ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಸಚಿವರ ಕಾರಿನ ಮೇಲೆ ಕಲ್ಲು ತೂರಾಟ
ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿಸಿತ್ ಪ್ರಮಾಣಿಕ್ ಅವರು ಪಶ್ಚಿಮ ಬಂಗಾಳದ ಕೂಚ್ ಬೆಹಾರ್ಗೆ ತೆರಳಿದ್ದಾಗ ಅವರ ಬೆಂಗಾವಲು ವಾಹನದ ಮೇಲೆ ಈ ದಾಳಿ ನಡೆದಿದೆ.
ಕೋಲ್ಕತ್ತಾ, ಫೆಬ್ರವರಿ 25: ಪಶ್ಚಿಮ ಬಂಗಾಳದ ಕೂಚ್ಬೆಹಾರ್ ಜಿಲ್ಲೆಯ ದಿನ್ಹಾಟಾದಲ್ಲಿ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿಸಿತ್ ಪ್ರಮಾಣಿಕ್ ಅವರ ಬೆಂಗಾವಲು ಪಡೆಯ ಮೇಲೆ ಕಲ್ಲಿನ ತೂರಾಟ ನಡೆಸಲಾಗಿದೆ. ಘಟನೆಯಲ್ಲಿ ಕಾರಿನ ಗಾಜುಗಳು ಒಡೆದಿದೆ.
ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿಸಿತ್ ಪ್ರಮಾಣಿಕ್ ಅವರು ಪಶ್ಚಿಮ ಬಂಗಾಳದ ಕೂಚ್ ಬೆಹಾರ್ಗೆ ತೆರಳಿದ್ದಾಗ ಅವರ ಬೆಂಗಾವಲು ವಾಹನದ ಮೇಲೆ ಈ ದಾಳಿ ನಡೆದಿದೆ. ತೃಣಮೂಲ ಕಾಂಗ್ರೆಸ್ ಬೆಂಬಲಿಗರು ದಾಳಿಯ ನೇತೃತ್ವ ವಹಿಸಿದ್ದರು ಎಂದು ಪ್ರಮಾಣಿಕ್ ಆರೋಪಿಸಿದ್ದಾರೆ.

ದಾಳಿ ನಡೆದಾಗ ಪೂರ್ವ ನಿರ್ಧಾರಿತ ಕಾರ್ಯಕ್ರಮಕ್ಕೆ ಅನುಗುಣವಾಗಿ ಸಚಿವರು ಬಿಜೆಪಿ ಕಾರ್ಯಕರ್ತರನ್ನು ಭೇಟಿ ಮಾಡಲು ಮತ್ತು ಪ್ರದೇಶದ ಜನರನ್ನು ಭೇಟಿ ಮಾಡಲು ಹೋಗುತ್ತಿದ್ದರು. ಈ ಬಗ್ಗೆ ಬಿಜೆಪಿ ಟಿಎಂಸಿ ವಿರುದ್ಧ ಆರೋಪ ಮಾಡಿದ್ದು, ಕಲ್ಲುಗಳನ್ನು ಟಿಎಂಸಿ ಅವರೇ ಎಸೆದಿದ್ದಾರೆ ಎಂದಿದೆ. ಆದರೆ ಇದುವರೆಗೂ ಯಾರು ಎಸೆದಿದ್ದಾರೆ ಎಂದು ತಿಳಿದು ಬಂದಿಲ್ಲ.
ಪ್ರಾಥಮಿಕ ಮಾಹಿತಿ ಪ್ರಕಾರ ಟಿಎಂಸಿ ಬೆಂಬಲಿಗರು ಸಚಿವರಿಗೆ ಕಪ್ಪು ಬಾವುಟ ತೋರಿಸಿದ್ದಾರೆ. ಇದರಿಂದ ಆಡಳಿತ ಪಕ್ಷ ಹಾಗೂ ಬಿಜೆಪಿ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆಯಿತು. ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಸಚಿವರನ್ನು ಸುರಕ್ಷಿತವಾಗಿ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದು ಬಂದಿದೆ.

ಜನಸಂದಣಿಯನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಶೆಲ್ಗಳನ್ನು ಹಾರಿಸಬೇಕಾಯಿತು. ಸಚಿವರೊಬ್ಬರು ಸುರಕ್ಷಿತೆ ಇಲ್ಲದಿದ್ದರೆ ಜನಸಾಮಾನ್ಯರ ಪಾಡು ಊಹಿಸಬಹುದು. ಈ ಘಟನೆಯು ಬಂಗಾಳದ ಪ್ರಜಾಪ್ರಭುತ್ವದ ಸ್ಥಿತಿಯನ್ನು ತೋರಿಸುತ್ತದೆ ಎಂದು ಸಚಿವರು ಹೇಳಿದರು.
ಸ್ಥಳೀಯ ವರದಿಗಳ ಪ್ರಕಾರ, ಬುಡಕಟ್ಟು ಜನಾಂಗದವರ ಹತ್ಯೆಯ ಬಗ್ಗೆ ಸಚಿವ ಪ್ರಮಾಣಿಕ್ ವಿರುದ್ಧ ಕೋಪವಿದೆ ಎಂದು ಹೇಳಲಾಗುತ್ತದೆ. ತೃಣಮೂಲ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರು ಇತ್ತೀಚೆಗೆ ಕೂಚ್ ಬೆಹಾರ್ನಲ್ಲಿ ನಡೆದ ರ್ಯಾಲಿಯಲ್ಲಿ ಹತ್ಯೆಯ ನಂತರ ಬುಡಕಟ್ಟು ಜನಾಂಗದವರ ಕಳವಳವನ್ನು ಬಗೆಹರಿಸಲು ಸಾಕಷ್ಟು ಕೆಲಸ ಮಾಡಿಲ್ಲ ಎಂದು ಆರೋಪಿಸಿ ಪ್ರಮಾಣಿಕ್ ಅವರನ್ನು ಟೀಕಿಸಿದ್ದರು.
ಸಚಿವ ಪ್ರಮಾಣಿಕ್ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ತೃಣಮೂಲ ಕಾಂಗ್ರೆಸ್ ಇತ್ತೀಚೆಗೆ ಘೋಷಿಸಿತ್ತು. ತೃಣಮೂಲ ನಾಯಕ ಉದಯನ್ ಗುಹಾ ಅವರು ಈ ಪ್ರದೇಶದಲ್ಲಿ ಎಲ್ಲಿ ಹೋದರೂ ಕಪ್ಪು ಬಾವುಟಗಳನ್ನು ಮಾತ್ರ ಕಾಣುತ್ತಾರೆ ಎಂದು ಹೇಳಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications