Stories of strength; 10 ದಿನದಲ್ಲಿ ಕೋವಿಡ್ ಗೆದ್ದ ವೈದ್ಯೆ!
ಕೋವಿಡ್ ರೋಗಿಗಳಿಗೆ ಚಿಕಿತ್ಸೆ ವೈದ್ಯರಿಗೆ ಸೋಂಕು ತಗುಲಿದ ಹಲವು ಪ್ರಕರಣಗಳು ವರದಿಯಾಗಿವೆ. ಹಲವಾರು ಜನರು ಮೃತಪಟ್ಟಿದ್ದಾರೆ. ಕೋವಿಡ್ ಸೋಂಕು ತಗುಲಿದ್ದ ವೈದ್ಯೆ ಸೋಂಕಿನ ವಿರುದ್ಧ ಹೋರಾಡಿ ಗೆದ್ದ ವಿವರ ಇಲ್ಲಿದೆ.
ಕೋವಿಡ್ ಸೋಂಕು ತಗುಲಿದ್ದ 25 ವರ್ಷದ ವೈದ್ಯೆಯೊಬ್ಬರು 10 ದಿನದಲ್ಲಿ ಕೋವಿಡ್ ಗೆದ್ದು ಮಗುವಿನ ಜೊತೆ ಮನೆಗೆ ಮರಳಿದ್ದಾರೆ. ಮಗುವಿಗೆ ಜನ್ಮ ನೀಡಿದ ಮೂರು ದಿನಕ್ಕೆ ವೈದ್ಯೆಗೆ ವೆಂಟಿಲೇಟರ್ ವ್ಯವಸ್ಥೆ ಅಳವಡಿಸಲಾಗಿತ್ತು.
ಪಶ್ಚಿಮ ಬಂಗಾಳದ ಡಾ. ಆರ್ಫಾ ಹೌರಾದ ಇಎಲ್ಎಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಗರ್ಭಿಣಿಯಾಗಿದ್ದಾಗಲೇ ವೈದ್ಯೆಗೆ ಕೋವಿಡ್ ಸೋಂಕು ದೃಢಪಟ್ಟಿತು. ಹೆರಿಗೆಯಾದ ಬಳಿಕ ಮಗುವಿಗೆ ಕೋವಿಡ್ ವರದಿ ನೆಗೆಟಿವ್ ಬಂದಿತ್ತು.

ಮಗುವಿಗೆ ಜನ್ಮ ನೀಡಿದ ಮೂರು ದಿನಗಳ ಬಳಿಕ ಅವರ ಆರೋಗ್ಯ ಪರಿಸ್ಥಿತಿ ತೀರಾ ಹದಗೆಟ್ಟಿತ್ತು. ವೆಂಟಿಲೇರ್ ಹಾಕಬೇಕಾಯಿತು. "10 ದಿನ ವೆಂಟಿಲೇಟರ್ನಲ್ಲಿದ್ದ ಡಾ. ಆರ್ಫಾ ಚೇತರಿಸಿಕೊಂಡರು, ಕೋವಿಡ್ ಗೆದ್ದು ಮಗುವಿನ ಜೊತೆ ಮನೆಗೆ ಹೋದರು" ಎಂದು ಆಸ್ಪತ್ರೆಯ ಸಿಸಿಸಿ ವಿಭಾಗದ ಡಾ. ಕೌಶಿಕ್ ಬಿಸ್ವಾಸ್ ಹೇಳಿದ್ದಾರೆ.
ಡಾ. ಆರ್ಫಾ 37 ವಾರಗಳ ಗರ್ಭಿಣಿಯಾಗಿದ್ದಾಗ ಕೋವಿಡ್ ಸೋಂಕು ತಗುಲಿತ್ತು. ಆಸ್ಪತ್ರೆಯ ಸಿಬ್ಬಂದಿ ಅವರು ಬೇಗ ಗುಣಮುಖಗೊಳ್ಳುತ್ತಾರೆ ಎಂಬ ಭರವಸೆಯಲ್ಲಿದ್ದರು. ಮಗುವಿಗೆ ಜನ್ಮ ನೀಡಿದ ಮೂರು ದಿನಗಳ ಬಳಿಕ ಆರೋಗ್ಯ ಪರಿಸ್ಥಿತಿ ಹದಗೆಟ್ಟಿತು. ಮಗುವಿನ ಕೋವಿಡ್ ವರದಿ ನಗೆಟಿವ್ ಬಂದಿತ್ತು.
ಶ್ವಾಸಕೋಶದ ಸೋಂಕು ಉಂಟಾದ ಕಾರಣ 10 ದಿನ ವೆಂಟಿಲೇಟರ್ ವ್ಯವಸ್ಥೆಯಲ್ಲಿ ಚಿಕಿತ್ಸೆ ಪಡೆದರು. ಡಾ. ಆರ್ಫಾಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರು ಸಹ ಅವರಿಗೆ ಧೈರ್ಯವನ್ನು ತುಂಬುವ ಕೆಲಸ ಮಾಡಿದರು. ನೀವು ಚೇತರಿಸಿಕೊಳ್ಳುವುದಕ್ಕಾಗಿ ಮಗು ಕಾಯುತ್ತಿದೆ ಎಂದು ಹೇಳುತ್ತಿದ್ದರು.
ಡಾ. ಆರ್ಫಾಗೆ ಶ್ವಾಸಕೋಶದ ನರಗಳಲ್ಲಿ ರಕ್ತ ಹೆಪ್ಪುಗಟ್ಟಿತ್ತು. ಇದು ಬಹಳ ಅಪರೂಪದ ಪ್ರಕರಣವಾದರೂ ಅಪಾಯಕಾರಿ ಪರಿಸ್ಥಿತಿಯಾಗಿತ್ತು. ಅವರು ಗೆದ್ದು ಬರುತ್ತಾರೆ ಎಂಬ ಭರವಸೆ ನಮಗಿತ್ತು. ಕೋವಿಡ್ ಗೆದ್ದು ಮಗುವಿನ ಜೊತೆ ಮನೆಗೆ ಮರಳಿದ್ದಾರೆ ಎಂದು ವೈದ್ಯರು ಸಂತಸ ವ್ಯಕ್ತಪಡಿಸಿದ್ದಾರೆ.
-
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications