ಸಂಸದ ಅಸಾದುದ್ದೀನ್ ಓವೈಸಿ ಅವರ ನಿವಾಸದ ಮೇಲೆ ಕಲ್ಲು ತೂರಾಟ
ಇದೇ ಮಾದರಿಯಲ್ಲಿ 2014ರಿಂದಲೂ ಕಲ್ಲೂ ತೂರಾಟ ನಡೆದಿದ್ದು, ಇದು 4ನೇ ಘಟನೆಯಾಗಿದೆ ಎಂದು ಓವೈಸಿ ತಿಳಿಸಿದ್ದಾರೆ.
ನವದೆಹಲಿ, ಫೆಬ್ರವರಿ 20: ಎಐಎಂಐಎಂ ಪಕ್ಷದ ಅಧ್ಯಕ್ಷ, ಸಂಸದ ಅಸಾದುದ್ದೀನ್ ಓವೈಸಿ ಅವರ ನವದೆಹಲಿಯಲ್ಲಿರುವ ನಿವಾಸದ ಮೇಲೆ ಅಪರಿಚಿತ ದುಷ್ಕರ್ಮಿಗಳು ಕಲ್ಲೂ ತೂರಾಟ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಇದೇ ಮಾದರಿಯಲ್ಲಿ 2014ರಿಂದಲೂ ಕಲ್ಲೂ ತೂರಾಟ ನಡೆದಿದ್ದು, ಇದು 4ನೇ ಘಟನೆಯಾಗಿದೆ ಎಂದು ಓವೈಸಿ ತಿಳಿಸಿದ್ದಾರೆ. ಘಟನೆ ನಡೆದಾಗ ಅಸಾದುದ್ದೀನ್ ಓವೈಸಿ ರಾಜಸ್ಥಾನಕ್ಕೆ ಭೇಟಿ ನೀಡಿದ್ದರು. ಈಗ ನಡೆದಿರುವ ಕೃತ್ಯಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರಿಗೆ ದೂರು ಸಲ್ಲಿಸಿರುವುದಾಗಿ ಹೇಳಿದ್ದಾರೆ.
ನನ್ನ ದೆಹಲಿ ನಿವಾಸದ ಮೇಲೆ ಮತ್ತೆ ದಾಳಿ ನಡೆದಿದೆ. 2014ರಿಂದ ಇದೇ ಮಾದರಿ ದಾಳಿ ನಡೆಯುತ್ತಿದ್ದು, ಇದು ನಾಲ್ಕನೇ ಘಟನೆಯಾಗಿದೆ. ಇಂದು ರಾತ್ರಿ, ನಾನು ಜೈಪುರದಿಂದ ಹಿಂತಿರುಗಿದ್ದೆ. ಆಗ ದುಷ್ಕರ್ಮಿಗಳ ಗುಂಪೊಂದು ಕಲ್ಲು ತೂರಾಟ ನಡೆಸಿದ್ದರಿಂದ ಕಿಟಕಿಗಳು ಒಡೆದವು ಎಂದು ನನ್ನ ಮನೆಯ ಸಹಾಯಕರು ತಿಳಿಸಿದ್ದರು. ಕಿಡಿಗೇಡಿಗಳನ್ನು ತಕ್ಷಣವೇ ದೆಹಲಿ ಪೊಲೀಸರು ಹಿಡಿಯಬೇಕು ಎಂದು ಅವರು ಸರಣಿ ಟ್ವೀಟ್ಗಳಲ್ಲಿ ಹೇಳಿದ್ದಾರೆ.

'ಹೈ ಸೆಕ್ಯುರಿಟಿ' ವಲಯ ಎಂದು ಕರೆಯಲ್ಪಡುವ ಪ್ರದೇಶದಲ್ಲಿ ಇದು ಸಂಭವಿಸಿರುವುದು ಕಳವಳಕಾರಿಯಾಗಿದೆ. ನಾನು ಪೊಲೀಸರಿಗೆ ದೂರು ಸಲ್ಲಿಸಿದ್ದೇನೆ ಮತ್ತು ಅವರು ನನ್ನ ನಿವಾಸವನ್ನು ತಲುಪಿದ್ದಾರೆ ಎಂದು ಒವೈಸಿ ಹೇಳಿದ್ದಾರೆ. ಸಂಸದ ಅಸಾದುದ್ದೀನ್ ಓವೈಸಿ ಅವರ ನಿವಾಸದ ಮೇಲೆ ದಾಳಿ ನಡೆಸಿದ ದೂರಿನ ಮೇರೆಗೆ ದೆಹಲಿ ಪೊಲೀಸರು ಸೋಮವಾರ ತನಿಖೆ ಆರಂಭಿಸಿದ್ದಾರೆ.
ಕಲ್ಲು ತೂರಾಟದ ಘಟನೆಯ ಹಿನ್ನೆಲೆಯಲ್ಲಿ ಓವೈಸಿ ಅವರ ನಂ. 34, ಅಶೋಕ ರಸ್ತೆಯ ನಿವಾಸದ ಹೊರಗೆ ದೆಹಲಿ ಪೊಲೀಸರ ಗಸ್ತು ವಾಹನವೂ ನಿಂತಿತ್ತು. "ಈ ಘಟನೆ ಸಂಬಂಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಘಟನೆ ನಡೆದಾಗ ಓವಾಸಿ ಅವರ ನಿವಾಸದಲ್ಲಿ ಇರಲಿಲ್ಲ. ಅವರ ಮನೆಯ ಹಿಂಭಾಗದ ಪ್ರವೇಶದ್ವಾರದಲ್ಲಿ ಪಾರ್ಕಿಂಗ್ ಪ್ರದೇಶದಲ್ಲಿ ಇಟ್ಟಿಗೆ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಓವೈಸಿ ದೂರಿನ ಮೇರೆಗೆ ಹೆಚ್ಚುವರಿ ಡಿಸಿಪಿ ನೇತೃತ್ವದ ದೆಹಲಿ ಪೊಲೀಸ್ ತಂಡವು ಅವರ ನಿವಾಸಕ್ಕೆ ಭೇಟಿ ನೀಡಿ ದಾಳಿಯ ಸ್ಥಳವನ್ನು ಸಮೀಕ್ಷೆ ಮಾಡಿದೆ. ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಎಐಎಂಐಎಂ ಮುಖ್ಯಸ್ಥರು ನೀಡಿದ ದೂರಿನಲ್ಲಿ ದುಷ್ಕರ್ಮಿಗಳ ಗುಂಪೊಂದು ತಮ್ಮ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಿದ್ದು, ಕಿಟಕಿಗಳನ್ನು ಹಾನಿಗೊಳಿಸಿದೆ ಎಂದು ಆರೋಪಿಸಿದ್ದಾರೆ.
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ












Click it and Unblock the Notifications