ಜೆಟ್ ಏರ್ವೇಸ್ ಉದ್ಯೋಗಿಗಳ ಪಾಲಿಗೆ ಆಶಾಕಿರಣವಾದ ಸ್ಪೈಸ್ ಜೆಟ್
zನವದೆಹಲಿ, ಏಪ್ರಿಲ್ 19: ದೇಶದ ಅತಿ ದೊಡ್ಡ ಖಾಸಗಿ ವಿಮಾನಯಾನ ಸಂಸ್ಥೆ ಜೆಟ್ ಏರ್ವೇಸ್ ಆರ್ಥಿಕ ಸಂಕಷ್ಟದಿಂದ ಸದ್ಯಕ್ಕೆ ತನ್ನ ಸಂಪೂರ್ಣ ಹಾರಾಟ ಸ್ಥಗಿತಗೊಳಿಸಿದೆ. ಬಾಕಿ ಇರುವ ಸಾಲ ಮತ್ತು ಸಿಬ್ಬಂದಿ ವೇತನ ಬಾಕಿ ಉಳಿಸಿಕೊಂಡಿರುವ ಸಂಸ್ಥೆ ಅಸ್ತಿತ್ವ ಉಳಿಸಿಕೊಳ್ಳಲು ಪರದಾಡುತ್ತಿದ್ದರೆ, ಮೂರು ನಾಲ್ಕು ತಿಂಗಳಿನಿಂದ ಸಂಬಳ ವಿಲ್ಲದೆ, ಈಗ ಕೆಲಸ ಕಳೆದುಕೊಳ್ಳುವ ಸ್ಥಿತಿಗೆ ಅದರ ಉದ್ಯೋಗಿಗಳು ತಲುಪಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಹೀಗೆ ಕಂಗಾಲಾಗಿರುವ ಜೆಟ್ ಏರ್ವೇಸ್ನ ಸಾವಿರಾರು ಉದ್ಯೋಗಿಗಳಲ್ಲಿ ಸಣ್ಣನೆಯ ಆಶಾಕಿರಣ ಮೂಡಿದೆ. ಅದು ಜೆಟ್ ಏರ್ವೇಸ್ನ ಪ್ರತಿಸ್ಪರ್ಧಿ ಸಂಸ್ಥೆ ಸ್ಪೈಸ್ ಜೆಟ್ನಿಂದ.
ಸಂಕಷ್ಟದಲ್ಲಿ ಸಂಸ್ಥೆ: ಹಾರಾಟ ಸ್ಥಗಿತಗೊಳಿಸಲು ನಿರ್ಧರಿಸಿದ ಜೆಟ್ ಏರ್ವೇಸ್
ಒಂದೆಡೆ ಅಧಿಕ ನಿರ್ವಹಣಾ ವೆಚ್ಚದಿಂದ ವಿಮಾನ ಸಂಸ್ಥೆಗಳು ಆರ್ಥಿಕ ನಷ್ಟ ಅನುಭವಿಸುತ್ತಿದ್ದರೆ, ಸ್ಪೈಸ್ ಜೆಟ್ ತನ್ನ ಸಂಸ್ಥೆಯನ್ನು ಇನ್ನಷ್ಟು ವಿಸ್ತರಿಸಿಕೊಳ್ಳಲು ಮುಂದಾಗಿದೆ. ಜತೆಗೆ ಜೆಟ್ ಏರ್ವೇಸ್ನ ಬಡಪಾಯಿ ಉದ್ಯೋಗಿಗಳೆಡೆಗೆ ತನ್ನ ಸಹಾಯ ಹಸ್ತವನ್ನೂ ಚಾಚಿದೆ.

ನಾವು ವಿಸ್ತಾರಗೊಳ್ಳುತ್ತಿದ್ದೇವೆ ಮತ್ತು ಬೆಳೆಯುತ್ತಿದ್ದೇವೆ. ಜೆಟ್ ಏರ್ವೇಸ್ನ ದುರದೃಷ್ಟಕರ ಸ್ಥಗಿತದಿಂದ ಇತ್ತೀಚೆಗೆ ತಮ್ಮ ಕೆಲಸಗಳನ್ನು ಕಳೆದುಕೊಂಡವರಿಗೆ ನಾವು ಮೊದಲ ಆದ್ಯತೆ ನೀಡುತ್ತಿದ್ದೇವೆ. ಈಗಾಗಲೇ ನಾವು 100ಕ್ಕೂ ಹೆಚ್ಚು ಪೈಲಟ್ಗಳು, 200ಕ್ಕೂ ಅಧಿಕ ಕ್ಯಾಬಿನ್ ಸಿಬ್ಬಂದಿ ಮತ್ತು 200ಕ್ಕೂ ಹೆಚ್ಚು ತಾಂತ್ರಿಕ ಮತ್ತು ವಿಮಾನ ನಿಲ್ದಾಣ ಸಿಬ್ಬಂದಿಗೆ ಉದ್ಯೋಗ ನೀಡಿದ್ದೇವೆ ಎಂದು ಸ್ಪೈಸ್ ಜೆಟ್ ಹೇಳಿದೆ.
SpiceJet: We will do more. We will also induct a large number of planes in our fleet soon. SpiceJet is making all possible efforts to minimise passenger inconvenience and serve Indian customers who are finding it difficult to get seats in this busy season. https://t.co/seetliBw1j
— ANI (@ANI) 19 April 2019
ಇನ್ನೂ ಅನೇಕ ಮಂದಿಗೆ ಉದ್ಯೋಗ ನೀಡಲಾಗುವುದು. ಶೀಘ್ರದಲ್ಲಿಯೇ ಭಾರಿ ಸಂಖ್ಯೆಯ ವಿಮಾನಗಳ ಹಾರಾಟವನ್ನು ಸೇರ್ಪಡೆ ಮಾಡಲಿದ್ದೇವೆ. ಪ್ರಯಾಣಿಕರ ಅನನುಕೂಲತೆಗಳನ್ನು ಕಡಿಮೆ ಮಾಡಲು ಮತ್ತು ಈ ಒತ್ತಡದ ಅವಧಿಯಲ್ಲಿ ಸೀಟ್ ಪಡೆದುಕೊಳ್ಳಲು ಕಷ್ಟಪಡುತ್ತಿರುವ ಭಾರತೀಯ ಗ್ರಾಹಕರಿಗೆ ಸೇವೆ ಒದಗಿಸಲು ಸ್ಪೈಸ್ ಜೆಟ್ ಎಲ್ಲ ಸಾಧ್ಯವಾದ ಪ್ರಯತ್ನಗಳನ್ನು ನಡೆಸುತ್ತಿದೆ ಎಂದು ತಿಳಿಸಿದೆ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications