ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಮೋದಿ ನೇತೃತ್ವದಲ್ಲಿ ದಕ್ಷಿಣ ಭಾರತದ ಬಿಜೆಪಿ ಸಂಸದರ ಸಭೆ
ಇತ್ತೀಚೆಗೆ ನಡೆದ ಪಂಚರಾಜ್ಯ ಚುನಾವಣೆಗಳಲ್ಲಿ ಬಿಜೆಪಿಯು ಭರ್ಜರಿ ಜಯ ಗಳಿಸಿದ ನಂತರ ಇದೇ ಮೊದಲ ಬಾರಿಗೆ ದಕ್ಷಿಣ ಭಾರತದ ಎಲ್ಲಾ ಬಿಜೆಪಿ ಸಂಸದರ ಸಭೆಯನ್ನು ಕರೆದಿರುವುದು ಸಾಕಷ್ಟು ಕುತೂಹಲಗಳಿಗೆ ಕಾರಣವಾಗಿದೆ.
ನವದೆಹಲಿ, ಮಾರ್ಚ್ 31: ಪ್ರಧಾನಿ ನರೇಂದ್ರ ಮೋದಿಯವರು ಇಂದು ದಕ್ಷಿಣ ಭಾರತದ ಬಿಜೆಪಿ ಸಂಸದರ ಸಭೆ ಕರೆದಿದ್ದಾರೆ. ಇಂದು ಬೆಳಗ್ಗೆ (ಮಾ. 31ರ ಬೆಳಗ್ಗೆ8 ಗಂಟೆಗೆ) ಸಭೆ ನಡೆಯಲಿದೆ.
ಸಭೆಯಲ್ಲಿ ಪಾಲ್ಗೊಳ್ಳುವ ಸಂಬಂಧ, ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತಮಿಳುನಾಡು, ಪಾಂಡಿಚೇರಿ ರಾಜ್ಯಗಳ ಸಂಸದರು ಸಭೆಗೆ ಹಾಜರಾಗಲಿದ್ದಾರೆ.
ಕರ್ನಾಟಕದಿಂದ ಕೇಂದ್ರ ಸಚಿವರಾದ ಅನಂತ್ ಕುಮಾರ್, ಡಿವಿ ಸದಾನಂದ ಗೌಡ, ರಮೇಶ್ ಜಿಗಜಿಣಗಿ ಮುಂತಾದವರು ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇತ್ತೀಚೆಗೆ ನಡೆದ ಪಂಚರಾಜ್ಯ ಚುನಾವಣೆಗಳಲ್ಲಿ ಬಿಜೆಪಿಯು ಭರ್ಜರಿ ಜಯ ಗಳಿಸಿದ ನಂತರ ಇದೇ ಮೊದಲ ಬಾರಿಗೆ ದಕ್ಷಿಣ ಭಾರತದ ಎಲ್ಲಾ ಬಿಜೆಪಿ ಸಂಸದರ ಸಭೆಯನ್ನು ಕರೆದಿರುವುದು ಸಾಕಷ್ಟು ಕುತೂಹಲಗಳಿಗೆ ಕಾರಣವಾಗಿದೆ.
ಮುಂದಿನ ದಿನಗಳಲ್ಲಿ ದಕ್ಷಿಣ ಭಾರತವನ್ನೂ ಬಿಜೆಪಿಯ ಭದ್ರ ನೆಲೆಯನ್ನಾಗಿ ಪರಿವರ್ತಿಸುವುದರ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.
Comments
English summary
BJP MPs of South India will be gathering for a meeting in Prime minister Narendra Modi's residence on March 31, 2017 at 8 a.m. This creates a lot of interest in political sector. Central ministers Ananth Kumar, DV Sadananda Gowda and some others will be representing Karnataka.
Story first published: Friday, March 31, 2017, 7:20 [IST]