ಪ್ರಧಾನಿ ಮೋದಿ 'ಮನ್ ಕಿ ಬಾತ್'ಗೆ ಟಕ್ಕರ್: 'ಸ್ಪೀಕಿಂಗ್ ಫಾರ್ ಇಂಡಿಯಾ' ಪಾಡ್ಕಾಸ್ಟ್ ಆರಂಭಿಸಿದ ಎಂಕೆ ಸ್ಟಾಲಿನ್
ಚೆನ್ನೈ, ಸೆಪ್ಟೆಂಬರ್ 02: ತಮಿಳುನಾಡು ಮುಖ್ಯಮಂತ್ರಿ ಮತ್ತು ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಅಧ್ಯಕ್ಷ ಎಂಕೆ ಸ್ಟಾಲಿನ್ ಅವರು ಗುರುವಾರ 'ಸ್ಪೀಕಿಂಗ್ ಫಾರ್ ಇಂಡಿಯಾ' ಶೀರ್ಷಿಕೆಯಡಿ ಪಾಡ್ಕಾಸ್ಟ್ ಸರಣಿಯನ್ನು ಘೋಷಿಸಿದ್ದಾರೆ. ಈ ಮೂಲಕ ಸಾಮಾಜಿಕ ಮಾಧ್ಯಮಗಳಲ್ಲಿ ಲೋಕಸಭಾ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಿದ್ದಾರೆ.
ಈ ಕುರಿತಾಗಿ ವಿಡಿಯೊವೊಂದನ್ನು ಹಂಚಿಕೊಂಡಿರುವ ಸ್ಟಾಲಿನ್, 'ನಾವು ಭಾರತದ ಒಳಿತಿಗಾಗಿ ಮಾತನಾಡುವ ಅವಶ್ಯಕತೆಯಿದೆ. ಬಿಜೆಪಿ ಮತ್ತು ಅದರ ಆಡಳಿತವು ದೇಶವನ್ನು ಹೇಗೆ ನಾಶಮಾಡಿತು ಎಂಬದನ್ನು ಜನರಿಗೆ ಹೇಳಿಬೇಕಿದೆ' ಎಂದು ತಿಳಿಸಿದ್ದಾರೆ.

'ನಾವು ಇಡೀ ಭಾರತಕ್ಕಾಗಿ ಮಾತನಾಡಲು ಬಯಸುತ್ತೇವೆ. ಕಳೆದ ವರ್ಷಗಳಲ್ಲಿ ಬಿಜೆಪಿ ಆಡಳಿತವು ಭಾರತವನ್ನು ಹೇಗೆ ನಾಶಪಡಿಸಿತು ಎಂಬುದನ್ನು ಹೇಳಲು ಇಚ್ಛಿಸುತ್ತೇವೆ. ಭವಿಷ್ಯದಲ್ಲಿ ನಾವು ಸಮಾನತೆಯ, ಸಾಮರಸ್ಯದ ಭಾರತವನ್ನು ಹೇಗೆ ನಿರ್ಮಿಸಲಿದ್ದೇವೆ ಎಂಬುದರ ಕುರಿತು ಅರಿವು ಮೂಡಿಸಲು ಸಿದ್ದರಾಗಿದ್ದೇವೆ. ನಾನು ದಕ್ಷಿಣದಿಂದ ಭಾರತಕ್ಕಾಗಿ ಮಾತನಾಡಲಿದ್ದೇನೆ. ಪಾಡ್ಕಾಸ್ಟ್ ಸರಣಿಯಲ್ಲಿ ಈ ಎಲ್ಲ ವಿಚಾರಗಳ ಕುರಿತು ಹೇಳಲಿದ್ದೇನೆ' ಎಂದು ಸ್ಟಾಲಿನ್ ತಿಳಿಸಿದ್ದಾರೆ
ಹೆಚ್ಚಿನ ಜನರನ್ನು ತಲುಪುವ ಪ್ರಯತ್ನದಲ್ಲಿ, ಸ್ಟಾಲಿನ್ ಅವರ ಆಡಿಯೊ ಸರಣಿಯನ್ನು ಇಂಗ್ಲಿಷ್ ಮತ್ತು ಇತರ ಪ್ರಾದೇಶಿಕ ಭಾಷೆಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ.
2019 ರ ಲೋಕಸಭಾ ಚುನಾವಣೆಯಲ್ಲಿ ತಮಿಳುನಾಡಿನ 39 ಲೋಕಸಭಾ ಸ್ಥಾನಗಳಲ್ಲಿ 38 ಸ್ಥಾನಗಳನ್ನು ಗೆಲ್ಲುವ ಮೂಲಕ ಡಿಎಂಕೆ ಭಾರತದ ಮೂರನೇ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
ಈ ಕುರಿತು ಮಾತನಾಡಿರುವ ಸ್ಟಾಲಿನ್, ನಾವು ಮೂರನೇ ದೊಡ್ಡ ಪಕ್ಷವಾಗಿದ್ದೇವೆ. ನಮ್ಮ ಪಕ್ಷವನ್ನು ಮಹಾನಾಯಕರು ಕಟ್ಟಿ ಬೆಳೆಸಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಅಣ್ಣಾ ದೊರೈ, ಎಂಕೆ ಕರುಣಾನಿಧಿಗಳಂತಹ ನಾಯಕರು ಡಿಎಂಕೆಯನ್ನು ಬೆಳೆಸಿದ್ದಾರೆ. ಜನರ ಮೇಲಿನ ಅವರ ಪ್ರಭಾವವು ಅಗಾಧವಾಗಿದೆ ಎಂದು ಹೇಳಿದ್ದಾರೆ.
ಇದೇ ವೇಳೆ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬಿಜೆಪಿಯು ಭಾರತದ ಪರಿಕಲ್ಪನೆಯನ್ನು ನಾಶ ಮಾಡಿದೆ ಎಂದು ಆರೋಪಿಸಿದ್ದಾರೆ.
ಎಂಕೆ ಸ್ಟಾಲಿನ್ ಅವರ ಈ ಪಾಡ್ಕಾಸ್ಟ್ ಅನ್ನು ಪ್ರಧಾನಿ ಮೋದಿ ಅವರ 'ಮನ್ ಕಿ ಬಾತ್' ಕಾರ್ಯಕ್ರಮಕ್ಕೆ ಪರ್ಯಾಯವಾಗಿ ನೋಡಲಾಗುತ್ತಿದೆ.
ಪ್ರತಿಪಕ್ಷಗಳು ನಿರ್ಮಿಸಿರುವ 'ಇಂಡಿಯಾ' ಮೈತ್ರಿಕೂಟದಲ್ಲಿ ಸ್ಟಾಲಿನ್ ಅವರು ಪ್ರಮುಖ ಪಾತ್ರವಹಿಸಿದ್ದಾರೆ. ಅವರು ಬಿಜೆಪಿಯ ಸೈದ್ದಾಂತಿಕ ವಿರೋಧಿಯಾಗಿದ್ದು ದ್ರಾವಿಡ ಚಳುವಳಿಯ ಪ್ರತಿಪಾದಕರೂ ಆಗಿದ್ದಾರೆ. ಆರ್ಎಸ್ಎಸ್ ಹಾಗೂ ಬಿಜೆಪಿಯನ್ನು ತೀಕ್ಷ್ಣವಾಗಿ ತರಾಟೆಗೆ ತೆಗೆದುಕೊಳ್ಳುವ ಭಾರತದ ನಾಯಕರಲ್ಲಿ ಅವರೂ ಸಹ ಒಬ್ಬರು.
ಮೂಲಗಳ ಪ್ರಕಾರ, ಪಾಡ್ಕಾಸ್ಟ್ ಪರಿಕಲ್ಪನೆಯನ್ನು ಪಾಪ್ಯುಲಸ್ ಎಂಪವರ್ಮೆಂಟ್ ನೆಟ್ವರ್ಕ್ (ಪಿಇಎನ್) ನೀಡಿದೆ. ಇದು ಡಿಎಂಕೆಗೆ ಚುನಾವಣಾ ಕಾರ್ಯತಂತ್ರದ ಭಾಗವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಲಾಗುತ್ತದೆ. ಪಾಡ್ಕಾಸ್ಟ್ ಸರಣಿಯನ್ನು ಪ್ರತಿ ಹದಿನೈದು ದಿನಗಳಿಗೊಮ್ಮೆ ವಿನ್ಯಾಸಗೊಳಿಸಲಾಗಿದೆ.
'ಪಾಡ್ಕಾಸ್ಟ್ ಸಂದೇಶವು ಹಿಂದಿನ ಡಿಎಂಕೆ ಆಡಳಿತದ ರಾಜಕೀಯ ಮತ್ತು ಸಾಮಾಜಿಕ-ಸಾಧನೆಗಳ ಸಂಕಲನವಾಗಿದೆ. ಸ್ಟಾಲಿನ್ ಅವರ ಸಂದೇಶವು ಪ್ರಸ್ತುತ ವಿದ್ಯಮಾನಗಳನ್ನು ಒಳಗೊಂಡಿರುತ್ತದೆ. ದ್ರಾವಿಡ-ಮಾದರಿ ಆಡಳಿತದೊಂದಿಗೆ ಬಿಜೆಪಿ ಆಡಳಿತದ ತುಲನಾತ್ಮಕ ವಿಶ್ಲೇಷಣೆ ಇರಲಿದೆ. ಬಿಜೆಪಿಯ ಪ್ರಚಾರಕ್ಕೆ ಪ್ರತ್ಯುತ್ತರವನ್ನು ಸಹ ಒಳಗೊಂಡಿದೆ' ಎಂದು ಮೂಲಗಳು ತಿಳಿಸಿವೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications