ಸಾವರ್ಕರ್ ಅವರನ್ನು ಅವಮಾನಿಸುವುದನ್ನು ನಿಲ್ಲಿಸಿ: ದೇವೇಂದ್ರ ಫಡ್ನವಿಸ್
ಮುಂಬೈ, ಡಿಸೆಂಬರ್ 28: ಸಾವರ್ಕರ್ ಅವರಿಗೆ ಅವಮಾನ ಮಾಡುತ್ತಿರುವುದರ ಬಗ್ಗೆ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಂಗಳವಾರ ರಾಜ್ಯ ವಿಧಾನ ಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದು, ಸ್ವಾತಂತ್ರ್ಯ ಹೋರಾಟಗಾರನಿಗೆ ವಿರೋಧ ಪಕ್ಷದ ನಾಯಕರು ಅವಮಾನಿಸುವುದನ್ನು ನಿಲ್ಲಿಸಬೇಕು ಎಂದು ಹೇಳಿದ್ದಾರೆ.
ಕೆಲವು ಮಹಾನೀಯರ ಬಗ್ಗೆ ಕೆಲವು ವಿರೋಧ ಪಕ್ಷದ ನಾಯಕರು ಆಕ್ಷೇಪಾರ್ಹ ಹೇಳಿಕೆಗಳ ನೀಡಿದ್ದರಿಂದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಡ್ ಅವರು ಈ ಹೇಳಿಕೆ ನೀಡಿದ್ದಾರೆ. ಉದ್ಧವ್ ಠಾಕ್ರೆ ಗುಂಪಿನ ಶಾಸಕ ಅನಿಲ್ ಪರಬ್ ಅವರು ವಿಧಾನ ಪರಿಷತ್ತಿನಲ್ಲಿ ಮಹಾಪುರುಷರ ಅವಹೇಳನದ ವಿಷಯವನ್ನು ಪ್ರಸ್ತಾಪಿಸಿದ ಅವರು ಆಡಳಿತಾರೂಢ ಬಿಜೆಪಿ ಮತ್ತು ಶಿಂಧೆ ಗುಂಪನ್ನು ತರಾಟೆಗೆ ತೆಗೆದುಕೊಂಡರು.
ಇದಕ್ಕೆ ಪ್ರತಿಯಾಗಿ ಫಡ್ನವಿಸ್ ಕೂಡ ಇದೇ ವಿಷಯದ ಕುರಿತು ಹೇಳಿಕೆ ನೀಡಿದ್ದಾರೆ. ಮಹಾಪುರುಷರ ಬಗ್ಗೆ ವಿರೋಧ ಪಕ್ಷದ ನಾಯಕರು ನೀಡಿರುವ ಆಕ್ಷೇಪಾರ್ಹ ಹೇಳಿಕೆಗಳನ್ನು ಓದಿದ ಅವರು, ಸಾವರ್ಕರ್ರನ್ನು ಅವಮಾನಿಸುವ ಬಗ್ಗೆ ಪರಬ್ ಏಕೆ ಹೇಳಿಲ್ಲ ಎಂದು ಪ್ರಶ್ನಿಸಿದರು.

ಪರಬ್ ಸಾಹೇಬ್, ನಿಮ್ಮ ಭಾಷಣದಲ್ಲಿ ನೀವು ಒಮ್ಮೆಯೂ ಸ್ವಾತಂತ್ರ್ಯ ಹೋರಾಟಗಾರ ವಿ ಡಿ ಸಾವರ್ಕರ್ ಅವರ ಉದಾಹರಣೆಯನ್ನು ನೀಡಲಿಲ್ಲ. ರಾಹುಲ್ ಗಾಂಧಿಯವರು ಸ್ವಾತಂತ್ರ್ಯ ವೀರ ಸಾವರ್ಕರ್ ಅವರನ್ನು ಕ್ಷಮಾಪಣೆ ಮತ್ತು ಸ್ವಯಂ ಘೋಷಿತ ಹಿಂದುತ್ವವಾದಿ ಎಂದು ಕರೆಯುತ್ತಾರೆ. ಅದರ ಬಗ್ಗೆ ಯಾರೂ ಮಾತನಾಡುವುದಿಲ್ಲ. ನನ್ನ ಪ್ರಕಾರ, ಸಾವರ್ಕರ್ಗೆ ಭಾರತ ರತ್ನ ಸಿಗದಿದ್ದರೂ, ಕನಿಷ್ಠ ಅವರನ್ನು ಅವಮಾನಿಸುವುದನ್ನು ನಿಲ್ಲಿಸಿ ಎಂದು ಫಡ್ನವಿಸ್ ಹೇಳಿದರು.
ಮಹಾ ವಿಕಾಸ್ ಅಘಾಡಿಯ ವಿವಿಧ ನಾಯಕರು ಮಹಾನ್ ಪುರುಷರ ಬಗ್ಗೆ ನೀಡಿದ ಹೇಳಿಕೆಗಳನ್ನು ಫಡ್ನವಿಸ್ ಓದಿದರು. ಈ ಬಗ್ಗೆ ನೀವು ಈ ಬಗ್ಗೆ ಏನನ್ನೂ ಹೇಳುತ್ತಿಲ್ಲ, ನೀವು ಈ ಬಗ್ಗೆ ಮೌನವಾಗಿದ್ದೀರಿ ಎಂದು ಅವರು ಹೇಳಿದರು. ಬಳಿಕ ಕೌನ್ಸಿಲ್ ಅನ್ನು ಬುಧವಾರಕ್ಕೆ ಮುಂದೂಡಲಾಯಿತು.
ಕಳೆದ ನವೆಂಬರ್ನಲ್ಲಿ ಮಹಾರಾಷ್ಟ್ರ ಸಂಸದ ಸಂಜಯ್ ರಾವತ್ ಅವರು ಈ ದೇಶ ಜವಾಹರಲಾಲ್ ನೆಹರು ಅವರ ನಾಡು. ಸ್ವಾತಂತ್ರ್ಯ ನಾಯಕರನ್ನು ಇಡೀ ದೇಶ ಗೌರವಿಸುತ್ತದೆ. ವೀರ ಸಾವರ್ಕರ್, ಸುಭಾಷ್ ಚಂದ್ರ ಬೋಸ್, ಪಂಡಿತ್ ಜವಾಹರಲಾಲ್ ನೆಹರು, ವಲ್ಲಭಭಾಯಿ ಪಟೇಲ್ ಮತ್ತು ಮಹಾತ್ಮ ಗಾಂಧಿ, ಈ ದೇಶಕ್ಕಾಗಿ ಸ್ವಾತಂತ್ರ್ಯ ಹೋರಾಟದಲ್ಲಿ ತಮ್ಮ ತ್ಯಾಗ ಮಾಡಿದ ಎಲ್ಲರಿಗೂ ಇಡೀ ದೇಶವು ಅವರ ಬಗ್ಗೆ ಗೌರವ ಮತ್ತು ನಂಬಿಕೆಯನ್ನು ಹೊಂದಿದೆ ಎಂದು ರಾವತ್ ಹೇಳಿದ್ದರು.

ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರು ದೇಶಕ್ಕಾಗಿ ಸಾಕಷ್ಟು ಸೇವೆ ಸಲ್ಲಿಸಿದ್ದಾರೆ ಮತ್ತು ಇದು ಅವರ ಭೂಮಿಯಾಗಿದೆ. ಪಂಡಿತ್ ಜವಾಹರಲಾಲ್ ನೆಹರೂ ಅವರು ದೇಶದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಇಲ್ಲದಿದ್ದರೆ ದೇಶ ಪಾಕಿಸ್ತಾನದಂತಾಗಲು ಹೆಚ್ಚು ಸಮಯ ಹಿಡಿಯುತ್ತಿರಲಿಲ್ಲ. ದೇಶವು ಪಂಡಿತ್ ಜವಾಹರಲಾಲ್ ನೆಹರು ಅವರ ನಾಡು ಎಂದು ರಾವತ್ ಸ್ಮರಿಸಿದರು.
-
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ












Click it and Unblock the Notifications