ಶ್ರೀಶಾಂತ್ ಗೆ ಆಜೀವ ನಿಷೇಧ ಹೇರಿದ ಬಿಸಿಸಿಐ
ಮುಂಬೈ, ಸೆ.13: ದೇಶಾದ್ಯಂತ ಕೋಲಾಹಲ ಸೃಷ್ಟಿಸಿದ್ದ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಆರೋಪಿಗಳಾಗಿರುವ ಶ್ರೀಶಾಂತ್, ಅಜಿತ್ ಚಂಡಿಲಾ, ಅಂಕಿತ್ ಚೌಹಾಣ್ ಅವರು ತಪ್ಪಿತಸ್ಥರು ಎಂದು ಬಿಸಿಸಿಐ ತನಿಖಾ ವರದಿ ಹೇಳಿರುವ ಹಿನ್ನೆಲೆಯಲ್ಲಿ ಶ್ರೀಶಾಂತ್ ಅವರಿಗೆ ಆಜೀವ ನಿಷೇಧ ಹೇರಲಾಗಿದೆ ಎಂದು ಬಿಸಿಸಿಐ ಪ್ರಕಟಿಸಿದೆ.
'ಬಿಸಿಸಿಐ ನಿರ್ಣಯ ಹೊರ ಬೀಳುತ್ತಿದ್ದಂತೆ ಪ್ರತಿಕ್ರಿಯೆ ನೀಡಿರುವ ಶ್ರೀಶಾಂತ್ ಇದು ಅತ್ಯಂತ ಆಶ್ಚರ್ಯಕರವಾಗಿದೆ. ಕೋರ್ಟಿನಲ್ಲಿ ಇನ್ನೂ ಕೇಸ್ ಬಾಕಿಯಿದೆ. ಜಾಮೀನು ಸಿಕ್ಕಿದೆ. ಬಿಸಿಸಿಐ ನಡೆ ಅಚ್ಚರಿ ತಂದಿದೆ' ಎಂದಿದ್ದಾರೆ.
ಬಂಧನಕ್ಕೊಳಗಾಗಿದ್ದ ಕ್ರಿಕೆಟರ್ ಅಜಿತ್ ಚಂಡಿಲಾಗೆ ಇತ್ತೀಚೆಗಷ್ಟೇ ಜಾಮೀನು ಸಿಕ್ಕಿತ್ತು. ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಮಿಸ್ಸಿಂಗ್ ಲಿಂಕ್ ಪತ್ತೆಯಾಗಿ ಮತ್ತೊಮ್ಮೆ ತನಿಖೆ ನಡೆಸಿ ಎಂದು ನ್ಯಾಯಾಲಯ ಆದೇಶಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಇಂಡಿಯನ್ ಎಕ್ಸ್ ಪ್ರೆಸ್ ವರದಿಯಂತೆ ರವಿ ಸವಾನಿ ನೇತೃತ್ವದ ಬಿಸಿಸಿಐ ತನಿಖಾ ತಂಡ ತನ್ನ ಅಂತಿಮ ವರದಿಯನ್ನು ಬಿಸಿಸಿಐಗೆ ಸಲ್ಲಿಸಿದ್ದು ವೇಗಿ ಅಮಿತ್ ಸಿಂಗ್ ಕೂಡಾ ತಪ್ಪಿತಸ್ಥ ಎಂದು ಹೇಳಲಾಗಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರರು ಕಳ್ಳಾಟದಲ್ಲಿ ಭಾಗಿಯಾಗಿದ್ದು ಸಾಬೀತಾಗಿದೆ.

'ಸ್ಪಾಟ್ ಫಿಕ್ಸಿಂಗ್ ಪ್ರಕರಣದ ರುವಾರಿ ಶ್ರೀಶಾಂತ್ ಎಂಬ ಶಂಕೆ ಮೊದಲಿನಿಂದಲೂ ಇತ್ತು. ಪ್ರಾಥಮಿಕ ವರದಿಯಲ್ಲೂ ಈ ಬಗ್ಗೆ ಪ್ರಸ್ತಾಪಿಸಲಾಗಿತ್ತು. ಬುಕ್ಕಿಗಳ ಜತೆ ನಿರಂತರ ಸಂಪರ್ಕ ಹೊಂದಿದ್ದ ಶ್ರೀಶಾಂತ್ ಇತರ ಆಟಗಾರರನ್ನು ನಂತರ ಗ್ಯಾಂಗ್ ಗೆ ಸೇರಿಸಿಕೊಂಡಿದ್ದರು' ಎಂದು ವರದಿಯಲ್ಲಿ ಹೇಳಲಾಗಿದೆ.
ಪ್ರಕರಣ ಕೋರ್ಟಿನಲ್ಲಿದೆ: ಬುಕ್ಕಿಗಳಾದ ಜಿತೇಂದ್ರ ಕುಮಾರ್ ಜೈನ್, ರಮೇಶ್ ವ್ಯಾಸ್, ಅಶ್ವನಿ ಅಗರವಾಲ್, ಸುನಿಲ್ ಭಾಟಿಯಾ ಹಾಗೂ ಫಿರೋಜ್ ಫಾರಿದ್ ಅನ್ಸಾರಿ ಜಾಮೀನು ಅರ್ಜಿ ತಿರಸ್ಕಾರಗೊಂಡಿದೆ.
ಅಜಿತ್ ಚಂಡಿಲಾ, ಶ್ರೀಶಾಂತ್ ಜತೆ ಸಂಪರ್ಕ ಹೊಂದಿದ್ದ ಬುಕ್ಕಿಗಳ ಹೇಳಿಕೆಗಳಲ್ಲಿ ಗೊಂದಲ ಕಂಡು ಬಂದಿದ್ದು, ಈ ಕೇಸ್ ನಲ್ಲಿ ಮಿಸ್ಸಿಂಗ್ ಲಿಂಕ್ ಇದೆ. ವಿಶೇಷ ಸೆಲ್ ಆರಂಭಿಸಿ ದೆಹಲಿ ಪೊಲೀಸರು ಮತ್ತೊಮ್ಮೆ ತನಿಖೆ ನಡೆಸುವಂತೆ ಆಯುಕ್ತರಿಗೆ ಸೂಚಿಸಲಾಗಿದೆ ಎಂದು ಜಡ್ಜ್ ಧರ್ಮೇಶ್ ಅವರು ತಮ್ಮ ತೀರ್ಪಿನಲ್ಲಿ ಹೇಳಿದ್ದಾರೆ.
ಸ್ಪಾಟ್ ಫಿಕ್ಸಿಂಗ್ನಲ್ಲಿ ಭಾಗಿಯಾಗಿರುವವರ ಮೇಲೆ ಮಹಾರಾಷ್ಟ್ರ ಅಪರಾಧ ನಿಯಂತ್ರಣ ಕಾಯ್ದೆ (ಮೊಕಾ) ಪ್ರಕಾರ ದೂರು ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್ 420, 409 ಹಾಗೂ 120 (ಬಿ) ಹಾಗೂ ಮೋಕಾ ಸೆಕ್ಷನ್ 6 ಮತ್ತು 8 ಅಡಿಯಲ್ಲಿ ಆರೋಪಗಳನ್ನು ದಾಖಲಿಸಲಾಗಿದೆ.
ಶ್ರೀಶಾಂತ್ ಗೆಳೆಯ ಅಭಿಷೇಕ್ ಶುಕ್ಲಾ ಅವರನ್ನು ಮೋಕಾ ಅಡಿಯಲ್ಲಿ ಆರೋಪಿಯನ್ನಾಗಿಸಿಲ್ಲ. ಪಾಕಿಸ್ತಾನ, ದುಬೈ ಹಾಗೂ ಇಂಗ್ಲೆಂಡ್ ನಿಂದ ದಾವೂದ್ ಇಬ್ರಾಹಿಂ ಹಾಗೂ ಛೋಟಾ ಶಕೀಲ್ ಸ್ಪಾಟ್ ಫಿಕ್ಸಿಂಗ್ ನಿಯಂತ್ರಿಸುತ್ತಿದ್ದರು. ಪಾಕಿಸ್ತಾನ ಬುಕ್ಕಿ ಸಲ್ಮಾನ್, ದುಬೈ ಬುಕ್ಕಿ ಜಾವೇದ್ aka ಡಾಕ್ಟರ್ aka ಜಾವೇದ್ ಛೂಟನಿ ಅವರು ಭಾರತದ ಬುಕ್ಕಿಗಳಾದ ರಮೇಶ್ ವ್ಯಾಸ್ ಹಾಗೂ ಟಿಂಕು ಮಂಡಿ ಮೂಲಕ ಫಿಕ್ಸಿಂಗ್ ಮಾಡುತ್ತಿದ್ದರು ಎಂದು ಅರೋಪಪಟ್ಟಿಯಲ್ಲಿ ಹೇಳಲಾಗಿತ್ತು.
-
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications