Sri Lanka Crisis; ವಿಮಾನ ಸಂಚಾರ ಕಡಿಮೆ ಮಾಡಿದ ಏರ್ ಇಂಡಿಯಾ
ನವದೆಹಲಿ, ಏಪ್ರಿಲ್ 03; ಆರ್ಥಿಕ ಮುಗ್ಗಟ್ಟಿಗೆ ಸಿಲುಕಿರುವ ಶ್ರೀಲಂಕಾಕ್ಕೆ ಪ್ರಯಾಣ ಮಾಡುವ ಜನರ ಸಂಖ್ಯೆಯಲ್ಲಿ ಗಣನೀಯ ಕುಸಿತ ಕಂಡಿದೆ. ಈ ಹಿನ್ನಲೆಯಲ್ಲಿ ಏರ್ ಇಂಡಿಯಾ ಶ್ರೀಲಂಕಾಕ್ಕೆ ಸಂಚಾರ ನಡೆಸುವ ವಿಮಾನಗಳ ಸಂಖ್ಯೆಯನ್ನು ಕಡಿತಗೊಳಿಸಲಿದೆ.
ಭಾನುವಾರ ಏರ್ ಇಂಡಿಯಾ ಈ ಕುರಿತು ಮಾಹಿತಿ ನೀಡಿದೆ. ಏಪ್ರಿಲ್ 9ರಿಂದ ಜಾರಿಗೆ ಬರುವಂತೆ ವಾರದಲ್ಲಿ 13 ವಿಮಾನಗಳು ಮಾತ್ರ ಶ್ರೀಲಂಕಾಕ್ಕೆ ಸಂಚಾರ ನಡೆಸಲಿವೆ. ಇಷ್ಟು ದಿನ 16 ವಿಮಾನಗಳು ಸಂಚಾರ ನಡೆಸುತ್ತಿದ್ದವು.
ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಶ್ರೀಲಂಕಾ ಇಂಧನದ ಕೊರತೆ, ಅಗತ್ಯ ವಸ್ತುಗಳ ಕೊರತೆ ಎದುರಿಸುತ್ತಿದೆ. ಈ ಹಿನ್ನಲೆಯಲ್ಲಿ ದ್ವೀಪ ರಾಷ್ಟ್ರಕ್ಕೆ ಭೇಟಿ ನೀಡುವವರ ಸಂಖ್ಯೆ ಕುಸಿತಗೊಂಡಿದೆ. ಇದರಿಂದಾಗಿ ಮುಂದಿನ ವಾರದಿಂದ ವಾರಕ್ಕೆ 13 ವಿಮಾನಗಳು ಮಾತ್ರ ಸಂಚಾರ ನಡೆಸಲಿವೆ.

ಏರ್ ಇಂಡಿಯಾ ವಕ್ತಾರ ಈ ಕುರಿತು ಮಾತನಾಡಿದ್ದು, ಪ್ರಸ್ತುತ ಏರ್ ಇಂಡಿಯಾ ದೆಹಲಿಯಿಂದ ಸಂಚಾರ ನಡೆಸುವ ಪ್ರತಿನಿತ್ಯದ ವಿಮಾನ, ಚೆನ್ನೈನಿಂದ ಸಂಚಾರ ನಡೆಸುವ ವಿಮಾನ ಸೇರಿ 16 ವಿಮಾನಗಳು ಶ್ರೀಲಂಕಾಕ್ಕೆ ಸಂಚಾರ ನಡೆಸುತ್ತಿವೆ. ಹೊಸ ವೇಳಾಪಟ್ಟಿಯಂತೆ 13 ವಿಮಾನ ಮಾತ್ರ ಸಂಚಾರ ನಡೆಸಲಿವೆ ಎಂದರು.
ಚೆನ್ನೈನಿಂದ ಸಂಚಾರ ನಡೆಸುವ ವಿಮಾನಗಳ ಹಾರಾಟ ಹಾಗೆಯೇ ಇರುತ್ತದೆ. ಆದರೆ ದೆಹಲಿಯಿಂದ ವಾರದಲ್ಲಿ 7 ವಿಮಾನದ ಬದಲು 4 ವಿಮಾನಗಳು ಮಾತ್ರ ಸಂಚಾರ ನಡೆಸಲಿವೆ. ಏಪ್ರಿಲ್ 9ರಿಂದ ಇದು ಜಾರಿಗೆ ಬರಲಿದೆ.
ಎಐ 283 ಸಂಖ್ಯೆಯ ವಿಮಾನ ದೆಹಲಿ-ಕೊಲೊಂಬೊ ನಡುವೆ ಸೋಮವಾರ, ಬುಧವಾರ, ಶುಕ್ರವಾರ ಮತ್ತು ಭಾನುವಾರ ಮಾತ್ರ ಸಂಚಾರ ನಡೆಸಲಿದೆ. ಏಪ್ರಿಲ್ 8 ರಿಂದ ಮೇ 30ರ ತನಕ ಈ ವೇಳಾಪಟ್ಟಿ ಜಾರಿಯಲ್ಲಿರುತ್ತದೆ.
ಎಐ 284 ಸಂಖ್ಯೆಯ ಕೊಲಂಬೊ-ದೆಹಲಿ ವಿಮಾನ ಸೋಮವಾರ, ಮಂಗಳವಾರ, ಗುರುವಾರ ಮತ್ತು ಶನಿವಾರ ಸಂಚಾರ ನಡೆಸಲಿದೆ. ಏಪ್ರಿಲ್ 9 ರಿಂದ ಮೇ 31ರ ತನಕ ಈ ವೇಳಾಪಟ್ಟಿ ಇರುತ್ತದೆ. ಬಳಿಕ ಪರಿಸ್ಥಿತಿ ನೋಡಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ.
ಶುಕ್ರವಾರ ಕೊಲಂಬೊದಲ್ಲಿರುವ ಶ್ರೀಲಂಕಾದ ಅಧ್ಯಕ್ಷ ಗೊಟಬಯ ರಾಜಪಕ್ಸ ನಿವಾಸದ ಮುಂದೆ ಬೃಹತ್ ಪ್ರತಿಭಟನೆ ನಡೆದಿತ್ತು. ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಆಗ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿತ್ತು.
ಭಾನುವಾರ ಶ್ರೀಲಂಕಾದಲ್ಲಿ ವೀಕೆಂಡ್ ಕರ್ಫ್ಯೂ ಜೊತೆಗೆ ಫೇಸ್ ಬುಕ್, ವಾಟ್ಸಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳನ್ನು ಬಂದ್ ಮಾಡಲಾಗಿದೆ. ಜನರು ಪ್ರತಿಭಟನೆ ನಡೆಸುವುದನ್ನು ತಡೆಯಲು ಈ ತೀರ್ಮಾನ ಕೈಗೊಳ್ಳಲಾಗಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications