ಗುಜರಾತ್: ಓವೈಸಿ ಪ್ರಯಾಣಿಸುತ್ತಿದ್ದ ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ
ಅಹಮದಾಬಾದ್, ನ. 08: ಗುಜರಾತ್ನಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಪ್ರಯಾಣಿಸುತ್ತಿದ್ದ ವೇಳೆ ಕಲ್ಲೂ ತೂರಾಟ ನಡೆಸಲಾಗಿದೆ ಎಂದು ಪಕ್ಷದ ರಾಷ್ಟ್ರೀಯ ವಕ್ತಾರ ಹೇಳಿದ್ದಾರೆ.
ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಕಿಟಕಿ ಗಾಜನ್ನು ಕೆಲವು ಅಪರಿಚಿತ ವ್ಯಕ್ತಿಗಳು ಒಡೆದಿದ್ದಾರೆ ಎಂದು ಪಕ್ಷದ ನಾಯಕ ವಾರಿಸ್ ಪಠಾಣ್ ಹೇಳಿದ್ದಾರೆ.
ಅಸಾದುದ್ದೀನ್ ಓವೈಸಿ, ಪಕ್ಷದ ಗುಜರಾತ್ ರಾಜ್ಯ ಅಧ್ಯಕ್ಷ ಸಬೀರ್ ಕಬ್ಲಿವಾಲಾ ಮತ್ತು ಪಕ್ಷದ ಇತರ ನಾಯಕರು ಅಹಮದಾಬಾದ್ನಿಂದ ಸೂರತ್ಗೆ 'ವಂದೇ ಭಾರತ್ ಎಕ್ಸ್ಪ್ರೆಸ್' ನಲ್ಲಿ ಪ್ರಯಾಣಿಸುತ್ತಿದ್ದಾಗ ಘಟನೆ ನಡೆದಿದೆ. ಸೂರತ್ ತಲುಪಲು ಸುಮಾರು 25 ಕಿಮೀ ದೂರದಲ್ಲಿದ್ದಾಗ ಘಟನೆ ಸಂಭವಿಸಿದೆ ಎಂದು ವಾರಿಸ್ ಪಠಾಣ್ ಟ್ವೀಟ್ ಮಾಡಿದ್ದಾರೆ.

ಹಾನಿಗೊಳಗಾದ ಕಿಟಕಿಯ ಗಾಜಿನ ಚಿತ್ರಗಳನ್ನು ಹಂಚಿಕೊಂಡಿದ್ದು, "ಇಂದು ಸಂಜೆ ನಾವು ಅಸಾದುದ್ದೀನ್ ಓವೈಸಿ, ಸಬೀರ್ ಕಬ್ಲಿವಾಲಾ ಸೇರಿದಂತೆ ಪಕ್ಷದ ತಂಡವು ಅಹಮದಾಬಾದ್ನಿಂದ ಸೂರತ್ಗೆ 'ವಂದೇ ಭಾರತ್ ಎಕ್ಸ್ಪ್ರೆಸ್' ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ, ಕೆಲವು ಅಪರಿಚಿತರು ಕಲ್ಲು ತೂರಿ ರೈಲಿನ ಕಿಟಕಿ ಗಾಜು ಒಡೆದರು" ಎಂದಿದ್ದಾರೆ.
ಘಟನೆ ಬಳಿಕ ಗುಜರಾತ್ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ವಾರಿಸ್ ಪಠಾಣ್, ಅಸಾದುದ್ದೀನ್ ಓವೈಸಿ ಕುಳಿತಿದ್ದ ಕೋಚ್ ಮೇಲೆ ಎರಡು ಕಲ್ಲುಗಳನ್ನು ಒಂದಾದ ಮೇಲೊಂದರಂತೆ ಎಸೆದರು ಎಂದು ಹೇಳಿದ್ದಾರೆ.
"ನಾವು ಅಹಮದಾಬಾದ್ನಿಂದ ಸೂರತ್ಗೆ ವಂದೇ ಭಾರತ್ ಎಕ್ಸ್ಪ್ರೆಸ್ನಲ್ಲಿ ಪ್ರಯಾಣಿಸುತ್ತಿದ್ದೇವು. ನಾವು ಸೂರತ್ನಿಂದ 20 ರಿಂದ 25 ಕಿಮೀ ದೂರದಲ್ಲಿರುವಾಗ ಕಲ್ಲು ತೂರಾಟ ನಡೆಸಲಾಯಿತು, ಇದರಿಂದ ಕಿಟಕಿಯ ಗಾಜುಗಳಿಗೆ ಹಾನಿಯಾಗಿದೆ. ಓವೈಸಿ ಅವರು ಕೋಚ್ನಲ್ಲಿ ಕುಳಿತಿದ್ದರು. ಯಾರೋ ಎರಡು ಕಲ್ಲುಗಳನ್ನು ಒಂದಾದ ಮೇಲೊಂದರಂತೆ ಎಸೆದರು. ನೀವು ಕಲ್ಲುಗಳನ್ನು ಎಸೆಯಬಹುದು ಅಥವಾ ಬೆಂಕಿಯನ್ನು ಹಚ್ಚಬಹುದು. ಆದರೆ ನಮ್ಮ ಹಕ್ಕುಗಳಿಗಾಗಿ ಎತ್ತಿರುವ ನಮ್ಮ ಧ್ವನಿ ಎಂದಿಗೂ ನಿಲ್ಲುವುದಿಲ್ಲ" ಎಂದು ಎಐಎಂಐಎಂ ನಾಯಕ ಹೇಳಿದ್ದಾರೆ.

ಗುಜರಾತ್ ರಾಜ್ಯದಲ್ಲಿ ಡಿಸೆಂಬರ್ 1 ಮತ್ತು 5 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಈ ವರ್ಷ ಸೆಪ್ಟೆಂಬರ್ 30 ರಂದು ಗಾಂಧಿನಗರದಲ್ಲಿ ಗಾಂಧಿನಗರ-ಮುಂಬೈ ಸೆಂಟ್ರಲ್ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಚಾಲನೆ ನೀಡಿದ್ದರು.
ಇನ್ನು, ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಪ್ರಯೋಗಿಕ ಸಂಚಾರ ಆರಂಭವಾಗಿದ್ದು, ಚೆನ್ನೈನಿಂದ ಹೊರಟಿದ್ದ ಈ ರೈಲು ಯಶಸ್ವಿಯಾಗಿ ಮೈಸೂರಿಗೆ ಬಂದು ಸೇರಿದೆ. ಈ ರೈಲನ್ನು ನವೆಂಬರ್ 11ಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications