Breaking: ದಕ್ಷಿಣ ದೆಹಲಿ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ
ನವದೆಹಲಿ, ನವೆಂಬರ್ 28: ದೆಹಲಿಯಲ್ಲಿ ಇರುವ ಇಂಡಿಯನ್ ಪಬ್ಲಿಕ್ ಸ್ಕೂಲ್ಗೆ ಬಾಂಬ್ ಬೆದರಿಕೆಯನ್ನು ಹಾಕಲಾಗಿದೆ. ದೆಹಲಿಯ ದಕ್ಷಿಣ ಜಿಲ್ಲೆಯಲ್ಲಿರುವ ಇಂಡಿಯನ್ ಪಬ್ಲಿಕ್ ಸ್ಕೂಲ್ನಲ್ಲಿ ಬಾಂಬ್ ಇರುವ ಕುರಿತು ಇಮೇಲ್ ಅನ್ನು ಕಳುಹಿಸಲಾಗಿದೆ.
ಬಾಂಬ್ ಬೆದರಿಕೆಗೆ ಸಂಬಂಧಿಸಿದಂತೆ ಈ-ಮೇಲ್ ಸಂದೇಶವನ್ನು ಕಳುಹಿಸುತ್ತಿದ್ದಂತೆ ಪೊಲೀಸರು ಅಲರ್ಟ್ ಆಗಿದ್ದಾರೆ. ಈಗಾಗಲೇ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿಯು ದೌಡಾಯಿಸಿದೆ.

ಬಾಂಬ್ ನಿಷ್ಕ್ರೀಯ ದಳದ ಸಿಬ್ಬಂದಿಯ ಜೊತೆಗೆೆ ಪೊಲೀಸರು ಸಹ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಲಾಗುತ್ತಿದೆ. ಬಾಂಬ್ ಬೆದರಿಕೆಯ ಮೂಲ ಯಾವುದು ಎಂಬುದರ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ. ಈ ಸಂಬಂಧ ತನಿಖೆಯನ್ನು ಮುಂದುವರಿಸಲಾಗುತ್ತಿದೆ.
ಮಧ್ಯಾಹ್ನ 1.19 ಕ್ಕೆ ಇ-ಮೇಲ್ ಸಂದೇಶ:
ನವದೆಹಲಿಯ "ಸಾದಿಕ್ ನಗರದ ಇಂಡಿಯನ್ ಪಬ್ಲಿಕ್ ಸ್ಕೂಲ್ನ ಅಧಿಕೃತ ಖಾತೆಗೆ ಮಧ್ಯಾಹ್ನ 1.19 ಕ್ಕೆ ಇ-ಮೇಲ್ ಬಂದಿದೆ" ಎಂದು ಉಪ ಪೊಲೀಸ್ ಆಯುಕ್ತ (ದಕ್ಷಿಣ) ಚಂದನ್ ಚೌಧರಿ ತಿಳಿಸಿದ್ದಾರೆ.
ಪೊಲೀಸರಿಂದ ಕರೆ ಸ್ವೀಕರಿಸಿದ ಡಿಫೆನ್ಸ್ ಕಾಲೋನಿ ಪೊಲೀಸ್ ಠಾಣೆ ಸಿಬ್ಬಂದಿ, ಬಾಂಬ್ ಸ್ಕ್ವಾಡ್, ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳ ಎಲ್ಲರೂ ಸ್ಥಳಕ್ಕೆ ಆಗಮಿಸಿದರು. ಶಾಲಾ ಆವರಣವನ್ನು ತೆರವು ಮಾಡಿದ ನಂತರ ವ್ಯಾಪಕ ಶೋಧ ನಡೆಸಲಾಗಿದೆ ಎಂದು ಅವರು ಹೇಳಿದರು. ಆದರೆ, ಯಾವುದೇ ಬಾಂಬ್ ಪತ್ತೆಯಾಗಿಲ್ಲ.
"ಬಾಂಬ್ ಸ್ಕ್ವಾಡ್ ಮತ್ತು ಸೈಬರ್ ತಜ್ಞರನ್ನು ತ್ವರಿತವಾಗಿ ಸಂಘಟಿಸಿದ ಪೊಲೀಸರಿಗೆ ನಾವು ಮಾಹಿತಿ ನೀಡಿದ ನಂತರ ನಾವು ಮಕ್ಕಳನ್ನು ಸ್ಥಳಾಂತರಿಸಲು ತಕ್ಷಣದ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ನಮ್ಮ ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ನಮ್ಮ ಸುರಕ್ಷತಾ ಪ್ರೋಟೋಕಾಲ್ಗಳ ಪ್ರಕಾರ ಅನೇಕ ರಂಗಗಳಲ್ಲಿ ಕಾರ್ಯನಿರ್ವಹಿಸಲು ಯಾವುದೇ ಸಮಯ ಕಳೆದುಹೋಗಿಲ್ಲ, ಇದು ನಮ್ಮ ಪ್ರಮುಖ ಆದ್ಯತೆಯಾಗಿದೆ," ಎಂದು ಘಟನೆ ಕುರಿತು ಶಾಲಾ ಆಡಳಿತ ಮಂಡಳಿ ತಿಳಿಸಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications