ಮಹಿಳಾ ಮೀಸಲಾತಿ ಮಸೂದೆ: ಮುಸ್ಲಿಂ ಅಲ್ಪಸಂಖ್ಯಾತರಿಗೆ ಒಳ ಮೀಸಲಾತಿ ಕೇಳಿದ ಜಯಾ ಬಚ್ಚನ್
ನವದೆಹಲಿ, ಸೆಪ್ಟೆಂಬರ್ 21: ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆಯನ್ನು ಲೋಕಸಭೆಯಲ್ಲಿ ನಿನ್ನೆ ಮಂಡಿಸಲಾಗಿದೆ. ಕಾಂಗ್ರೆಸ್ ಸೇರಿದಂತೆ ಬಹುತೇಕ ವಿರೋಧ ಪಕ್ಷಗಳು ಮೀಸಲಾತಿಯನ್ನು ಬೆಂಬಲಿಸಿವೆ. ಈ ಕುರಿತು ರಾಜ್ಯಸಭೆಯಲ್ಲಿ ಇಂದು ಮಾತನಾಡಿದ ಸಮಾಜವಾದಿ ಪಕ್ಷದ ರಾಜ್ಯಸಭೆ ಸದಸ್ಯೆ ಜಯಾ ಬಚ್ಚನ್ ಅವರು ಮಾಹಿಳಾ ಮೀಸಲಾತಿಗೆ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.
'ನಮ್ಮ ಪಕ್ಷವು ಮಹಿಳಾ ಮೀಸಲಾತಿಯನ್ನು ಬೆಂಬಲಿಸುವುದಿಲ್ಲವೆಂದು ಕೆಲವರು ಪುಕಾರು ಹಬ್ಬಿಸುತ್ತಿದ್ದಾರೆ. ಆದರೆ, ಸಮಾಜವಾದಿ ಪಕ್ಷವು ಈ ಮಸೂದೆಯನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ಆದರೆ, ನಾವು ಕೆಲ ಬೇಡಿಕೆಗಳನ್ನು ಹೊಂದಿದ್ದೇವೆ' ಎಂದು ಜಯಾ ಬಚ್ಚನ್ ಹೇಳಿದ್ದಾರೆ.

'ನಾನು ನನ್ನ ಪಕ್ಷದ ಪರವಾಗಿ ವಿನಂತಿಸುತ್ತೇನೆ. ಮಹಿಳಾ ಮೀಸಲಾತಿಯೊಳಗೆ ಮೀಸಲಾತಿ ಬೇಕಿದೆ. ವಿಶೇಷವಾಗಿ ಇತರ ಹಿಂದುಳಿದ ವರ್ಗಗಳ ಮಹಿಳೆಯರಿಗೆ, ಮುಸ್ಲಿಂ ಅಲ್ಪಸಂಖ್ಯಾತರಿಗೆ ಶೇ 15ರಿಂದ 20ರಷ್ಟು ಸ್ಥಾನಗಳನ್ನು ಮೀಸಲಿಡಬೇಕು' ಎಂದು ಜಯಾ ಬಚ್ಚನ್ ಒತ್ತಾಯಿಸಿದ್ದಾರೆ.
'ರಾಜಕೀಯ ಪಕ್ಷಗಳು ಮಹಿಳೆಯರಿಗೆ 30 ಪ್ರತಿಶತ ಮೀಸಲಾತಿಯನ್ನು ಖಚಿತಪಡಿಸಿಕೊಳ್ಳಬೇಕು' ಎಂದು ಅವರು ಒತ್ತಿ ಹೇಳಿದರು.
ಆರಂಭದಲ್ಲಿ ಭಾರತದ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮತ್ತು ಸಿಪಿಐ(ಎಂ) ನಾಯಕಿ ಬೃಂದಾ ಕಾರಟ್ ಈ ಮಸೂದೆಯ ಪರವಾಗಿ ಧ್ವನಿ ಎತ್ತಿದ್ದರು ಎಂದು ಜಯಾ ಬಚ್ಚನ್ ನೆನಪಿಸಿಕೊಂಡರು.

ಹೆಚ್ ಡಿ ದೇವೇಗೌಡರ ಅವಧಿಯಲ್ಲಿ ಮಸೂದೆ ಮಂಡಿಸಲಾಗಿತ್ತು. ಆ ಸಂದರ್ಭದಲ್ಲಿ ಎಸ್ಪಿ ಮಾಜಿ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರು ಇದನ್ನು ವಿರೋಧಿಸಿಲ್ಲವೆಂದು ಎಂದು ಜಯಾ ತಿಳಿಸಿದ್ದಾರೆ.
ಮೀಸಲಾತಿ ಬೆಂಬಲಿಸಿದ ಮಾಯಾವತಿ
ಬಿಎಸ್ಪಿ ನಾಯಕಿ ಮಾಯಾವತಿ ಅವರು ಮಹಿಳಾ ಮೀಸಲಾತಿಯನ್ನು ಬೆಂಬಲಿಸಿದ್ದಾರೆ. ಆದರೆ, ಅವರು ಸಹ ಮೀಸಲಾತಿಯಲ್ಲಿ ಮೀಸಲಾತಿ ಕಲ್ಪಿಸುವಂತೆ ಒತ್ತಾಯಿಸಿದ್ದಾರೆ. ಪರಿಶಿಷ್ಟ ಜಾತಿ ಹಾಗೂ ಪಂಗಡದ ಮಹಿಳೆಯರಿಗೆ ಒಳ ಮೀಸಲಾತಿ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.
'ಈ ಮಸೂದೆಯ ಪ್ರಕಾರ, ಮಹಿಳೆಯರಿಗೆ 15-16 ವರ್ಷಗಳವರೆಗೆ ಮೀಸಲಾತಿ ನೀಡಲಾಗುವುದಿಲ್ಲ. ಏಕೆಂದರೆ ಮೊದಲು ಜನಗಣತಿಯನ್ನು ನಡೆಸಬೇಕು. ನಂತರ ಸೀಟುಗಳ ಡಿಲಿಮಿಟೇಶನ್ ಮಾಡಬೇಕು. ಜನಗಣತಿಗೆ ಬಹಳ ಸಮಯ ಹಿಡಿಯುತ್ತದೆ. ಅದರ ನಂತರವೇ ಮಸೂದೆಯನ್ನು ಜಾರಿಗೆ ತರಲಾಗುತ್ತದೆ' ಎಂದು ಮಾಯಾವತಿ ಹೇಳಿದ್ದಾರೆ.
'ಮಹಿಳೆಯರಿಗೆ ಮೀಸಲಾತಿ ನೀಡುವುದು ಬಿಜೆಪಿಯ ಉದ್ದೇಶವಲ್ಲ. ಲೋಕಸಭೆ ಚುನಾವಣೆಗೂ ಮುನ್ನ ಮಹಿಳೆಯರನ್ನು ಸೆಳೆಯಲು ಈ ಮಸೂದೆಯನ್ನು ತರಲಾಗುತ್ತಿದೆ' ಎಂದು ಮಾಯಾವತಿ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದಾರೆ.
ಕೇಂದ್ರ ಸರ್ಕಾರವು ಜನಗಣತಿ ಮತ್ತು ಕ್ಷೇತ್ರ ಮರು ವಿಂಗಡನೆಗೆ ಸಂಬಂಧಿಸಿದ ಎರಡು ನಿಬಂಧನೆಗಳನ್ನು ಕೈಬಿಡಬೇಕು. ಇದರಿಂದ ಮಹಿಳೆಯರಿಗೆ ತಕ್ಷಣವೇ ಮೀಸಲಾತಿಯ ಲಾಭ ದೊರೆಯುತ್ತದೆ ಎಂದು ಮಾಯಾವತಿ ಪ್ರತಿಪಾದಿಸಿದ್ದಾರೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications