Rameshwaram Cafe: ಅನಂತ್ ಅಂಬಾನಿ-ರಾಧಿಕಾ ಮರ್ಚಂಟ್ ಪ್ರೀ ವೆಡ್ಡಿಂಗ್ನಲ್ಲಿ ಏನೇನು ತಯಾರಿಸಲಿದೆ ರಾಮೇಶ್ವರಂ ಕೆಫೆ?
ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮತ್ತು ಎರಡನೇ ಪ್ರೀ ವೆಡ್ಡಿಂಗ್ ಪಾರ್ಟಿಯನ್ನು ಆಯೋಜಿಸಲಾಗಿದೆ. ಬಾಲಿವುಡ್ನ ಎಲ್ಲಾ ದೊಡ್ಡ ತಾರೆಯರು ಈ ಪಾರ್ಟಿಯಲ್ಲಿ ಭಾಗವಹಿಸಿದ್ದಾರೆ. ಈ ಪ್ರೀ ವೆಡ್ಡಿಂಗ್ ಪಾರ್ಟಿಯಲ್ಲಿ ಖಾದ್ಯವನ್ನು ತಯಾರಿಸುವ ಹೊಣೆಗಾರಿ ಬೆಂಗಳೂರಿನ ಪ್ರಸಿದ್ಧ ರಾಮೇಶ್ವರಂ ಕೆಫೆ ಹೆಗಲಿಗೆ ಬಿದ್ದಿದೆ.
ರಾಮೇಶ್ವರಂ ಕೆಫೆಯು ಅನಂತ್-ರಾಧಿಕಾ ಅವರ ವಿವಾಹಪೂರ್ವ ಸಮಾರಂಭದಲ್ಲಿ ಭಾಗವಹಿಸಿದ ದಕ್ಷಿಣ ಭಾರತದ ಏಕೈಕ ರೆಸ್ಟೋರೆಂಟ್ ಎಂದು ಪೋಸ್ಟ್ನಲ್ಲಿ ಹೇಳಿದ್ದಾರೆ. ರಾಮೇಶ್ವರಂ ಕೆಫೆಯ ತಂಡವು ತನ್ನ ವಿಶೇಷ ಆಹಾರದೊಂದಿಗೆ ಕ್ರೂಸ್ ಪಾರ್ಟಿಯ ಕೆಲವು ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದೆ. ಮದುವೆಗೆ ಮುಂಚಿನ ಪಾರ್ಟಿಗೆ ಸಂಬಂಧಿಸಿದ ಕೆಲವು ಮಾಹಿತಿ ಆಗಿದ್ದು, ರಾಮೇಶ್ವರಂ ಕೆಫೆ ಮಾಡಿರುವ ಪೋಸ್ಟ್ ಸಖತ್ ವೈರಲ್ ಆಗುತ್ತಿದೆ.

ಪ್ರಿ ವೆಡ್ಡಿಂಗ್ನಲ್ಲಿ ಏನೆಲ್ಲಾ ಖಾದ್ಯ?
ದಕ್ಷಿಣ ಭಾರತದ ಚೈನ್ ಸಿಸ್ಟಮ್ ಹೊಟೇಲ್ ಸಮಾರಂಭದಲ್ಲಿ ಪುಡಿ ಇಡ್ಲಿ, ಪುಡಿ ದೋಸಾ ಸೇರಿದಂತೆ ಹಲವು ದಕ್ಷಿಣ ಭಾರತದ ಖಾದ್ಯಗಳನ್ನು ಪ್ರೀ ವೆಡ್ಡಿಂಗ್ನಲ್ಲಿ ಭಾಗವಹಿಸಿದ ಅತಿಥಿಗಳಿಗೆ ಉಣ ಬಡಿಸಲಾಗಿದೆ ಎಂದು ರಾಮೇಶ್ವರಂ ಕೆಫೆಯ ರಾಘವೇಂದ್ರ ರಾವ್ ಹೆಡ್ಲೈನ್ ಟುಡೆಗೆ ಹೇಳಿದ್ದಾರೆ. ಅತಿಥಿಗಳು ಪುಡಿ ಇಡ್ಲಿ, ಪುಡಿ ದೊಸೆಯನ್ನು ಅತಿಥಿಗಳು ಆನಂದಿಸಿದ್ದಾರೆ.
ರಾಯಲ್ ವೆಡ್ಡಿಂಗ್ನಲ್ಲಿ ಭಾಗವಹಿಸಿದ ಸಂತೋಷವನ್ನು ರಾಮೇಶ್ವರ ಕೆಫೇ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದೆ. ಅಲ್ಲದೆ ಪ್ರೀ ವೆಡ್ಡಿಂಗ್ಗೆ ಬಂದಿದ್ದ ಅತಿಥಿಗಳು ತಮ್ಮ ಖಾದ್ಯವನ್ನು ಆನಂದಿಸಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ರಾಮೇಶ್ವರಂ ಕೆಫೆ ಸ್ಪೆಷಾಲಿಟಿ
ರಾಮೇಶ್ವರಂ ಕೆಫೆ ಸಸ್ಯಾಹಾರಿಗಳ ಪ್ರಮುಖ ಆಕರ್ಷಣೆ. ಈ ಕೆಫೆಯಲ್ಲಿ ನೀವು ಉತ್ತಮ ಗುಣಮಟ್ಟದ ಆಹಾರವನ್ನು ಪಡೆಯಬಹುದ. ಇಲ್ಲಿನ ಆಹಾರ ಶುಚಿ ಮತ್ತು ರುಚಿಯಾಗಿರುತ್ತದೆ. ಇಲ್ಲಿಯ ರುಚಿಕರವಾದ ದಕ್ಷಿಣ ಭಾರತೀಯ ಆಹಾರ ಮತ್ತು ಈ ಕೆಫೆಯ ಶುಚಿತ್ವವು ಅದರ ದೊಡ್ಡ ವೈಶಿಷ್ಟ್ಯಗಳಾಗಿವೆ, ಇದು ಗ್ರಾಹಕರನ್ನು ಆಕರ್ಷಿಸುತ್ತದೆ.
ಜಾಮ್ನಗರದಲ್ಲಿ ನಡೆದ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ ಪೂರ್ವದ ಕೇಟರಿಂಗ್ ಜವಾಬ್ದಾರಿಯೊಂದಿಗೆ ರಾಮೇಶ್ವರಂ ಕೆಫೆ ಮತ್ತೊಮ್ಮೆ ನೀಡಲಾಗಿತ್ತು. ಈಗ ಅನಂತ್-ರಾಧಿಕಾ ಅವರ ಎರಡನೇ ಪ್ರೀ ವೆಡ್ಡಿಂಗ್ ಕ್ರೂಸ್ ಪಾರ್ಟಿಯ ಜವಾಬ್ದಾರಿಯನ್ನು ವಹಿಸಿಕೊಂಡಿದೆ.

ಪ್ರೀ ವೆಡ್ಡಿಂಗ್ ಸಮಾರಂಭದಲ್ಲಿ ಯಾರು ಯಾರಿದ್ದರು?
ಬಾಲಿವುಡ್ ನಟರಾದ ರಣವೀರ್ ಸಿಂಗ್, ಜಾನ್ವಿ ಕಪೂರ್, ಸಾರಾ ಅಲಿ ಖಾನ್, ಶಾರುಖ್ ಖಾನ್, ರಣವೀರ್ ಸಿಂಗ್ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಪ್ರೀ ವೆಡ್ಡಿಂಗ್ ಪಾರ್ಟಿಯ ಚಿತ್ರಗಳು ಮತ್ತು ವೀಡಿಯೊಗಳು ಸದ್ಯ ಸಾಮಾಜಿಕ ತಾಣದಲ್ಲಿ ಕಾಣಿಸಿಕೊಳ್ಳುತ್ತಿವೆ. ಕೇಟಿ ಪೆರ್ರಿ ಮತ್ತು ಬ್ಯಾಕ್ಸ್ಟ್ರೀಟ್ ಬಾಯ್ಸ್ ಮತ್ತು ಗಾಯಕ ಗುರು ರಾಂಧವಾ ಪ್ರದರ್ಶನ ನೀಡಿದರು ಎಂದು ವರದಿಯಾಗಿದೆ.
ಜುಲೈ 12 ರಂದು ಮುಂಬೈನ ಬಿಕೆಸಿಯಲ್ಲಿರುವ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್ನಲ್ಲಿ ಅನಂತ್ ಮತ್ತು ರಾಧಿಕಾ ವಿವಾಹವಾಗಲಿದ್ದಾರೆ. ಜುಲೈ 12 ರಂದು ವಿವಾಹ ನಡೆಯಲಿದೆ, ಜುಲೈ 13 ರಂದು ಆಶೀರ್ವಾದ ಸಮಾರಂಭ ನಡೆಯಲಿದೆ, ನಂತರ ಜುಲೈ 14 ರಂದು ಮದುವೆಯ ಆರತಕ್ಷತೆ ನಡೆಯಲಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications