'ಭ್ರಷ್ಟಾಚಾರದ ಆರೋಪ ಮಾಡಿದವರಿಗೆ ಬೂಟಿನೇಟು ನೀಡುವೆ'

ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವ ಕಿರಣ್ ರಿಜಿಜು ಅವರು ತಮ್ಮ ಮೇಲಿನ ಭ್ರಷ್ಟಾಚಾರದ ಆರೋಪಗಳನ್ನು ಅಲ್ಲಗೆಳೆದಿದ್ದು, ಈ ರೀತಿ ಆರೋಪ ಮಾಡುವವರು ಕೈಗೆ ಸಿಕ್ಕರೆ ಬೂಟಿನೆಟು ಸಿಗಲಿದೆ ಎಂದು ಕಿಡಿಕಾರಿದ್ದಾರೆ.

ನವದೆಹಲಿ, ಡಿಸೆಂಬರ್ 13: ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವ ಕಿರಣ್ ರಿಜಿಜು ಅವರು ತಮ್ಮ ಮೇಲಿನ ಭ್ರಷ್ಟಾಚಾರದ ಆರೋಪಗಳನ್ನು ಅಲ್ಲಗೆಳೆದಿದ್ದು, ಈ ರೀತಿ ಆರೋಪ ಮಾಡುವವರು ಕೈಗೆ ಸಿಕ್ಕರೆ ಬೂಟಿನೆಟು ಸಿಗಲಿದೆ ಎಂದು ಕಿಡಿಕಾರಿದ್ದಾರೆ.

ಅರುಣಾಚಲಪ್ರದೇಶದ ವಿದ್ಯುತ್ ಯೋಜನೆಯೊಂದನ್ನು ತಮ್ಮ ಸಂಬಂಧಿಕರಿಗೆ ಕೊಡಿಸಲು ಕೇಂದ್ರ ಸಚಿವ ಕಿರಣ್ ಅವರು ತಮ್ಮ ಅಧಿಕಾರದ ಪ್ರಭಾವ ಬಳಸಿದ್ದಾರೆ ಎಂದು ಆರೋಪಿಸಿ ಸ್ಥಳೀಯ ಪತ್ರಿಕೆಯೊಂದು ವರದಿ ಮಾಡಿತ್ತು.

Stories against me planted, says Kiren Rijiju

ಈ ಬಗ್ಗೆ ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿ ಕಿರಣ್, ಆರೋಪಗಳೆಲ್ಲವೂ ಕಟ್ಟುಕತೆ, ಸುಳ್ಳು ಸುದ್ದಿ ಹಬ್ಬಿಸುವವರಿಗೆ ಬೂಟಿನೇಟು ನೀಡಬೇಕು ಎಂದಿದ್ದಾರೆ.

ಅರುಣಾಚಲ ಪ್ರದೇಶದಲ್ಲಿ 600 ಮೆ.ವ್ಯಾ ಕಾಮೆಂಗ್ ಜಲ ವಿದ್ಯುತ್ ಯೋಜನೆಗಾಗಿ ಎರಡು ಅಣೆಕಟ್ಟು ನಿರ್ಮಾಣ ಮಾಡಬೇಕಾಗಿದ್ದು, ಇದಕ್ಕಾಗಿ ಗುತ್ತಿಗೆದಾರರಿಗೆ ಬರಬೇಕಾದ ಭತ್ಯೆಯನ್ನು ನೀಡುವಂತೆ ಕೇಂದ್ರ ವಿದ್ಯುತ್ ಸಚಿವ ಪಿಯೂಷ್ ಗೋಯಲ್ ಅವರಿಗೆ ಕಿರಣ್ ಅವರು ಪತ್ರ ಬರೆದಿದ್ದಾರೆ ಎಂದು ಆರೋಪಿಸಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+