾ?
ಈ ಹಿಂದೆ ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸ್ಥೂಲಕಾಯ ಗಗನಸಖಿಯರನ್ನು ವಿಮಾನದಿಂದ ಕೆಳಗಿಳಿಸಿತ್ತು. ರೈಲು ಸಖಿಯರ ನೇಮಕಾತಿ ವಿವರ ಇನ್ನೂ ಲಭ್ಯವಾಗಿಲ್ಲ. ಅವರ ಉಡುಗೆ ತೊಡುಗೆ, ಕಾರ್ಯ ನಿರ್ವಹಿಸುವ ಅವಧಿ ಬಗ್ಗೆ ವಿವರ ಸಿಗಬೇಕಿದೆ.
-
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಇರಾನ್ನ ವಾಯುನೆಲೆ, ಶಸ್ತ್ರಾಸ್ತ್ರ ಡಿಪೋ ಮೇಲೆ ಯುಎಸ್ ಜಂಟಿ ದಾಳಿ, ರಷ್ಯಾ ಬೆಂಬಲ? ಇಲ್ಲಿವೆ ಪ್ರಮುಖಾಂಶಗಳು -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications