'ಸಿನಿಮಾ ಹಾಲಿನಲ್ಲಿ ರಾಷ್ಟ್ರಗೀತೆಗೆ ಗೌರವ ಕೇಂದ್ರದ ತೀರ್ಮಾನ'
ನವದೆಹಲಿ, ಅಕ್ಟೋಬರ್ 23: ಸಿನಿಮಾ ಹಾಲ್ ನಲ್ಲಿ ರಾಷ್ಟ್ರಗೀತೆಗೆ ಎದ್ದು ನಿಲ್ಲಬೇಕಾ ಬೇಡ್ವಾ ಎಂಬುದರ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತೆ ಕೇಂದ್ರ ಸರಕಾರಕ್ಕೆ ಸುಪ್ರಿಂ ಕೋರ್ಟ್ ಹೇಳಿದೆ.
"ನಮ್ಮ ಹೆಗಲ ಮೇಲಿಂದ ಗುಂಡು ಹಾರಿಸುವುದು ಬೇಡ. ನಿರ್ಧಾರವನ್ನು ನೀವೇ ತೆಗೆದುಕೊಳ್ಳಿ," ಎಂದು ಕೇಂದ್ರ ಸರಕಾರಕ್ಕೆ ಸುಪ್ರಿಂ ಕೋರ್ಟ್ ಸೂಚನೆ ನೀಡಿದೆ.

ವಿಚಾರಣೆ ವೇಳೆ ನ್ಯಾ. ಡಿ.ವೈ ಚಂದ್ರಚೂಡ್, "ನಿಮ್ಮ ರಾಷ್ಟ್ರೀಯತೆಯನ್ನು ಪ್ರದರ್ಶಿಸಲು ಸಿನಿಮಾ ಹಾಲ್ ನಲ್ಲಿ ರಾಷ್ಟ್ರಗೀತೆಗೆ ಎದ್ದು ನಿಲ್ಲಬೇಕಾಗಿಲ್ಲ," ಎಂದು ಮೌಖಿಕವಾಗಿ ಹೇಳಿದ್ದಾರೆ.
ಮುಂದುವರಿದು ಹೇಳಿದ ಅವರು"ಮುಂದೆ ನೀವು ಟೀಶರ್ಟ್ ಮತ್ತು ಶಾರ್ಟ್ ಗಳನ್ನು ಸಿನಿಮಾ ಹಾಲ್ ನಲ್ಲಿ ಧರಿಸಬೇಡಿ. ಇದು ರಾಷ್ಟ್ರಗೀತೆಗೆ ಮಾಡುವ ಅವಮಾನ ಎನ್ನುತ್ತೀರಿ. ನೈತಿಕ ಪೊಲೀಸ್ ಗಿರಿ ಮಾಡುವವರು ನಿಮ್ಮನ್ನು ತಡೆಯುತ್ತಾರೆ," ಎಂದು ಹೇಳಿದ್ದಾರೆ.
ರಾಷ್ಟ್ರಗೀತೆಗೆ ಎದ್ದು ನಿಲ್ಲುವ ಆದೇಶವನ್ನು ಕೇಂದ್ರ ಸರಕಾರ ಬೆಂಬಲಿಸಿದ್ದಕ್ಕೆ ಅಸಮಧಾನ ವ್ಯಕ್ತಪಡಿಸಿರುವ ಅವರು ಜನರು ಮನರಂಜನೆಗಾಗಿ ಸಿನಿಮಾ ಮಂದಿರಕ್ಕೆ ಬರುತ್ತಾರೆ ಎಂದು ಉಲ್ಲೇಖಿಸಿದ್ದಾರೆ.
ಈ ಸಂಬಂಧ ಅಂತಿಮ ತೀರ್ಮಾನ ತೆಗೆದುಕೊಳ್ಳಲು ಕೇಂದ್ರ ಸರಕಾರಕ್ಕೆ 2018ರ ಜನವರಿವರೆಗೆ ಸುಪ್ರಿಂ ಕೋರ್ಟ್ ಸಮಯ ನೀಡಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ












Click it and Unblock the Notifications