ಶ್ರೀನಗರದಲ್ಲಿ 30 ವರ್ಷಗಳಲ್ಲೇ ಕನಿಷ್ಠ ಮತದಾನ, ಹಿಂಸಾಚಾರಕ್ಕೆ 6 ಬಲಿ
ಶ್ರೀನಗರ ಲೋಕಸಭಾ ಸ್ಥಾನಕ್ಕೆ ನಡೆದ ಉಪಚುನಾವಣೆ ವೇಳೆ ಹಿಂಸಾಚಾರ ಭುಗಿಲೆದ್ದಿದೆ. ಪರಿಣಾಮ ಘರ್ಷಣೆಯಲ್ಲಿ ಐವರು ಸಾವನ್ನಪ್ಪಿದ್ದರೆ, 36 ಜನ ಗಾಯಗೊಂಡಿದ್ದಾರೆ.
ಶ್ರೀನಗರ, ಏಪ್ರಿಲ್ 9: ಶ್ರೀನಗರ ಲೋಕಸಭಾ ಸ್ಥಾನಕ್ಕೆ ನಡೆದ ಉಪಚುನಾವಣೆ ವೇಳೆ ಹಿಂಸಾಚಾರ ಭುಗಿಲೆದ್ದಿದೆ. ಪರಿಣಾಮ ಘರ್ಷಣೆಯಲ್ಲಿ ಆರು ಜನ ಸಾವನ್ನಪ್ಪಿದ್ದರೆ, 36 ಜನ ಗಾಯಗೊಂಡಿದ್ದಾರೆ.
ಬುದ್ಗಾಮ್ ಜಿಲ್ಲೆಯಲ್ಲಿ ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವೆ ಸಂಘರ್ಷ ನಡೆಯಿತು. ಇಲ್ಲಿನ ಪಖೇರ್ಪೋರಾ, ಬೀರ್ವಾಹ್ ಚದೂರ ಮತ್ತು ಮಗಮ್ ಪ್ರದೇಶದಲ್ಲಿ ಹೆಚ್ಚಿನ ಹಿಂಸಾಚಾರ ನಡೆದಿದೆ.
ನೂರಾರು ಪ್ರತಿಭಟನಾಕಾರರು ಇಲ್ಲಿನ ಪಖೇರ್ಪೊರಾ ಮತಗಟ್ಟೆಯ ಮೇಲೆ ಕಲ್ಲು ತೂರಾಟ ನಡೆಸಿದರು. ಈ ವೇಳೆ ಭದ್ರತಾ ಪಡೆಗಳು ರಕ್ಷಣೆಗಾಗಿ ಹಲವು ಸುತ್ತಿನ ಗುಂಡಿನ ದಾಳಿ ನಡೆಸಿದರು. ಹೀಗಿದ್ದೂ ಪರಿಸ್ಥಿತಿ ತಹಬದಿಗೆ ಬರದಿದ್ದಾಗ ಗುಂಡಿನ ದಾಳಿ ಆರಂಭಿಸಿದ್ದಾರೆ. ಇದರಲ್ಲಿ ಇಬ್ಬರು ಸಾವನ್ನಪ್ಪಿದ್ದರೆ 4 ಜನ ಗಾಯಗೊಂಡಿದ್ದಾರೆ. ಸಾವಿಗೀಡಾದವರಿಬ್ಬರೂ 20 ವರ್ಷ ಒಳಗಿನವರಾಗಿದ್ದಾರೆ.

ಇದೇ ರೀತಿ ಬೀರ್ವಾಹ್ ಚದೂರ ಮತ್ತ ಮಗಮ್ ಭಾಗಗಳಲ್ಲಿ ಹಿಂಸಾಚಾರ ನಡೆದಿದ್ದು 2ಜನ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ.
ಘರ್ಷಣೆ ಹಿನ್ನಲೆಯಲ್ಲಿ ಬುದ್ಗಾಮ್ ನ ಹಲವು ಮತಗಟ್ಟೆಗಳಲ್ಲಿ ಸಂಜೆ 4 ಗಂಟೆ ವೇಳೆಗೆ ಕೇವಲ 5.52ರಷ್ಟು ಮತದಾನವಾಗಿದೆ. ಸಾಮಾನ್ಯವಾಗಿ ಹೆಚ್ಚಿನ ಮತದಾನ ನಡೆಯುತ್ತಿದ್ದ ಬುದ್ಗಾಮ್, ಇಚ್ಗಾಮ್, ಮಲೋರಾದಲ್ಲಿಯೂ ಹೇಳಿಕೊಳ್ಳುವಂಥ ಮತದಾನ ನಡೆದಿಲ್ಲ.
ಗಂಡೆರ್ಬಾಲ್ ಜಿಲ್ಲೆಯಲ್ಲಿ ಪ್ರತಿಭಟನಾಕಾರರ ಗುಂಪು ಮತಗಟ್ಟೆಯ ಮೇಲೆ ಕಲ್ಲು ತೂರಾಟ ಮಾಡಿ, ಪೆಟ್ರೋಲ್ ಬಾಂಬ್ ಗಳನ್ನು ಎಸೆದಿದ್ದಾರೆ. ಪರಿಣಾಮ ಇಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.
ಕಳೆದ ಜುಲೈ 8ರಂದು ಹಿಜ್ಬುಲ್ಲಾ ಮುಜಾಹಿದ್ದೀನ್ ಕಮಾಂಡರ್ ಬುರ್ಹಾನ್ ವನಿ ಸಾವನ್ನಪ್ಪಿದ್ದ. ನಂತರ ಕಾಶ್ಮೀರದಲ್ಲಿ ಹುಟ್ಟಿಕೊಂಡ ಹಿಂಸಾಚಾರದಲ್ಲಿ ಕಾಶ್ಮೀರಿಗರ ಮೇಲೆ ದೌರ್ಜನ್ಯ ನಡೆದಿದೆ ಎಂದು ಹೇಳಿ ಇಲ್ಲಿನ ಪಿಡಿಪಿ ಸಂಸದ ತಾರೀಕ್ ಹಮೀದ್ ಕರ್ರಾ ರಾಜೀನಾಮೆ ನೀಡಿದ್ದರು. ಹೀಗಾಗಿ ಇಲ್ಲಿ ಮತದಾನ ನಡೆಯುತ್ತಿದೆ.
2014ರ ಲೋಕಸಭೆ ಚುನಾವಣೆ ವೇಳೆ ಇಲ್ಲಿ ಶೇಕಡಾ 26 ಮತದಾನ ನಡೆದಿತ್ತು. ಈ ಬಾರಿ ಅದಕ್ಕಿಂತಲೂ ತುಂಬಾ ಕಡಿಮೆ ಮತದಾನ ದಾಖಲಾಗುವ ಸಾಧ್ಯತೆ ಇದೆ.
UPDATE: ಸಂಜೆ 5 ಗಂಟೆ ವೇಳೆಗೆ ಶ್ರೀನಗರದಲ್ಲಿ ಕೇವಲ ಶೇಕಡಾ 6.5 ಮತದಾನ ನಡೆದಿದೆ. ಇದು ಕಳೆದ 30 ವರ್ಷಗಳಲ್ಲಿ ದಾಖಲಾದ ಕನಿಷ್ಠ ಮತದಾನವಾಗಿದೆ. ಹೆಚ್ಚಿನ ಮತಗಟ್ಟೆಗಳಲ್ಲಿ ಮತದಾನ 50, 100 ಗಡಿಯೂ ದಾಟಿಲ್ಲ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications