Stories of strength; 10 ದಿನದಲ್ಲಿ ಕೋವಿಡ್ ಗೆದ್ದ ವೈದ್ಯೆ!
ಕೋವಿಡ್ ರೋಗಿಗಳಿಗೆ ಚಿಕಿತ್ಸೆ ವೈದ್ಯರಿಗೆ ಸೋಂಕು ತಗುಲಿದ ಹಲವು ಪ್ರಕರಣಗಳು ವರದಿಯಾಗಿವೆ. ಹಲವಾರು ಜನರು ಮೃತಪಟ್ಟಿದ್ದಾರೆ. ಕೋವಿಡ್ ಸೋಂಕು ತಗುಲಿದ್ದ ವೈದ್ಯೆ ಸೋಂಕಿನ ವಿರುದ್ಧ ಹೋರಾಡಿ ಗೆದ್ದ ವಿವರ ಇಲ್ಲಿದೆ.
ಕೋವಿಡ್ ಸೋಂಕು ತಗುಲಿದ್ದ 25 ವರ್ಷದ ವೈದ್ಯೆಯೊಬ್ಬರು 10 ದಿನದಲ್ಲಿ ಕೋವಿಡ್ ಗೆದ್ದು ಮಗುವಿನ ಜೊತೆ ಮನೆಗೆ ಮರಳಿದ್ದಾರೆ. ಮಗುವಿಗೆ ಜನ್ಮ ನೀಡಿದ ಮೂರು ದಿನಕ್ಕೆ ವೈದ್ಯೆಗೆ ವೆಂಟಿಲೇಟರ್ ವ್ಯವಸ್ಥೆ ಅಳವಡಿಸಲಾಗಿತ್ತು.
ಪಶ್ಚಿಮ ಬಂಗಾಳದ ಡಾ. ಆರ್ಫಾ ಹೌರಾದ ಇಎಲ್ಎಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಗರ್ಭಿಣಿಯಾಗಿದ್ದಾಗಲೇ ವೈದ್ಯೆಗೆ ಕೋವಿಡ್ ಸೋಂಕು ದೃಢಪಟ್ಟಿತು. ಹೆರಿಗೆಯಾದ ಬಳಿಕ ಮಗುವಿಗೆ ಕೋವಿಡ್ ವರದಿ ನೆಗೆಟಿವ್ ಬಂದಿತ್ತು.

ಮಗುವಿಗೆ ಜನ್ಮ ನೀಡಿದ ಮೂರು ದಿನಗಳ ಬಳಿಕ ಅವರ ಆರೋಗ್ಯ ಪರಿಸ್ಥಿತಿ ತೀರಾ ಹದಗೆಟ್ಟಿತ್ತು. ವೆಂಟಿಲೇರ್ ಹಾಕಬೇಕಾಯಿತು. "10 ದಿನ ವೆಂಟಿಲೇಟರ್ನಲ್ಲಿದ್ದ ಡಾ. ಆರ್ಫಾ ಚೇತರಿಸಿಕೊಂಡರು, ಕೋವಿಡ್ ಗೆದ್ದು ಮಗುವಿನ ಜೊತೆ ಮನೆಗೆ ಹೋದರು" ಎಂದು ಆಸ್ಪತ್ರೆಯ ಸಿಸಿಸಿ ವಿಭಾಗದ ಡಾ. ಕೌಶಿಕ್ ಬಿಸ್ವಾಸ್ ಹೇಳಿದ್ದಾರೆ.
ಡಾ. ಆರ್ಫಾ 37 ವಾರಗಳ ಗರ್ಭಿಣಿಯಾಗಿದ್ದಾಗ ಕೋವಿಡ್ ಸೋಂಕು ತಗುಲಿತ್ತು. ಆಸ್ಪತ್ರೆಯ ಸಿಬ್ಬಂದಿ ಅವರು ಬೇಗ ಗುಣಮುಖಗೊಳ್ಳುತ್ತಾರೆ ಎಂಬ ಭರವಸೆಯಲ್ಲಿದ್ದರು. ಮಗುವಿಗೆ ಜನ್ಮ ನೀಡಿದ ಮೂರು ದಿನಗಳ ಬಳಿಕ ಆರೋಗ್ಯ ಪರಿಸ್ಥಿತಿ ಹದಗೆಟ್ಟಿತು. ಮಗುವಿನ ಕೋವಿಡ್ ವರದಿ ನಗೆಟಿವ್ ಬಂದಿತ್ತು.
ಶ್ವಾಸಕೋಶದ ಸೋಂಕು ಉಂಟಾದ ಕಾರಣ 10 ದಿನ ವೆಂಟಿಲೇಟರ್ ವ್ಯವಸ್ಥೆಯಲ್ಲಿ ಚಿಕಿತ್ಸೆ ಪಡೆದರು. ಡಾ. ಆರ್ಫಾಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರು ಸಹ ಅವರಿಗೆ ಧೈರ್ಯವನ್ನು ತುಂಬುವ ಕೆಲಸ ಮಾಡಿದರು. ನೀವು ಚೇತರಿಸಿಕೊಳ್ಳುವುದಕ್ಕಾಗಿ ಮಗು ಕಾಯುತ್ತಿದೆ ಎಂದು ಹೇಳುತ್ತಿದ್ದರು.
ಡಾ. ಆರ್ಫಾಗೆ ಶ್ವಾಸಕೋಶದ ನರಗಳಲ್ಲಿ ರಕ್ತ ಹೆಪ್ಪುಗಟ್ಟಿತ್ತು. ಇದು ಬಹಳ ಅಪರೂಪದ ಪ್ರಕರಣವಾದರೂ ಅಪಾಯಕಾರಿ ಪರಿಸ್ಥಿತಿಯಾಗಿತ್ತು. ಅವರು ಗೆದ್ದು ಬರುತ್ತಾರೆ ಎಂಬ ಭರವಸೆ ನಮಗಿತ್ತು. ಕೋವಿಡ್ ಗೆದ್ದು ಮಗುವಿನ ಜೊತೆ ಮನೆಗೆ ಮರಳಿದ್ದಾರೆ ಎಂದು ವೈದ್ಯರು ಸಂತಸ ವ್ಯಕ್ತಪಡಿಸಿದ್ದಾರೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ












Click it and Unblock the Notifications