ಚಿತ್ರ ಸಂಪುಟ: ಅಯೋಧ್ಯೆ ಸೇರಿದಂತೆ ವಿವಿಧೆಡೆ ರಾಮನವಮಿ
ತಮಿಳುನಾಡಿನ ರಾಮೇಶ್ವರಂ ಸೇರಿದಂತೆ, ದೇಶದ ಮೂಲೆಮೂಲೆಯಲ್ಲಿರುವ ರಾಮನ ದೇಗುಲಗಳಲ್ಲಿ ವಿವಿಧ ರೀತಿಯ ಪೂಜೆ, ಪುನಸ್ಕಾರ, ಅಲಂಕಾರಗಳು ಭಕ್ತ ಸಮೂಹಕ್ಕೆ ತೃಪ್ತಿ ನೀಡಿದವು.
ಶ್ರೀರಾಮ ನವಮಿಯನ್ನು ಏಪ್ರಿಲ್ 5ರಂದು ಭಾರತದ ವಿವಿಧೆಡೆ ಸಂಭ್ರಮದಿಂದ ಆಚರಿಸಲಾಗುತ್ತಿದೆ. ರಾಮನ ಜನ್ಮಸ್ಥಳವಾದ ಅಯೋಧ್ಯೆಯಲ್ಲಿಯೂ ಈ ಹಬ್ಬದ ಸಡಗರ ಜೋರಾಗಿತ್ತು.
ತಮಿಳುನಾಡಿನ ರಾಮೇಶ್ವರಂ ಸೇರಿದಂತೆ, ದೇಶದ ಮೂಲೆಮೂಲೆಯಲ್ಲಿರುವ ರಾಮನ ದೇಗುಲಗಳಲ್ಲಿ ವಿವಿಧ ರೀತಿಯ ಪೂಜೆ, ಪುನಸ್ಕಾರ, ಅಲಂಕಾರಗಳು ಭಕ್ತ ಸಮೂಹಕ್ಕೆ ತೃಪ್ತಿ ನೀಡಿದವು.
ರಾಮನ ದೇವಾಲಯಗಳಷ್ಟೇ ಅಲ್ಲ, ವಿಷ್ಣುವಿಗೆ ಸಂಬಂಧಿಸಿದ ಎಲ್ಲಾ ದೇಗುಲಗಳಲ್ಲಿ, ಪುಣ್ಯ ಕ್ಷೇತ್ರಗಳಲ್ಲಿ ರಾಮ ನವಮಿಯನ್ನು ಆಚರಿಸಲಾಯಿತು. ರಾಮಭಕ್ತನಾದ ಹನುಮಂತನ ದೇಗುಲಗಳಲ್ಲಿಯೂ ರಾಮ ನವಮಿಯನ್ನು ಅತ್ಯಂತ ಧಾರ್ಮಿಕವಾಗಿ ಆಚರಿಸಲಾಯಿತು. ಇವುಗಳಲ್ಲಿ ತಿರುಪತಿಯ ವೆಂಕಟೇಶ್ವರ ಸ್ವಾಮಿ, ಮೇಲುಕೋಟೆಯ ಚೆಲುವ ನಾರಾಯಣ ಸ್ವಾಮಿ ದೇಗುಲಗಳು ಪ್ರಮುಖವಾದವು.
ಇಷ್ಟೇ ಅಲ್ಲದೆ, ಕೆಲವಾರು ನದೀ ಸಂಗಮಗಳಲ್ಲಿ ಭಕ್ತರು ಪುಣ್ಯ ಸ್ನಾನ ಮಾಡಿ ಧನ್ಯತಾ ಭಾವ ಪಡೆದರು.
ಈ ಸಂದರ್ಭದಲ್ಲಿ ಅಯೋಧ್ಯೆ ಹಾಗೂ ಮುಂತಾದೆಡೆ ಏಪ್ರಿಲ್ 5ರ ಮುಂಜಾನೆ ನಡೆದ ರಾಮನವಮಿ ಪೂಜೆಗಳ, ಭಕ್ತ ಸಮೂಹದ ಕೆಲ ಫೋಟೋಗಳು ಇಲ್ಲಿ ನಿಮಗಾಗಿ.

ಬಿಗಿ ಭದ್ರತೆ
ಅಯೋಧ್ಯೆಯಲ್ಲಿರುವ ಶ್ರೀ ರಾಮ ದೇಗುಲದಲ್ಲಿ ಅಪಾರ ಭಕ್ತ ಸಮೂಹ ದೇಶದ ನಾನಾ ಭಾಗಗಳಿಂದ ಆಗಮಿಸಿತ್ತು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮಂದಿರದಲ್ಲಿ ಭಾರೀ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು.

ಧನ್ಯತಾ ಭಾವ
ಅಯೋಧ್ಯೆಯಲ್ಲಿನ ಶ್ರೀರಾಮ ಮಂದಿರದಲ್ಲಿರುವ ಮುದ್ದು ಮೊಗದ ಶ್ರೀರಾಮ. ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ ಭಕ್ತರ ಆಯಾಸವನ್ನು ಕ್ಷಣಮಾತ್ರದಲ್ಲೇ ಮಾಯವಾಗಿಸುವ ಭಾವ ಈ ಮೂರ್ತಿಯದ್ದು.

ಮೆರವಣಿಗೆ
ಶ್ರೀರಾಮನವಮಿ ಪ್ರಯುಕ್ತ ತಮಿಳುನಾಡಿನ ರಾಮೇಶ್ವರಂನಲ್ಲಿರುವ ರಾಮ ದೇಗುಲದ ಮುಂದೆ ಆರಂಭಗೊಂಡ ಉತ್ಸವ. ಈ ಉತ್ಸವದಲ್ಲಿ ಪಾಲ್ಗೊಂಡಿದ್ದ ನಾನಾ ಭಕ್ತರು ಶ್ರೀರಾಮ ಭಜನೆಗಳನ್ನು ಹೇಳುತ್ತಾ ಸಾಗಿದ್ದು ಆಕರ್ಷಣೀಯವಾಗಿತ್ತು.

ವಾರಣಾಸಿಗೆ ರಾಮ ಭಕ್ತರು
ಶ್ರೀರಾಮನವಮಿ ಪ್ರಯುಕ್ತ ವಾರಣಾಸಿಯಲ್ಲಿನ ಗಂಗಾ ನದಿಯಲ್ಲಿ ಭಕ್ತ ಜನರು ಪವಿತ್ರ ಸ್ನಾನ ಮಾಡಿದರು. ಪೂಜೆಯ ನಂತರ ಕ್ಷೇತ್ರದಲ್ಲಿರುವ ಶ್ರೀರಾಮ ಸೇರಿದಂತೆ ನಾನಾ ದೇಗುಲಗಳಿಗೆ ತೆರಳಿ ಪೂಜೆ ಸಲ್ಲಿಸಿದರು.

ಸ್ನಾನ, ಪೂಜೆ
ಶ್ರೀರಾಮನವಮಿ ಪ್ರಯುಕ್ತ ವಾರಣಾಸಿಗೆ ಪವಿತ್ರ ಸ್ನಾನಕ್ಕಾಗಿ ಆಗಮಿಸಿದ ಭಕ್ತ ಸಮೂಹ. ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ ಭಕ್ತರು ಗಂಗೆಯಲ್ಲಿ ಮಿಂದು ಧನ್ಯತಾ ಭಾವ ಪಡೆದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications