Earthquake: ಪಶ್ಚಿಮ ಬಂಗಾಳದಲ್ಲಿ ಪ್ರಬಲ ಭೂಕಂಪ- 5.1 ತೀವ್ರತೆಯಲ್ಲಿ ಕಂಪಿಸಿದ ಭೂಮಿ
ಕೋಲ್ಕತ್ತಾ ಫೆಬ್ರವರಿ 25: ಬಂಗಾಳಕೊಲ್ಲಿಯಲ್ಲಿ ಮಂಗಳವಾರ ಬೆಳಗಿನ ಜಾವ ಪ್ರಬಲ ಭೂಕಂಪ ಸಂಭವಿಸಿದೆ. ಎನ್ಸಿಎಸ್ ಪ್ರಕಾರ ಅದರ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 5.1 ಎಂದು ಅಳೆಯಲಾಗಿದೆ. ಇಂದು ಬೆಳಿಗ್ಗೆ 6:10ಕ್ಕೆ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದು ನೆಲದಿಂದ 91 ಕಿಲೋಮೀಟರ್ ಆಳದಲ್ಲಿದೆ ಎಂದು ಗುರುತಿಸಲಾಗಿದೆ. ಭೂಕಂಪ ಸಂಭವಿಸಿದಾಗ ಜನರು ತಮ್ಮ ಮನೆಗಳಲ್ಲಿ ಮಲಗಿದ್ದರು. ಎಚ್ಚರವಾಗಿದ್ದವರಿಗೆ ಬಲವಾದ ಕಂಪನದ ಅನುಭವವಾಗಿದೆ. ಭಯಗೊಂಡ ಅನೇಕರು ತಮ್ಮ ಮನೆಗಳಿಂದ ಹೊರ ಓಡಿ ಬಂದಿದ್ದಾರೆ.
ಎನ್ಸಿಎಸ್ ತನ್ನ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ''25/02/2025 ರಂದು ಮಂಗಳವಾರ ಬೆಳಿಗ್ಗೆ 6:10:25ಕ್ಕೆ ಪಶ್ಚಿಮ ಬಂಗಾಳದಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದ ತೀವ್ರತೆ 5.1 ಆಗಿತ್ತು. ಇದರ ಕೇಂದ್ರ 19.52 ಉತ್ತರ ಅಕ್ಷಾಂಶ ಮತ್ತು 88.55 ಪೂರ್ವ ರೇಖಾಂಶದಲ್ಲಿತ್ತು. ಬಂಗಾಳಕೊಲ್ಲಿಯಲ್ಲಿ 91 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ'' ಎಂದು ಹಂಚಿಕೊಳ್ಳಲಾಗಿದೆ.

ಭಯಭೀತರಾದ ಜನ
ಭೂಕಂಪನದಿಂದ ಭಯಭೀತರಾದ ಜನ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ''ಇಂದು ಬೆಳಗ್ಗೆ ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ ಪ್ರಬಲ ಭೂಕಂಪನದ ಅನುಭವವಾಯಿತು. ನಾವು ಭಯಭೀತರಾಗಿ ಮನೆಗಳಿಂದ ಹೊರಬಂದೆವು'' ಎಂದು ಸ್ಥಳೀಯರು ಹೇಳಿಕೊಂಡಿದ್ದಾರೆ.
''ನನಗೆ ನಿದ್ರೆಯಿಂದ ಎಚ್ಚರಗೊಂಡು ಹಾಸಿಗೆಯ ಮೇಲೆ ಕುಳಿತಿದ್ದಾಗ ತಲೆ ಸುತ್ತುತ್ತಿರುವಂತೆ ಅನಿಸಿತು, ಮೊದಲಿಗೆ ತನಗೆ ತಲೆ ಸುತ್ತುತ್ತಿರಬಹುದು ಎಂದು ನಾನು ಭಾವಿಸಿದೆ. ಆದರೆ ಭೂಕಂಪದ ಶಬ್ದ ಕೇಳಿದಾಗ ಮನೆಯಿಂದ ಹೊರಗೆ ಓಡಿಬಂದೆ' ಎಂದು ಸ್ಥಳೀಯ ನಿವಾಸಿ ಆತಂಕವನ್ನು ವ್ಯಕ್ತಪಡಿಸಿದ್ದಾರೆ.
ಇದಕ್ಕೂ ಮುನ್ನ ಸೋಮವಾರ ದೆಹಲಿ-ಎನ್ಸಿಆರ್ನಲ್ಲಿ ಭೂಕಂಪನದ ಅನುಭವವಾಗಿತ್ತು. ಕಳೆದ ಏಳು ದಿನಗಳಲ್ಲಿ ದೆಹಲಿಯಲ್ಲಿ ಮೂರು ಬಾರಿ ಭೂಕಂಪ ಸಂಭವಿಸಿದೆ. ಹೀಗಾಗಿ ಈ ಪ್ರದೇಶ ಭೂಕಂಪ ಅಪಾಯದ ಕೆಂಪು ವಲಯದಲ್ಲಿದೆ. ಜನರು ಭಯಭೀತರಾಗದಂತೆ ಮನವಿ ಮಾಡಲಾಗಿದೆ.
ಬಂಗಾಳದ ಜಲ್ಪೈಗುರಿಯ ಪಶ್ಚಿಮ ಭಾಗಗಳು ಮತ್ತು ಕೂಚ್ ಬೆಹಾರ್ನ ಉತ್ತರ ಜಿಲ್ಲೆಗಳು ಭೂಕಂಪನ ವಲಯ V ರಲ್ಲಿವೆ. ಈ ಎರಡು ಜಿಲ್ಲೆಗಳ ಉಳಿದ ಭಾಗಗಳು ಡಾರ್ಜಿಲಿಂಗ್, ಉತ್ತರ ದಿನಾಜ್ಪುರ, ದಕ್ಷಿಣ ದಿನಾಜ್ಪುರ, ಮಾಲ್ಡಾ, 24 ಉತ್ತರ ಪರಗಣಗಳು ಮತ್ತು 24 ದಕ್ಷಿಣ ಪರಗಣಗಳು ಜಿಲ್ಲೆಗಳೊಂದಿಗೆ ವಲಯ IV ರಲ್ಲಿ ಬರುತ್ತವೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications