ಸೇನೆ ಮಾಹಿತಿ ಸಂಗ್ರಹಿಸುತ್ತಿದ್ದ ಪಾಕ್ ಗೂಢಚಾರ ಬಂಧನ
ಪಾಕಿಸ್ತಾನದ ಗೂಢಚಾರ ಬೋಧರಾಜ್ ನನ್ನು ಬಂಧಿಸಿದ ಪೊಲೀಸರಿಗೆ ಪಾಕಿಸ್ತಾನದ ಎರಡು ಸಿಮ್ ಕಾರ್ಡ್, ಸೇನೆ ನಿಯೋಜನೆಯ ಮಾಹಿತಿಯಿರುವ ಮ್ಯಾಪ್, ಮೊಬೈಲ್ ಫೋನ್ ಗಳು ಹಾಗೂ ಮೆಮೊರಿ ಚಿಪ್ ದೊರೆತಿವೆ.
ಶ್ರೀನಗರ, ಅಕ್ಟೋಬರ್ 22: ಪಾಕಿಸ್ತಾನದ ಗೂಢಚಾರನೊಬ್ಬನನ್ನು ಜಮ್ಮು-ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ಬಂಧಿಸಲಾಗಿದೆ. ಭಾರತೀಯ ಸೇನೆ ನಿಯೋಜನೆಯ ಮಾಹಿತಿ ಇದ್ದ ನಕ್ಷೆ ಆತನ ಬಳಿ ಪತ್ತೆಯಾಗಿದೆ. ಬೋಧರಾಜ್ ಬಂಧಿತ. ಜೆರ್ದಾ ಗ್ರಾಮದ ಬಳಿ ಶನಿವಾರ ವಶಕ್ಕೆ ಪಡೆಯಲಾಗಿದೆ.
ಸೇನಾ ಗುಪ್ತಚರರಿಂದ ದೊರೆತ ಮಾಹಿತಿ ಆಧರಿಸಿ, ಜಮ್ಮು-ಕಾಶ್ಮೀರದ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಗಡಿ ಪ್ರದೇಶವಾದ ರಾಮ್ ಘರ್ ನಲ್ಲಿ ಕಾರ್ಯಾಚರಣೆ ನಡೆದಿದೆ. ಗೂಢಚಾರ ಭಾರತೀಯ ಸೇನೆಯ ಬಗ್ಗೆ ಪ್ರಮುಖ ಮಾಹಿತಿಗಳನ್ನು ಕಲೆ ಹಾಕಿ, ಅದನ್ನು ಪಾಕಿಸ್ತಾನಕ್ಕೆ ರವಾನಿಸುವುದಕ್ಕೆ ನೇಮಿಸಲಾಗಿದೆ ಎಂಬ ಸಂಗತಿ ಸೇನಾ ಗುಪ್ತಚರರು ಪತ್ತೆ ಹಚ್ಚಿದ್ದಾರೆ.['ಪಾಕ್ ಸೇನಾ ನೆರವು ನೀಡಿದರೆ ಉಪಖಂಡದ ನಕ್ಷೆಯೇ ಬದಲು']

ಭದ್ರತಾ ಪಡೆಗಳ ನಿಯೋಜನೆ ಮಾಹಿತಿಯನ್ನು ಕಳಿಸಿದ್ದಾನೆ ಎಂದು ಸೇನಾ ಗುಪ್ತಚರ ಅಧಿಕಾರಿ ತಿಳಿಸಿದ್ದಾರೆ. ಜಮ್ಮು-ಕಾಶ್ಮೀರದ ಪೊಲೀಸರು ಆತನ ಮೇಲೆ ಕಣ್ಗಾವಲು ಇರಿಸಿದ್ದರು. ಅತನ ಚಲನವಲನ ಅನುಮಾನಾಸ್ಪದವಾಗಿತ್ತು. ಬಂಧಿಸುವ ವೇಳೆಯಲ್ಲಿ ಬೋಧರಾಜ್ ತಪ್ಪಿಸಿಕೊಳ್ಳುವುದಕ್ಕೆ ಯತ್ನಿಸಿದ್ದಾನೆ.[ಪಾಕ್ ನ 7 ಸೈನಿಕರ ಸಾವು ಅಂದಿದೆ ಬಿಎಸ್ ಎಫ್, ಇಲ್ಲ ಅಂತಿದೆ ಪಾಕ್]
ಆತನನ್ನು ಬಂಧಿಸಿದ ಪೊಲೀಸರಿಗೆ ಪಾಕಿಸ್ತಾನದ ಎರಡು ಸಿಮ್ ಕಾರ್ಡ್, ಸೇನೆ ನಿಯೋಜನೆಯ ಮಾಹಿತಿಯಿರುವ ಮ್ಯಾಪ್, ಮೊಬೈಲ್ ಫೋನ್ ಗಳು ಹಾಗೂ ಮೆಮೊರಿ ಚಿಪ್ ದೊರೆತಿವೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications