ಲೋಕಸಭೆ, ವಿಧಾನಸಭೆ ಏಕಕಾಲದ ಚುನಾವಣೆಗೆ ಎಸ್ಪಿ, ಟಿಆರ್ಎಸ್ ಬೆಂಬಲ
ನವದೆಹಲಿ, ಜುಲೈ 8: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳ ಚುನಾವಣೆಯನ್ನು ಏಕಕಾಲದಲ್ಲಿ ನಡೆಸುವ ಭಾರತೀಯ ಕಾನೂನು ಆಯೋಗದ ಪ್ರಸ್ತಾವವನ್ನು ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ ಮತ್ತು ಕೆ. ಚಂದ್ರಶೇಖರ್ ರಾವ್ ಅವರ ತೆಲಂಗಾಣ ರಾಷ್ಟ್ರ ಸಮಿತಿ ಪಕ್ಷಗಳು ಬೆಂಬಲಿಸಿವೆ.
ಆದರೆ, ಈ ಆಲೋಚನೆಗೆ ಬೆಂಬಲ ನೀಡಲು ಡಿಎಂಕೆ ಕಾರ್ಯಾಧ್ಯಕ್ಷ ಎಂ.ಕೆ. ಸ್ಟಾಲಿನ್ ನಿರಾಕರಿಸಿದ್ದಾರೆ.
ದೇಶದಲ್ಲೆಡೆ ಏಕಕಾಲದಲ್ಲಿ ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆಗಳಿಗೆ ಚುನಾವಣೆ ನಡೆಸುವ ಮಹತ್ವದ ವಿಚಾರದ ಬಗ್ಗೆ ಚರ್ಚಿಸುವ ಸಲುವಾಗಿ ಕಾನೂನು ಆಯೋಗವು ಶನಿವಾರ ಮತ್ತು ಭಾನುವಾರ ದೇಶದ ಪ್ರಮುಖ ರಾಜಕೀಯ ಪಕ್ಷಗಳ ಜತೆ ಸಭೆ ನಡೆಸಲಿದೆ.

ಸಮಾಜವಾದಿ ಪಕ್ಷವು ಏಕಕಾಲದ ಚುನಾವಣೆಯ ಪರವಾಗಿದೆ. ಆದರೆ ಅದು 2019ರಿಂದಲೇ ಆರಂಭವಾಗಬೇಕು. ಒಂದು ವೇಳೆ ಜನಪ್ರತಿನಿಧಿಗಳು ಪಕ್ಷದಿಂದ ಪಕ್ಷಕ್ಕೆ ಹಾರಲು ಆರಂಭಿಸಿದರೆ, ಕುದುರೆ ವ್ಯಾಪಾರ ನಡೆದರೆ, ಅವರ ವಿರುದ್ಧ ವಾರದೊಳಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಎಸ್ಪಿ ರಾಮ್ ಗೋಪಾಲ್ ಯಾದವ್ ಹೇಳಿದ್ದಾರೆ.
ಕಾನೂನು ಆಯೋಗಕ್ಕೆ ಬರೆದಿರುವ ಪತ್ರದಲ್ಲಿ ಚಂದ್ರಶೇಖರ ರಾವ್, ಈ ಯೋಜನೆಯನ್ನು ತಾವು ಬಲವಾಗಿ ಬೆಂಬಲಿಸುವುದಾಗಿ ಹೇಳಿದ್ದಾರೆ.
ಏಕಕಾಲಕ್ಕೆ ಎರಡೂ ಕಡೆ ಚುನಾವಣೆ ನಡೆಸುವುದು ನಮ್ಮ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಹೀಗಾಗಿ ಈ ಪ್ರಸ್ತಾವಕ್ಕೆ ತಮ್ಮ ಕಟು ವಿರೋಧವಿದೆ ಎಂದು ಡಿಎಂಕೆ ಹೇಳಿದೆ.
ಸಂವಿಧಾನದಲ್ಲಿ ತಿದ್ದುಪಡಿ ತಂದು ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆಗಳಿಗೆ ಎರಡು ಹಂತದಲ್ಲಿ ಏಕಕಾಲದಲ್ಲಿ ಚುನಾವಣೆ ನಡೆಸುವ ಪ್ರಸ್ತಾವವನ್ನು ಕಾನೂನು ಆಯೋಗ ಏಪ್ರಿಲ್ನಲ್ಲಿ ಮುಂದಿಟ್ಟಿತ್ತು.
ಎನ್ಡಿಎ ಮೈತ್ರಿ ಪಕ್ಷ ಶಿರೋಮಣಿ ಅಕಾಲಿ ದಳ, ಎಐಎಡಿಎಂಕೆ, ಬಿಜೆಪಿ ಪಕ್ಷಗಳು ಈ ಪ್ರಸ್ತಾವವನ್ನು ಬೆಂಬಲಿಸಿವೆ.
ಆದರೆ, ತೃಣಮೂಲ ಕಾಂಗ್ರೆಸ್, ಎಐಎಂಐಎಂ, ಎಐಯುಡಿಎಫ್ ಗೋವಾ ಫಾರ್ವರ್ಡ್ ಪಾರ್ಟಿಗಳು ಇದನ್ನು ವಿರೋಧಿಸಿವೆ.
-
ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮದಲ್ಲಿ CSR ರಾಷ್ಟ್ರೀಯ ಸಮಾವೇಶ: ವಿಕಸಿತ ಭಾರತ ಚರ್ಚೆ -
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ












Click it and Unblock the Notifications