ಪ್ರಧಾನಿ ಮೋದಿ ರೋಡ್ ಶೋ ವೇಳೆ ಕುಸಿದ ವೇದಿಕೆ; ಏಳು ಮಂದಿಗೆ ಗಾಯ
ಪ್ರಧಾನಿ ನರೇಂದ್ರ ಮೋದಿ ಭಾನುವಾರ ಜಬಲ್ಪುರದಲ್ಲಿ ರೋಡ್ ಶೋ ನಡೆಸುವ ಮೂಲಕ ಮಧ್ಯಪ್ರದೇಶದಲ್ಲಿ ಲೋಕಸಭಾ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಪ್ರಧಾನಮಂತ್ರಿಯವರ ರೋಡ್ ಶೋ ನೋಡಲು ಸಾವಿರಾರು ಜನ ಸೇರಿದ್ದರು. ಮೋದಿ ರೋಡ್ ಶೋ ಸಂದರ್ಭದಲ್ಲಿ ಜಬಲ್ಪುರದಲ್ಲಿ ವೇದಿಕೆ ಕುಸಿದ ಪರಿಣಾಮ ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ನಗರ ಪೊಲೀಸ್ ವರಿಷ್ಠಾಧಿಕಾರಿ ಎಚ್.ಆರ್.ಪಾಂಡೆ ಘಟನೆಯ ಬಗ್ಗೆ ಮಾಹಿತಿ ನೀಡಿ, 'ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ವೇಳೆ ರಾಂಪುರ-ಗೋರಖ್ಪುರ ರಸ್ತೆಯ ರಸ್ತೆ ಬದಿಯಲ್ಲಿ ಸ್ವಾಗತ ವೇದಿಕೆ ನಿರ್ಮಿಸಲಾಗಿತ್ತು. ಪ್ರಧಾನ ಮಂತ್ರಿಯವರ ವಾಹನವು ವೇದಿಕೆಯ ಮುಂದೆ ಹಾದುಹೋದ ತಕ್ಷಣ, ಜನರು ಅವರನ್ನು ನೋಡಲು ವೇದಿಕೆಯ ಮೇಲೆ ಹತ್ತಿದರು, ಇದರಿಂದಾಗಿ ವೇದಿಕೆ ಕುಸಿದಿದೆ.' ಎಂದು ಹೇಳಿದ್ದಾರೆ.

"ಪ್ರಧಾನಿ ಬೆಂಗಾವಲು ಪಡೆ ಮುಂದೆ ಸಾಗಿದ ಕೂಡಲೇ ವೇದಿಕೆ ಕುಸಿದುಬಿತ್ತು. ಈ ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ ಓರ್ವ ಬಾಲಕಿ ಹಾಗೂ ಓರ್ವ ಪೊಲೀಸ್ ಸಿಬ್ಬಂದಿ ಸೇರಿದಂತೆ ನಾಲ್ವರಿಗೆ ಮೂಳೆ ಮುರಿತವಾಗಿದೆ. ಮೂವರು ಮಹಿಳೆಯರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಘಟನೆಯಿಂದಾಗಿ ರೋಡ್ ಶೋ ವೇಳೆ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಭದ್ರತಾ ಸಿಬ್ಬಂದಿ ತಕ್ಷಣ ಪರಿಸ್ಥಿತಿಯನ್ನು ಹತೋಟಿಗೆ ತಂದರು" ಎಂದು ಸಿಎಸ್ಪಿ ಪಾಂಡೆ ತಿಳಿಸಿದ್ದಾರೆ.
ಮೋದಿಗೆ ಅದ್ದೂರಿ ಸ್ವಾಗತ
ಲೋಕಸಭಾ ಚುನಾವಣೆ ಪ್ರಚಾರ ಆರಂಭಿಸಲು ಮಧ್ಯಪ್ರದೇಶಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅದ್ದೂರಿ ಸ್ವಾಗತ ಸಿಕ್ಕಿದೆ. ರೋಡ್ ಶೋ ವೇಳೆ ಜೈ ಶ್ರೀ ರಾಮ್ ಘೋಷಣೆ ಕೂಗುವ ಮೂಲಕ ಮೋದಿ ಅವರಿಗೆ ಬೆಂಬಲ ನೀಡಿದರು.
ಪ್ರಧಾನಿ ಮೋದಿಯವರ ರೋಡ್ ಶೋ ಭಗತ್ ಸಿಂಗ್ ಚೌಕದಿಂದ ಸಂಜೆ 6.40ಕ್ಕೆ ಪ್ರಾರಂಭವಾಯಿತು. ರೋಡ್ಶೋ ಸಮಯದಲ್ಲಿ, ಪ್ರಧಾನಿ ವಾಹನದಲ್ಲಿ ಮುಖ್ಯಮಂತ್ರಿ ಮೋಹನ್ ಯಾದವ್, ರಾಜ್ಯ ಸರ್ಕಾರದ ಸಚಿವರು ಮತ್ತು ಸ್ಥಳೀಯ ಶಾಸಕ ರಾಕೇಶ್ ಸಿಂಗ್ ಮತ್ತು ಲೋಕಸಭಾ ಅಭ್ಯರ್ಥಿ ಆಶಿಶ್ ದುಬೆ ಕೂಡ ಇದ್ದರು.
ರೋಡ್ಶೋ ವೇಳೆ ರಸ್ತೆಬದಿಯ ಮನೆಗಳ ಬಾಲ್ಕನಿ ಹಾಗೂ ಮೇಲ್ಛಾವಣಿಯಲ್ಲಿ ಹೆಚ್ಚಿನ ಜನರು ಸೇರಿದ್ದರು. ರೋಡ್ ಶೋದ ಹಲವು ಸ್ಥಳಗಳಲ್ಲಿ, ಮಹಿಳೆಯರು ಸಾಂಪ್ರದಾಯಿಕ ನೃತ್ಯ ಮತ್ತು ಪ್ರಧಾನಿ ಮೋದಿಯವರಿಗೆ ಆರತಿ ಬೆಳಗಿದರು.
ಮಧ್ಯಪ್ರದೇಶದಲ್ಲಿ ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ, ಮಹಾಕೋಶ ಪ್ರದೇಶದ ನಾಲ್ಕು ಲೋಕಸಭಾ ಸ್ಥಾನಗಳು ಸೇರಿದಂತೆ 6 ಸ್ಥಾನಗಳಿಗೆ ಏಪ್ರಿಲ್ 19 ರಂದು ಮತದಾನ ನಡೆಯಲಿದೆ.
-
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ: 13,712 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ ಎಸ್ಐಟಿ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು












Click it and Unblock the Notifications