ಹಾರಾಟ ಸ್ಥಗಿತಗೊಳಿಸಿರುವ ಜೆಟ್ ಏರ್ವೇಸ್ಗೆ ಸ್ಪೈಸ್ಜೆಟ್ ಬಣ್ಣ!
ನವದೆಹಲಿ, ಏಪ್ರಿಲ್ 22: ಸಂಪೂರ್ಣ 'ನೆಲಕಚ್ಚಿರುವ' ಜೆಟ್ ಏರ್ವೇಸ್ ವಿಮಾನಯಾನ ಸಂಸ್ಥೆ ಸಿಬ್ಬಂದಿಗೆ ಉದ್ಯೋಗ ನೀಡುವ ಮೂಲಕ ಸಹಾಯಹಸ್ತ ಚಾಚಿರುವ ಸ್ಪೈಸ್ ಜೆಟ್, ಈಗ ಹಾರಾಟ ನಿಲ್ಲಿಸಿರುವ ಜೆಟ್ ಏರ್ವೇಸ್ ವಿಮಾನಗಳ ಮರು ಹಾರಾಟಕ್ಕೆ ಸಿದ್ಧತೆ ನಡೆಸಿದೆ. ಜತೆಗೆ ಜೆಟ್ ಏರ್ವೇಸ್ಗೆ ತನ್ನ 'ಬಣ್ಣ'ವನ್ನೂ ನೀಡುತ್ತಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಜೆಟ್ ಏರ್ವೇಸ್ ಬೋಯಿಂಗ್ ಬಿ737 ವಿಮಾನಕ್ಕೆ ಸ್ಪೈಸ್ಜೆಟ್ ತನ್ನ ವಿಶಿಷ್ಟ ಕೆಂಪು ಗುರುತಿನ ಲೋಗೋವನ್ನು ಮೂಡಿಸುತ್ತಿದೆ. ಇದರ ಜತೆಗೆ ಜೆಟ್ ಏರ್ವೇಸ್ನ ಮೂಲ ಬಣ್ಣದ ಗುರುತಾದ ಹಳದಿ ಮತ್ತು ನೀಲಿಪಟ್ಟಿಯೂ ಇರಲಿದೆ. ಜೆಟ್ಏರ್ವೇಸ್ನ ಕೆಲವು ವಿಮಾನಗಳನ್ನು ಸ್ಪೈಸ್ ಜೆಟ್ ತನ್ನ ಸುಪರ್ದಿಯಲ್ಲಿ ಸಂಚಾರಕ್ಕೆ ಬಳಸಿಕೊಳ್ಳಲಿದೆ.
ಮೂಲಗಳ ಪ್ರಕಾರ ಜೆಟ್ ಏರ್ವೇಸ್ನ ಕೆಲವು ವಿಮಾನಗಳು ಮುಂದಿನ ವಾರದಿಂದ ತಮ್ಮ ಹಾರಾಟ ಆರಂಭಿಸಲಿವೆ.

ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್ ಇಂಡಿಯಾ ಕೂಡ ಅಂತಾರಾಷ್ಟ್ರೀಯ ಹಾರಾಟಗಳಿಗೆ ದೊಡ್ಡ ವಿಮಾನಗಳನ್ನು ಬಳಸಿಕೊಳ್ಳಲು ಜೆಟ್ ಏರ್ವೇಸ್ ಜತೆ ಮಾತುಕತೆ ನಡೆಸುತ್ತಿದೆ.
UPDATE: Ex-JetAirways’ Boeing B737 aircraft gets a new makeover with #SpiceJet sticker on it. Sources say, some of Jet Airways' grounded planes are likely to start flying by next week. #JetAirwaysCrisis #SaveJetAirways #AviationDaily #AvGeek pic.twitter.com/N6xNpzTtYS
— Aero News (@teamaeronews) 21 April 2019
ವಿಮಾನ ಹಾರಾಟಗಳ ಸ್ಥಗಿತದಿಂದ ಜೆಟ್ ಏರ್ವೇಸ್ನ ಸಾವಿರಾರು ಉದ್ಯೋಗಿಗಳು ಕೆಲಸ ನಷ್ಟದ ಭೀತಿಯಲ್ಲಿದ್ದಾರೆ. ಹಲವು ತಿಂಗಳಿನಿಂದ ಸಂಬಳವಿಲ್ಲದೆ ಪರದಾಡುತ್ತಿದ್ದಾರೆ. ಅವರಲ್ಲಿ ಅನೇಕರಿಗೆ ಸ್ಪೈಸ್ ಜೆಟ್ ಈಗಾಗಲೇ ಉದ್ಯೋಗ ನೀಡಿದೆ. 100ಕ್ಕೂ ಅಧಿಕ ಪೈಲಟ್ಗಳು, 200ಕ್ಕೂ ಹೆಚ್ಚು ಕ್ಯಾಬಿನ್ ಸಿಬ್ಬಂದಿ ಮತ್ತು ಸುಮಾರು 200 ತಾಂತ್ರಿಕ ಹಾಗೂ ವಿಮಾನ ನಿಲ್ದಾಣ ಸಿಬ್ಬಂದಿಯನ್ನು ಈಗಾಗಲೇ ನೇಮಿಸಿಕೊಳ್ಳಲಾಗಿದೆ. ಇನ್ನೂ ಅನೇಕರಿಗೆ ಉದ್ಯೋಗ ನೀಡಲಾಗುವುದು ಎಂದು ಸ್ಪೈಸ್ ಜೆಟ್ ತಿಳಿಸಿತ್ತು.
ಜೆಟ್ ಏರ್ವೇಸ್ನಲ್ಲಿ ಸುಮಾರು 1,300 ಪೈಲಟ್ಗಳಿದ್ದು ಅವರಲ್ಲಿ 400ಕ್ಕೂ ಹೆಚ್ಚು ಪೈಲಟ್ಗಳು ಬೇರೆ ಬೇರೆ ವಿಮಾನಯಾನ ಸಂಸ್ಥೆಗಳನ್ನು ಸೇರಿಕೊಂಡಿದ್ದಾರೆ. ಅಂದಾಜು 40 ಎಂಜಿನಿಯರ್ಗಳು ಕೂಡ ಕಂಪೆನಿ ತ್ಯಜಿಸಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications