ಪಾಟ್ನಾ ಗಾಂಧಿ ಮೈದಾನದ ಕಾಲ್ತುಳಿತದ ಚಿತ್ರಗಳು
ಪಾಟ್ನಾ, ಅ.4 : ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳು, ಮುಗಿಲು ಮುಟ್ಟಿದ ಜನರ ಅಳು, ಭೀಕರ ದುರಂತಕ್ಕೆ ಸಾಕ್ಷಿಯಾದ ರಕ್ತದ ಕಲೆಗಳು, ಆಸ್ಪತ್ರೆ ಮುಂದೆ ಜನಸಾಗರ ಇವು ಪಾಟ್ನಾದ ಗಾಂಧಿ ಮೈದಾನದಲ್ಲಿ ಶುಕ್ರವಾರ ನಡೆದ ಭೀಕರ ಕಾಲ್ತುಳಿತದ ನಂತರ ಕಂಡುಬಂದ ದೃಶ್ಯಗಳು. ದಸರಾ ಆಚರಣೆ ವೇಳೆ ಗಾಂಧಿ ಮೈದಾನದಲ್ಲಿ ನಡೆದ ಕಾಲ್ತುಳಿತದಲ್ಲಿ 32 ಜನರು ಮೃತಪಟ್ಟಿದ್ದಾರೆ. ಮೃತಪಟ್ಟವರಲ್ಲಿ ಮಹಿಳೆಯರು ಮತ್ತು ಮಕ್ಕಳೇ ಹೆಚ್ಚು.
ಬಿಹಾರ ರಾಜಧಾನಿ ಪಾಟ್ನಾದ ಗಾಂಧಿ ಮೈದಾನದಲ್ಲಿ ದಸರಾ ಆಚರಣೆಯ ಅಂಗವಾಗಿ ರಾವಣ, ಕುಂಭಕರ್ಣ ಹಾಗೂ ಮೇಘನಾದನ ಪ್ರತಿಕೃತಿ ದಹನ ಮಾಡಿದ ಬಳಿಕ ಶುಕ್ರವಾರ ಸಂಜೆ 6.30ರ ಸುಮಾರಿಗೆ ಜನರು ವಾಪಸ್ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದಲ್ಲಿ 32 ಜನರು ಸಾವನ್ನಪ್ಪಿದ್ದಾರೆ. [ಪಾಟ್ನಾದಲ್ಲಿ ಮಹಾದುರಂತ, 32 ಸಾವು]
ಜನರು ವಾಪಸ್ ತೆರಳುತ್ತಿದ್ದ ವೇಳೆ ವಿದ್ಯುತ್ ಕಂಬವೊಂದು ದೊಡ್ಡ ಸದ್ದು ಮಾಡಿ ಉರಿಯತೊಡಗಿದಾಗ ವಿದ್ಯುತ್ ತಂತಿ ತುಂಡಾಗಿ ಬಿದ್ದಿದೆ ಎಂಬ ಸುದ್ದಿ ಹಬ್ಬಿತು. ಇದರಿಂದ ಭಯಭೀತರಾದ ಜನರು ಚೆಲ್ಲಾಪಿಲ್ಲಿಯಾಗಿ ಒಡತೊಡಗಿದರು. ಈ ಸಂದರ್ಭದಲ್ಲಿ ವಿದ್ಯುತ್ ಹೋದ ಕಾರಣ ಕತ್ತಲೆಯೂ ಆವರಿಸಿತ್ತು. ಆದ್ದರಿಂದ ಏನು ಮಾಡಬೇಕೆಂದು ತೋಚದ ಜನರು ದಿಕ್ಕಾಪಾಲಾಗಿ ಓಡತೊಡಗಿದಾಗ ಕಾಲ್ತುಳಿತ ಸಂಭವಿಸಿದೆ. ಕಾಲ್ತುಳಿತದ ಚಿತ್ರಗಳು [ಪಿಟಿಐ ಚಿತ್ರಗಳು]

ಪಾಟ್ನಾದಲ್ಲಿ ಕರಾಳ ವಿಜಯ ದಶಮಿ
ಪಾಟ್ನಾದ ಗಾಂಧಿ ಮೈದಾನದಲ್ಲಿ ಶುಕ್ರವಾರ ನಡೆದ ಭೀಕರ ಕಾಲ್ತುಳಿತದಲ್ಲಿ 32 ಜನರು ಮೃತಪಟ್ಟಿದ್ದಾರೆ. ದಸರಾ ಆಚರಣೆ ವೇಳೆ ಈ ಕಾಲ್ತುಳಿತದ ಸಂಭವಿಸಿದ್ದು, ಮೃತಪಟ್ಟವರಲ್ಲಿ ಮಹಿಳೆಯರು ಮತ್ತು ಮಕ್ಕಳೇ ಹೆಚ್ಚು.

ಭೀಕರ ದುರಂತಕ್ಕೆ ಸಾಕ್ಷಿಯಾದ ಪಾಟ್ನಾ
ದಸರಾ ವೇಳೆ ಪಾಟ್ನಾ ಭೀಕರ ದುರಂತಕ್ಕೆ ಸಾಕ್ಷಿಯಾಯಿತು. ಕಾಲ್ತುಳಿತ ಸಂಭವಿಸಿದ ಸ್ಥಳದಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ಚಪ್ಪಲಿಗಳು ದುರಂತದ ಭೀಕರ ಕಥೆಯನ್ನು ಹೇಳುತ್ತಿದ್ದವು.

ಮುಗಿಲು ಮುಟ್ಟಿದ ಜನರ ಅಳು
ದಸರಾ ಸಂಭ್ರಮಾಚರಣೆಗೆ ಬಂಧು ಕುಟುಂಬದವರನ್ನು ಕಳೆದುಕೊಂಡ ಜನರ ಅಳು ಮುಗಿಲು ಮುಟ್ಟಿತ್ತು. ಈ ಘಟನೆಯಲ್ಲಿ 32 ಮಂದಿ ಸಾವನ್ನಪ್ಪಿದ್ದಾರೆ. ಅವರಲ್ಲಿ ಮಹಿಳೆಯರು ಮತ್ತು ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

ಘಟನೆಗೆ ಕಾರಣವೇನು?
ಜನರು ಗಾಂಧಿ ಮೈದಾನದಿಂದ ವಾಪಸ್ ತೆರಳುತ್ತಿದ್ದ ವೇಳೆ ವಿದ್ಯುತ್ ಕಂಬವೊಂದು ದೊಡ್ಡ ಸದ್ದು ಮಾಡಿ ಉರಿಯತೊಡಗಿದಾಗ ವಿದ್ಯುತ್ ತಂತಿ ತುಂಡಾಗಿ ಬಿದ್ದಿದೆ ಎಂಬ ಸುದ್ದಿ ಹಬ್ಬಿತು. ಇದರಿಂದ ಭಯಭೀತರಾದ ಜನರು ಚೆಲ್ಲಾಪಿಲ್ಲಿಯಾಗಿ ಒಡತೊಡಗಿದರು. ಈ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿದೆ.

ಪೊಲೀಸರಿಂದ ರಕ್ಷಣಾ ಕಾರ್ಯ
ಕಾಲ್ತುಳಿತ ಸಂಭವಿಸಿದ ಸ್ಥಳದಲ್ಲಿ ಪೊಲೀಸರು ಪರಿಹಾರ ಕಾರ್ಯಗಳನ್ನು ಕೈಗೊಂಡು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ನೆರವಾದರು. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications