ಡಿಎಲ್, ಎಲ್ ಎಲ್ ಶುಲ್ಕ 5 ಪಟ್ಟು ಹೆಚ್ಚಳ, ಜನರ ಜೇಬಿಗೆ ಕೇಂದ್ರದ ಇಕ್ಕಳ
ಬೆಂಗಳೂರು, ಜನವರಿ 7: ಡ್ರೈವಿಂಗ್ ಲೈಸನ್ಸ್ ಶುಲ್ಕ, ಡ್ರೈವಿಂಗ್ ಸ್ಕೂಲ್ ಆರಂಭಕ್ಕೆ ಬೇಕಾದ ಅನುಮತಿ, ಅಂತರರಾಷ್ಟ್ರೀಯ ಡ್ರೈವಿಂಗ್ ಲೈಸನ್ಸ್, ವಾಹನ ಮಾಲೀಕತ್ವದ ವರ್ಗಾವಣೆ, ವಿವಿಧ ವಾಹನಗಳ ನೋಂದಣಿ ಮತ್ತು ಅವುಗಳ ನವೀಕರಣ ಶುಲ್ಕದಲ್ಲಿ ಕೇಂದ್ರ ಸರಕಾರ ಭಾರೀ ಹೆಚ್ಚಳ ಮಾಡಿದೆ.
ಡಿಸೆಂಬರ್ 29ರಿಂದಲೇ ಹೊಸ ಶುಲ್ಕವನ್ನು ವಸೂಲಿ ಮಾಡಲಾಗುತ್ತಿದೆ. ಕೇಂದ್ರ ಸರಕಾರ ನಿಗದಿ ಮಾಡಿರುವುದಕ್ಕಿಂತ ಹೆಚ್ಚಿನ ಶುಲ್ಕವನ್ನು ರಾಜ್ಯ ಸರಕಾರ ವಸೂಲಿ ಮಾಡಬಹುದು ಎಂದು ತಿಳಿಸಲಾಗಿದೆ. ಆದರೆ ಕೇಂದ್ರ ನಿಗದಿ ಮಾಡಿದ್ದಕ್ಕಿಂತ ಕಡಿಮೆ ದರ ವಿಧಿಸಬಾರದು ಎಂಬುದಷ್ಟೇ ಸೂಚನೆ.[ವಾಹನ ಚಾಲನಾ ಪರವಾನಗಿ ಶುಲ್ಕದಲ್ಲಿ ಭಾರೀ ಹೆಚ್ಚಳ?]

ಕಲಿಕಾ ಪರವಾನಗಿ ಪತ್ರ (ಎಲ್ ಎಲ್ ಆರ್) ಶುಲ್ಕ 30 ರುಪಾಯಿ ಇದ್ದದ್ದನ್ನು 150ಕ್ಕೆ ಏರಿಸಲಾಗಿದೆ. ಚಾಲನಾ ಪರವಾನಗಿ ಪತ್ರ (ಡ್ರೈವಿಂಗ್ ಲೈಸನ್ಸ್) ಶುಲ್ಕವನ್ನು 40 ರುಪಾಯಿಯಿಂದ 200ಕ್ಕೆ ಹೆಚ್ಚಿಸಲಾಗಿದೆ. ಹೆಚ್ಚುವರಿಯಾಗಿ ಇನ್ನೂ ಎರಡು ವರ್ಗೀಕರಣ ಮಾಡಲಾಗಿದೆ. ಆ ಪ್ರಕಾರ ಅಪಾಯಕಾರಿ ವಸ್ತುಗಳನ್ನು ಸಾಗಿಸುವ ವಾಹನಗಳಿಗೆ ಒಪ್ಪಿಗೆ ಅಥವಾ ನವೀಕರಣಕ್ಕೆ 100 ರುಪಾಯಿ ಶುಲ್ಕ ನಿಗದಿಯಾಗಿದೆ.
ಇನ್ನು ಎಲ್ ಎಲ್ ಆರ್ ಅರ್ಜಿ ಸಲ್ಲಿಸುವವರು ಹಾಗೂ ಮತ್ತೆ ಪರೀಕ್ಷೆ ತೆಗೆದುಕೊಳ್ಳುವವರು 50 ರುಪಾಯಿ ಶುಲ್ಕ ಪಾವತಿಸಬೇಕಾಗುತ್ತದೆ. ಸಾರಿಗೆ-ಸಾರಿಗೇತರ ಕಾರಣಗಳಿಗೆ ಆಮದು ಮಾಡಿಕೊಳ್ಳುವ ಬೈಕ್ ಮತ್ತು ಕಾರುಗಳ ನೋಂದಣಿ ಶುಲ್ಕ ಸಹ ಹೆಚ್ಚಿಸಲಾಗಿದೆ. ಮಾಲೀಕತ್ವ ಬದಲಾವಣೆ, ವಿಳಾಸ ಬದಲಾವಣೆ, ಅಡಮಾನ ಒಪ್ಪಂದ ಮತ್ತಿತರ ಶುಲ್ಕಗಳು ಸಹ ಏರಿಕೆಯಾಗಿವೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications