ಮುಲಾಯಂ ಸಿಂಗ್ ಯಾದವ್ ನಿಧನ
ಲಕ್ನೋ, ಅಕ್ಟೋಬರ್ 10; ಸಮಾಜವಾದಿ ಪಕ್ಷದ ಸಂಸ್ಥಾಪಕ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ವಿಧಿವಶರಾದರು. ಹಲವು ತಿಂಗಳುಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.
ಸೋಮವಾರ ಬೆಳಗ್ಗೆ ಮುಲಾಯಂ ಸಿಂಗ್ ಯಾದವ್ (82) ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೂರು ಬಾರಿ ಮುಲಾಯಂ ಸಿಂಗ್ ಯಾದವ್ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದರು.

ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್ಗೆ ಹಲವು ದಿನಗಳಿಂದ ಜೀವರಕ್ಷಕ ಔಷಧಿಗಳನ್ನು ನೀಡಿ ಚಿಕಿತ್ಸೆ ನೀಡಲಾಗುತ್ತಿತ್ತು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ಗಣ್ಯರು ಮುಲಾಯಂ ಸಿಂಗ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಗುರುಗ್ರಾಮದಲ್ಲಿರುವ ಮೇದಾಂತ ಆಸ್ಪತ್ರೆಯಲ್ಲಿ ಮುಲಾಯಂ ಸಿಂಗ್ ಯಾದವ್ ಚಿಕಿತ್ಸೆ ಪಡೆಯುತ್ತಿದ್ದರು. ಆಗಸ್ಟ್ 22ರಂದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಸಂಜೀವ್ ಗುಪ್ತ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
मेरे आदरणीय पिता जी और सबके नेता जी नहीं रहे - श्री अखिलेश यादव
— Samajwadi Party (@samajwadiparty) October 10, 2022
ಭಾನುವಾರ ಮುಲಾಯಂ ಸಿಂಗ್ ಯಾದವ್ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಸಮಾಜವಾದಿ ಪಕ್ಷ ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿತ್ತು.
ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮುಲಾಯಂ ಸಿಂಗ್ ಪುತ್ರ ಅಖಿಲೇಶ್ ಯಾದವ್ಗೆ ಕರೆ ಮಾಡಿ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದರು.
1939, ನವೆಂಬರ್ 22ರಂದು ಜನಿಸಿದ ಮುಲಾಯಂ ಸಿಂಗ್ ಯಾದವ್ 1989-91, 1993-95 ಮತ್ತು 2003-07ರ ತನಕ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಣೆ ಮಾಡಿದ್ದರು.
ಮುಲಾಯಂ ಸಿಂಗ್ ಯಾದವ್ ಆಗ್ರಾ ವಿಶ್ವವಿದ್ಯಾಲಯದಿಂದ ಪೊಲಿಟಿಕಲ್ ಸೈನ್ಸ್ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು. 15ನೇ ವಯಸ್ಸಿನಲ್ಲಿಯೇ ರಾಜಕೀಯದ ಸಂಪರ್ಕ ಪಡೆದ ಅವರು, ರಾಮ್ ಮನೋಹರ್ ಲೋಹಿಯಾ ಪ್ರಭಾವಕ್ಕೆ ಒಳಗಾದರು.
1967ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದ ಮುಲಾಯಂ ಸಿಂಗ್ ಯಾದವ್ 1974ರಲ್ಲಿ ಮರು ಆಯ್ಕೆಯಾದರು. ತುರ್ತು ಪರಿಸ್ಥಿತಿ ಘೋಷಣೆ ಮಾಡಿದಾಗ ಬಂಧನಕ್ಕೊಳಗಾದರು. 1977ರಲ್ಲಿ ಬಿಡುಗಡೆಗೊಂಡ ಬಳಿಕ ಮತ್ತೆ ಚುನಾವಣೆಗೆ ಸ್ಪರ್ಧಿಸಿ ಗೆಲುವು ಕಂಡರು.
1992ರಲ್ಲಿ ಮುಲಾಯಂ ಸಿಂಗ್ ಯಾದವ್ ಸಮಾಜವಾದಿ ಪಕ್ಷ ಸ್ಥಾಪನೆ ಮಾಡಿದರು. 1993ರ ಉತ್ತರ ಪ್ರದೇಶ ಚುನಾವಣೆಯಲ್ಲಿ ಮೈತ್ರಿ ಸರ್ಕಾರ ರಚನೆ ಮಾಡುವಷ್ಟು ಸ್ಥಾನಗಳನ್ನು ಪಕ್ಷ ಪಡೆಯಿತು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications