ದೆಹಲಿ ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್ಸಿಗೆ ತೀವ್ರ ಮುಜುಗರ
ನವದೆಹಲಿ, ನ 18: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಚುನಾವಣಾ ಸಭೆ ಉದ್ದೇಶಿಸಿ ಮಾತನಾಡಲು ಆರಂಭಿಸುತ್ತಿದ್ದಂತೆ ಜನರು ಮೈದಾನದಿಂದ ಹೊರ ನಡೆಯಲಾರಂಭಿಸಿ ಪಕ್ಷ ಮುಜುಗರಕ್ಕೀಡಾದ ಪ್ರಸಂಗ ಭಾನುವಾರ (ನ 17) ನಡೆದಿದೆ.
ಪಕ್ಷದ ಸಾರ್ವಜನಿಕ ಸಭೆಗಳಿಗೆ ನಿರೀಕ್ಷಿತ ಮಟ್ಟದ ಜನಬೆಂಬಲ ಸಿಗದೇ ಇರುವುದಕ್ಕೆ ದಕ್ಷಿಣ ದೆಹಲಿಯಲ್ಲಿ ನಡೆದ ಈ ಸಭೆ ಮತ್ತೊಮ್ಮೆ ಸಾಕ್ಷಿಯಾಯಿತು. (ಭ್ರಷ್ಟಾಚಾರದಲ್ಲಿ ಬಿಜೆಪಿ ವಿಶ್ವಚಾಂಪಿಯನ್: ರಾಹುಲ್ ಗಾಂಧಿ)
ದೆಹಲಿ ಕಾಂಗ್ರೆಸ್ ಘಟಕ ಚುನಾವಣಾ ಪೂರ್ವ ಸಾರ್ವಜನಿಕ ಸಭೆಯನ್ನು ದಕ್ಷಿಣ ದೆಹಲಿಯಲ್ಲಿ ಆಯೋಜಿಸಿತ್ತು. ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ದೆಹಲಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಸಭೆಯಲ್ಲಿ ಭಾಗವಹಿಸಿದ್ದರು.
ಸಭೆಯಲ್ಲಿ ರಾಹುಲ್ ಗಾಂಧಿ ಭಾಷಣ ಮಾಡಲಾರಂಭಿಸಿದಾಗ ಮೊದಲೇ ಕಡಿಮೆ ಸಂಖ್ಯೆಯಲ್ಲಿ ಸೇರಿದ್ದ ಜನ ಎದ್ದು ಹೋಗಲಾರಂಭಿಸಿದರು. ದೆಹಲಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್, ರಾಹುಲ್ ಗಾಂಧಿ ಭಾಷಣ ಆಲಿಸಿ ಎಂದು ಮನವಿ ಮಾಡಿದರೂ ಜನ ಕ್ಯಾರೇ ಅನ್ನದಿದ್ದದ್ದು ಪಕ್ಷವನ್ನು ತೀವ್ರ ಮುಜುಗರಕ್ಕೆ ಈಡಾಗುವಂತೆ ಮಾಡಿತು.

ಡಿಸೆಂಬರ್ ನಾಲ್ಕರಂದು ದೆಹಲಿಯಲ್ಲಿ ಅಸೆಂಬ್ಲಿ ಚುನಾವಣೆ ನಡೆಯಲಿದೆ. ಪಕ್ಷದ ಅಭ್ಯರ್ಥಿಗಳ ಪರ ಮತ ಯಾಚಿಸಲು ಸಭೆಯಲ್ಲಿ ರಾಹುಲ್ ಭಾಷಣ ಆರಂಭಿಸಿದಾಗ ಜನ ಮೈದಾನದಿಂದ ಹೊರಡಲಾರಂಭಿಸಿದರು.
ಇದರಿಂದ ಮುಜುಗರಕ್ಕೀಡಾದ ಸಭೆಯ ಆಯೋಜಕರು ರಾಹುಲ್ ಭಾಷಣದ ಮಧ್ಯೆ ಜನರಲ್ಲಿ ಮೈದಾನ ಬಿಟ್ಟು ಹೋಗದಂತೆ ಮನವಿ ಮಾಡಲಾರಂಭಿಸಿದರು. ಇದಕ್ಕೆ ಜನರಿಂದ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಲಿಲ್ಲ.
ಕೂಡಲೇ ಮೈಕ್ ತೆಗೆದುಕೊಂಡ ಶೀಲಾ ದೀಕ್ಷಿತ್ ಸಭೆ ಇನ್ನೂ ಮುಗಿದಿಲ್ಲ, ಕೊನೆಯ ಪಕ್ಷ ರಾಹುಲ್ ಗಾಂಧಿ ಭಾಷಣವನ್ನಾದರೂ ಕೇಳಿ ಎಂದೂ ಹಲವು ಬಾರಿ ಮನವಿ ಮಾಡಿದರೂ ಜನ ಸ್ಪಂಧಿಸದೇ ಮೈದಾನದಿಂದ ಹೊರ ನಡೆಯುತ್ತಿದ್ದರು.
ತದನಂತರ ರಾಹುಲ್ ಗಾಂಧಿ ನಿಗದಿತ ಸಮಯಕ್ಕಿಂತ ಬೇಗನೇ ತಮ್ಮ ಭಾಷಣವನ್ನು ಮೊಟಕುಗೊಳಿಸಿ ಸಭೆಯಿಂದ ನಿರ್ಗಮಿಸಿದರು. ಈ ಸಭೆ ನಡೆದ ಪ್ರದೇಶವು ದಕ್ಷಿಣಪುರಿ ಅಸೆಂಬ್ಲಿ ವ್ಯಾಪ್ತಿಯಲ್ಲಿದ್ದು ಕಾಂಗ್ರೆಸ್ಸಿನ ಭದ್ರಕೋಟೆ ಎಂದೇ ಹೇಳಲಾಗುತ್ತದೆ.
ಕಳೆದ ತಿಂಗಳು ದೆಹಲಿಯ ಮಂಗೋಲಪುರಿಯಲ್ಲಿ ನಡೆದ ರಾಹುಲ್ ಗಾಂಧಿ ಚುನಾವಣಾ ಸಭೆಗೂ ಜನರ ಕೊರತೆ ಎದುರಾಗಿತ್ತು.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications