Soumya Reddy in Tirupati:ಸೌಮ್ಯ ರೆಡ್ಡಿ ಫೋಟೋ ಹಿಡಿದು ತಿರುಪತಿ ದೇವಸ್ಥಾನದ ಮುಂದೆ ಫೋಸ್ ಕೊಟ್ಟ ಭಕ್ತ!
ಕರ್ನಾಟಕ ಲೋಕಸಭಾ ಚುನಾವಣೆಯ ಪ್ರಚಾರ ತಿರುಪತಿ ತಿಮ್ಮಪ್ಪನ ದೇವಸ್ಥಾನದ ಮುಂದೆ ನಡೆಯುತ್ತಿರುವಂತೆ ಕಂಡು ಬಂದಿದೆ. ತಿರುಪತಿ ತಿರುಮಲ ದೇವಸ್ಥಾನದ ಮುಂದೆ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಅವರ ಫೋಟೋ ಹಿಡಿದಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ತಿರುಪತಿ ದೇವಸ್ಥಾನದ ಮುಂದೆ ಭಕ್ತನೊಬ್ಬ ಸೌಮ್ಯ ರೆಡ್ಡಿ ಫೋಟೋ ಹಿಡಿದು ಫೋಟೋ ಫೋಸ್ ಕೊಟ್ಟಿದ್ದಾನೆ. ಈ ವ್ಯಕ್ತಿಯನ್ನು ಬೆಂಗಳೂರಿನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಎಂದು ಹೇಳಲಾಗಿದೆ. ಅಂದಹಾಗೆ ತಿರುಮಲದಲ್ಲಿ ಪಕ್ಷ ಮತ್ತು ರಾಜಕೀಯ ನಾಯಕರ ಫೋಟೋ ತೆಗೆಯಬಾರದು ಎಂಬ ನಿಯಮವಿದೆ. ಆದರೆ ಆ ನಿಯಮ ಉಲ್ಲಂಘಿಸಿ ಕಾರ್ಯಕರ್ತ ಫೋಟೋ ಕ್ಲಿಕ್ಕಿಸಿಕೊಂಡಿದ್ದಾನೆ. ಇದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗಿದೆ.

ಭಾರತದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತ ಶುಕ್ರವಾರದಿಂದ (ಏಪ್ರಿಲ್ 19) ಆರಂಭವಾಗಿವೆ. ಈ ನಡುವೆ ಅಭ್ಯರ್ಥಿಗಳು ಟೆಂಪಲ್ ರನ್ ಶುರು ಮಾಡಿದ್ದಾರೆ. ಅಭ್ಯರ್ಥಿಗಳ ಜೊತೆಗೆ ಅವರ ಬೆಂಬಲಿಗರೂ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳನ್ನು ಮಾಡಿಸುತ್ತಿದ್ದಾರೆ.
ಅಂತೆಯೇ ಚುನಾವಣೆಯಲ್ಲಿ ಗೆಲ್ಲಿಸುವಂತೆ ಬೇಡಿ ಅಭ್ಯರ್ಥಿಗಳು ತಿರುಪತಿಗೂ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿದ್ದಾರೆ. ಆದರೆ ತಿರುಪತಿಯಲ್ಲಿ ಯಾವುದೇ ಪ್ರಚಾರದ ರೀತಿಯಲ್ಲಿ ಫೋಟೋಗಳನ್ನು ಬಳಕೆ ಮಾಡುವಂತಿಲ್ಲ. ಆದರೆ ಬೆಂಗಳೂರು ಕಾಂಗ್ರೆಸ್ ಕಾರ್ಯಕರ್ತನೊಬ್ಬ ಸೌಮ್ಯರೆಡ್ಡಿ ಫೋಟೋ ಹಿಡಿದು ನಿಯಮವನ್ನು ಉಲ್ಲಂಘಿಸಿದ್ದಾನೆ.

ತಿರುಪತಿಯಲ್ಲಿ ಚುನಾವಣೆ ಪ್ರಯುಕ್ತ ಶಿಫಾರಸ್ಸು ಪತ್ರಗಳನ್ನು ರದ್ದುಗೊಳಿಸಲಾಗಿದೆ. ತಿರುಪತಿ ದೇವಸ್ಥಾನದ ಆವರಣದಲ್ಲಿ ಯಾವುದೇ ಚುನಾವಣಾ ಅಭ್ಯರ್ಥಿಗಳ ಫೋಟೋಗಳನ್ನು ಅಂಟಿಸುವಂತಿಲ್ಲ. ಪ್ರಚಾರ ಮಾಡುವಂತಿಲ್ಲ. ಆದರೆ ತಿರುಪತಿಯಲ್ಲಿ ಕಾರ್ಯಕರ್ತನು ಹಿಡಿದ ಫೋಟೋದಲ್ಲಿ ಸೌಮ್ಯ ರೆಡ್ಡಿ, ಶಾಸಕ ಎಂ ಕೃಷ್ಣಪ್ಪ, ಶಾಸಕ ಪ್ರಿಯಾ ಕೃಷ್ಣ ಅವರೊಂದಿಗೆ ಕಾರ್ಯಕರ್ತರ ಚಿತ್ರವೂ ಇದೆ. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಜೊತೆಗೆ ಕಾರ್ಯಕರ್ತನ ವಿರುದ್ಧ ಸೂಕ್ತ ಕ್ರಮಕ್ಕೆ ಚುನಾವಣಾ ಆಯೋಗ್ಯಕ್ಕೆ ಒತ್ತಾಯಿಸಲಾಗಿದೆ.
ನೀತಿ ಸಂಹಿತೆ ಉಲ್ಲಂಘನೆ ಆರೋಪ ಸೌಮ್ಯ ರೆಡ್ಡಿ ಬೆಂಬಲಿಗರ ವಿರುದ್ಧ ದೂರು
ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಬೆಂಗಳೂರು ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಸಚಿವ ರಾಮಲಿಂಗಾ ರೆಡ್ಡಿ ಅವರ ಪುತ್ರಿ ಸೌಮ್ಯ ರೆಡ್ಡಿ ಮತ್ತಿತರರ ವಿರುದ್ಧ ಬಿಜೆಪಿ ಗುರುವಾರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಇಲ್ಲಿನ ಬಿಟಿಎಂ ಲೇಔಟ್ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದಿಂದ ಗ್ಯಾರೆಂಟಿ ಕಾರ್ಡ್ಗೆ ಬದಲಾಗಿ ಆಧಾರ್ ನೀಡುವಂತೆ ಹೇಳುವ ಮೂಲಕ ಮತದಾರರಿಗೆ ಪ್ರೇರೆಪಿಸುತ್ತಿದ್ದಾರೆ. ಗ್ಯಾರಂಟಿ ಕಾರ್ಡ್ ಗಳಿಂದ ಚುನಾವಣೆ ನಂತರ ಮತದಾರರು 1 ಲಕ್ಷ ರೂ. ಬಾಂಡ್ ಸ್ವೀಕರಿಸಲಿದ್ದಾರೆ ಎಂದು ಬೆಂಗಳೂರು ದಕ್ಷಿಣ ಬಿಜೆಪಿಯ ಚುನಾವಣಾ ಏಜೆಂಟ್ ಗಜೇಂದ್ರ ಎಸ್ ದೂರಿದ್ದಾರೆ.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ









Click it and Unblock the Notifications