ಕೊರೊನಾ ಪರಿಣಾಮ; ಪ್ರಯಾಣಿಕ ವಿಮಾನದಲ್ಲಿ ಸರಕು ಸಾಗಣೆ!
ನವದೆಹಲಿ, ಏಪ್ರಿಲ್ 08 : ಕೊರೊನಾ ಪರಿಣಾಮದಿಂದ ದೇಶದಲ್ಲಿ ವಿಮಾನ ಸೇವೆಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಆದರೆ, ಅಗತ್ಯ ವಸ್ತುಗಳ ಸಾಗಣೆಗಾಗಿ ವಿಮಾನಗಳನ್ನು ಬಳಸಿಕೊಳ್ಳಲಾಗುತ್ತಿದೆ. ಮೊದಲ ಬಾರಿಗೆ ಪ್ರಯಾಣಿಕರ ವಿಮಾನದಲ್ಲಿ ಅಗತ್ಯ ವಸ್ತುಗಳನ್ನು ಸಾಗಣೆ ಮಾಡಲಾಗಿದೆ.
ದೇಶದಲ್ಲಿ ವಿಮಾನ ಸೇವೆ ಒದಗಿಸುವ ಸ್ಪೈಸ್ ಜೆಟ್ ಕಂಪನಿ ದೆಹಲಿ, ಮುಂಬೈ, ಚೆನ್ನೈಗೆ ಅಗತ್ಯ ವಸ್ತುಗಳನ್ನು ಸಾಗಣೆ ಮಾಡಿದೆ. ಪ್ರಯಾಣಿಕರ ವಿಮಾನದಲ್ಲಿ ಸೀಟಿನ ನಡುವೆ ಬಾಕ್ಸ್ಗಳನ್ನು ಇಟ್ಟು ಸರಕುಗಳನ್ನು ಸಾಗಣೆ ಮಾಡಲಾಗಿದೆ. ಈ ಕುರಿತ ಫೋಟೋವನ್ನು ಟ್ವಿಟರ್ನಲ್ಲಿ ಹಾಕಿದೆ.
ಔಷಧಿ, ತರಕಾರಿ, ಹಣ್ಣುಗಳನ್ನು ಹೊತ್ತ ವಿಮಾನಗಳು ದೆಹಲಿ, ಮುಂಬೈ ಮತ್ತು ಚೆನ್ನೈ ನಡುವೆ ಹಾರಾಟ ನಡೆಸಿವೆ. ದೇಶದಲ್ಲಿ ಇದೇ ಮೊದಲ ಬಾರಿಗೆ ಪ್ರಯಾಣಿಕರ ವಿಮಾನದಲ್ಲಿ ಸರಕುಗಳನ್ನು ಸಾಗಣೆ ಮಾಡಲು ವಿಮಾನಯಾನ ಸಚಿವಾಲಯ ಒಪ್ಪಿಗೆ ನೀಡಿದೆ.

ಮಂಗಳವಾರ ಸಂಜೆ ಮುಂಬೈನಿಂದ ದೆಹಲಿಗೆ ಬಂದಿಳಿದ ವಿಮಾನದಲ್ಲಿ 15 ಟನ್ ಅಗತ್ಯ ವಸ್ತುಗಳನ್ನು ತರಲಾಯಿತು. ಅಲ್ಲಿಂದ ಬೇರೆ-ಬೇರೆ ನಗರಗಳಿಗೆ ಸಾಗಣೆ ಮಾಡಲಾಯಿತು. ಸರಕುಗಳ ವಾಸನೆ ಸೀಟ್ನಲ್ಲಿ ಉಳಿಯದಂತೆ ಮಾಡಲು ವಿಶೇಷ ಸೀಟ್ ಕವರ್ಗಳನ್ನು ಬಳಕೆ ಮಾಡಲಾಗಿದೆ.
ದೆಹಲಿಯಿಂದ ಹೊರಟ ವಿಮಾನ ಚೆನ್ನೈ ತಲುಪಿತು. ಅಲ್ಲಿಂದ ಗುಜರಾತ್ನ ಸೂರತ್ಗೆ ಹಾರಾಟ ನಡೆಸಿ, ಬಳಿಕ ಚೆನ್ನೈಗೆ ವಾಪಸ್ ಅಯಿತು. ಚೆನ್ನೈನಿಂದ ಹೊರಟ ವಿಮಾನ ಮುಂಬೈಗೆ ತಲುಪಿ, ಅಲ್ಲಿಂದ ದೆಹಲಿಗೆ ತೆರಳಿತು.
"ಲಾಕ್ ಡೌನ್ ಘೋಷಣೆಯಾದ ಬಳಿಕ 1400 ಟನ್ ಅಗತ್ಯ ವಸ್ತುಗಳನ್ನು ದೇಶಿಯ ಮತ್ತು ಅಂತರಾಷ್ಟ್ರೀಯ ವಿಮಾನದ ಮೂಲಕ ಸಾಗಣೆ ಮಾಡಿದ್ದೇವೆ" ಎಂದು ಸ್ಪೈಸ್ ಜೆಟ್ ಅಧ್ಯಕ್ಷ ಮತ್ತು ಎಂಡಿ ಅಜಯ್ ಸಿಂಗ್ ಹೇಳಿದ್ದಾರೆ.
ಸ್ಪೈಸ್ ಜೆಟ್ ವಿವಿಧ ರಾಜ್ಯಗಳಿಗೆ ಔಷಧಿ, ವೈದ್ಯಕೀಯ ಉಪಕರಣಗಳನ್ನು ಸಾಗಣೆ ಮಾಡಲು 5 ವಿಮಾನಗಳನ್ನು ಬಳಕೆ ಮಾಡುತ್ತಿದೆ. ಏಪ್ರಿಲ್ 6ರ ತನಕ ಸ್ಪೈಸ್ ಜೆಟ್ 150 ವಿಮಾನಗಳ ಮೂಲಕ ವಿವಿಧ ರಾಜ್ಯಗಳಿಗೆ ಸರಕುಗಳನ್ನು ಸಾಗಣೆ ಮಾಡಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications