ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಶ್ರೀ ಶ್ರೀ ರವಿಶಂಕರ್ ಅವರನ್ನು ಗುಂಡಿಟ್ಟು ಕೊಲ್ಲಬೇಕಂತೆ!
ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಅವರನ್ನು ಗುಂಡಿಟ್ಟು ಕೊಲ್ಲಬೇಕೆಂದು ಫೇಸ್ ಬುಕ್ ನಲ್ಲಿ ಪೋಸ್ಟ್. ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು. ಪ್ರಕರಣದ ತನಿಖೆ ನಡೆಸಿ ಪ್ರಾಥಮಿಕ ವರದಿ ಕಲೆಹಾಕಿದ ಪೊಲೀಸರು.
ಬೆಂಗಳೂರು, ಜೂನ್ 9: ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಅವರನ್ನು ಗುಂಡಿಟ್ಟು ಕೊಲ್ಲಬೇಕೆಂದು ವ್ಯಕ್ತಿಯೊಬ್ಬ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದು ಸಂಚಲನ ಸೃಷ್ಟಿಸಿದೆ.
ಇಂಥದ್ದೊಂದು ಪೋಸ್ಟ್, ಫೇಸ್ ಬುಕ್ ನಲ್ಲಿ ಹಾಕಿರುವುದು ಬೆಳಕಿಗೆ ಬಂದ ಕೂಡಲೇ ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಕಗ್ಗಲಿಪುರ ಪೊಲೀಸ್ ಠಾಣೆಗೆ ದೂರು ನೀಡಿದೆ.
ಈ ಹಿನ್ನೆಲೆಯಲ್ಲಿ ಈ ಫೇಸ್ ಬುಕ್ ಪೋಸ್ಟ್ ನ ಬೆನ್ನು ಬಿದ್ದಿರುವ ಪೊಲೀಸರು, ಪ್ರಾಥಮಿಕ ಮಾಹಿತಿಗಳನ್ನು ಕಲೆಹಾಕಿದ್ದಾರೆ.
ಪೊಲೀಸರು ಕಲೆ ಹಾಕಿರುವ ಮಾಹಿತಿಯ ಪ್ರಕಾರ, ಈ ಫೇಸ್ ಬುಕ್ ಪೋಸ್ಟ್ ಮಾಡಿದವನ ಹೆಸರು ಹಾರೋಹಳ್ಳಿ ರವೀಂದ್ರ. ಫೇಸ್ ಬುಕ್ ನ ಈತನ ಪ್ರೊಫೈಲ್ ಹೇಳುವ ಪ್ರಕಾರ, ಈತ ಕನಕಪುರ ರಸ್ತೆಯ ಹಾರೋಹಳ್ಳಿಯವರನಾಗಿದ್ದು ಪದವೀಧರನಾಗಿದ್ದಾನೆ. ಸದ್ಯಕ್ಕೆ ಈತನ ಫೇಸ್ ಬುಕ್ ಹೆಸರನ ವಿರುದ್ಧವೇ ಕೇಸು ದಾಖಲಿಸಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಈ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
Comments
sri sri ravishankar art of living facebook bengaluru police ಶ್ರೀ ಶ್ರೀ ರವಿಶಂಕರ್ ಆರ್ಟ್ ಆಫ್ ಲಿವಿಂಗ್ ಫೇಸ್ ಬುಕ್ ಬೆಂಗಳೂರು ಪೊಲೀಸ್
English summary
The police are on the lookout for a man who issued a death threat to Art of Living founder Sri Sri Ravishankar. A post on Facebook by the man said to be from Mysuru stated that the spiritual leader should be shot in the head.
Story first published: Friday, June 9, 2017, 12:00 [IST]