ಸ್ಪೈಸ್ ಜೆಟ್ ವಿಮಾನದಲ್ಲಿ ಬೆಂಕಿ; 185 ಜೀವ ಉಳಿಸಿದ ಪೈಲೆಟ್
ಪಾಟ್ನಾ ಜೂ.20: ಪಾಟ್ನಾದಿಂದ ದೆಹಲಿಗೆ ತೆರಳುತ್ತಿದ್ದ ಸ್ಪೈಸ್ ಜೆಟ್ ಬೋಯಿಂಗ್ 737 ವಿಮಾನದಲ್ಲಿ ಆಕಸ್ಮಿಕ ಬೆಂಕಿ ಕಂಡು ಬಂದ ಹಿನ್ನೆಲೆ ಟೇಕ್ ಆಫ್ ಕೆಲವೇ ನಿಮಿಷಗಳಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ಅದೃಷ್ಟವಶಾತ್ ಪೈಲೆಟ್ ಸಮಯ ಪ್ರಜ್ಞೆಯಿಂದ ಯಾವುದೇ ಹಾನಿಯಾಗಿಲ್ಲ.
ಈ ಘಟನೆಯಲ್ಲಿ ಸ್ಪೈಸ್ ಜೆಟ್ ಬೋಯಿಂಗ್ 737 ಪೈಲಟ್ ಕ್ಯಾಪ್ಟನ್ ಮೋನಿಕಾ ಖನ್ನಾ ಅವರ ಸಮಯಪ್ರಜ್ಞೆಯಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ಸುಮಾರು 185 ಪ್ರಯಾಣಿಕರ ಜೀವ ಉಳಿದ ಘಟನೆ ಭಾನುವಾರ ನಡೆದಿದೆ.
ಪಾಟ್ನಾದಿಂದ ದೆಹಲಿಗೆ ತೆರಳುವ ಸ್ಪೈಸ್ ಜೆಟ್ 737 ವಿಮಾಣ ಬೆಳಗ್ಗೆ ಪಾಟ್ನಾದಿಂದ ಟೇಕ್ಆಫ್ ಆಗಿತ್ತು. ನಂತರ ಕೆಲವೇ ನಿಮಿಷಗಳಲ್ಲಿ ವಿಮಾನದ ಇಂಜಿನ್ನಲ್ಲಿ ಬೆಂಕಿ ಹೊತ್ತಿಕೊಂಡಿರುವುದು ಪೈಲಟ್ ಗಮನಕ್ಕೆ ಬಂದಿದೆ. ಕೂಡಲೇ ಸಮಯಪ್ರಜ್ಞೆ ಮೆರೆದ ಮೋನಿಕಾ ಖನ್ನಾ ಮರಳಿ ಪಾಟ್ನಾ ಏರ್ ಪೋರ್ಟ್ಗೆ ವಿಮಾನ ವಾಪಸ್ ತಂದರು.

ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ್ದಾರೆ. ವಿಮಾನ ತುರ್ತು ಭೂ ಸ್ಪರ್ಶದ ಮೂಲಕ ನೂರಾರು ಪ್ರಯಾಣಿಕರ ಜೀವ ರಕ್ಷಣೆಗೆ ಕಾರಣರಾದ ಪೈಲಟ್ ಮೋನಿಕಾ ಖನ್ನಾ ಕಾರ್ಯವನ್ನು ಸಾರ್ವಜನಿಕರು ಮತ್ತು ಅಧಿಕಾರಿಗಳು ಶ್ಲಾಘಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹ್ಯಾಶ್ ಟ್ಯಾಗ್ ಬಳಸಿ ಮೊನಿಕಾ ಖನ್ನಾ ಎಂದು ಪೋಸ್ಟ್ ಹಾಕಿ ಪ್ರಶಂಸಿದ್ದಾರೆ.
ಪ್ರಯಾಣಿಕರ ಸ್ಥಳಾಂತರ; ಟೇಕ್ ಆಫ್ ಆದ ಸ್ವಲ್ಪ ಹೊತ್ತಿನಲ್ಲೇ ಬೆಂಕಿ ಕಂಡು ಬಂದ ಪರಿಣಾಮ ಪೈಲಟ್ ವಿಮಾನದ ಒಂದು ಇಂಜಿನ್ ಅನ್ನು ಸ್ಥಗಿತಗೊಳಿಸಿದ್ದಾರೆ. ನಂತರ ಈ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿ ಒಂದೇ ಇಂಜಿನ್ ಸಹಾಯದಿಂದ ಪುನಃ ಪಾಟ್ನಾದಲ್ಲಿ ತುರ್ತು ಭೂಸ್ಪರ್ಶ ಮಾಡಿಸಿದ್ದಾರೆ.

ಇದರಿಂದ ಸಂಭವನೀಯ ಬೃಹತ್ ಅವಘಡವೊಂದು ತಪ್ಪಿದೆ. ಪ್ರಯಾಣಿಕರಲ್ಲಿ ಯಾರಿಗೂ ಗಾಯಗಳಾಗಿಲ್ಲ. ಅವರೆಲ್ಲರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಏರ್ಪೋರ್ಟ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ವಿಮಾನ ಲ್ಯಾಂಡ್ ಆಗುವಾಗ ಇಂಜಿನ್ ಭಾಗದಲ್ಲಿ ಸಣ್ಣಗೆ ಹೊಗೆ ಕಂಡು ಬಂದಿರುವುದನ್ನು ಸ್ಥಳೀಯರು ವಿಡಿಯೋ ಮಾಡಿದ್ದು, ಎಲ್ಲೆಡೆ ಹರಿದಾಡುತ್ತಿದೆ.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications