ವಿಮಾನದಲ್ಲಿ ಜನಿಸಿದ್ದ ಮಗುವಿಗೆ ಜನನ ಪ್ರಮಾಣಪತ್ರವೇ ಸಿಗುತ್ತಿಲ್ಲ
ನವದೆಹಲಿ, ಏಪ್ರಿಲ್ 7: ಕಳೆದ ತಿಂಗಳು ಬೆಂಗಳೂರು-ಜೈಪುರ ವಿಮಾನದಲ್ಲಿ ಮಾರ್ಗ ಮಧ್ಯೆಯೇ ಮಗು ಜನಿಸಿದ್ದು ಎಲ್ಲೆಲ್ಲೂ ಸುದ್ದಿಯಾಗಿತ್ತು. ವಿಮಾನ ಯಾನದ ಸಂದರ್ಭ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಇಂಡಿಗೋ ವಿಮಾನ ಸಿಬ್ಬಂದಿ ಸಹಾಯದೊಂದಿಗೆ, ಅದೇ ವಿಮಾನದಲ್ಲಿದ್ದ ಡಾ. ಸುಬಹಾನಾ ನಾಜೀರ್ ಅವರು ಯಶಸ್ವಿ ಹೆರಿಗೆ ಮಾಡಿಸಿದ್ದರು.
ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆ ಆಂಬುಲೆನ್ಸ್ನಲ್ಲಿ ತಾಯಿ ಮಗುವನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ತಾಯಿ ಮಗು ಕೂಡ ಆರೋಗ್ಯವಾಗಿದ್ದಾರೆ. ಆದರೆ ಆ ಮಗುವಿಗೆ ಈಗ ಜನನ ಪ್ರಮಾಣ ಪತ್ರ ಸಿಗುವುದೇ ಸಮಸ್ಯೆಯಾಗಿಬಿಟ್ಟಿದೆ.
ನಿಯಮದ ಪ್ರಕಾರ ಮಗು ಜನಿಸಿದ 21 ದಿನಗಳಲ್ಲಿ ಜನನ ಪ್ರಮಾಣ ಪತ್ರ ನೀಡಬೇಕು. ಆದರೆ ಮಗು ವಿಮಾನದಲ್ಲಿ ಜನಿಸಿರುವುದು ಕೆಲವು ಗೊಂದಲಗಳಿಗೆ ಎಡೆಮಾಡಿಕೊಟ್ಟಿದೆ.

ಮಾರ್ಚ್ 17ರಂದು ಬೆಂಗಳೂರಿನಿಂದ ಜೈಪುರದೆಡೆಗೆ ಹೊರಟಿದ್ದ ವಿಮಾನದಲ್ಲಿ ಮಗು ಜನಿಸಿತ್ತು. ನಂತರ ಜೈಪುರದಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿ ದುಬಾರಿಯಾಗಿದ್ದ ಕಾರಣ ಅಲ್ಲಿಂದ ಬಿಡುಗಡೆಗೊಳಿಸಿ ಬೀವಾರ್ ಜಿಲ್ಲೆಯಲ್ಲಿನ ಗ್ರಾಮದಲ್ಲಿ ಇಬ್ಬರನ್ನೂ ದಾಖಲಿಸಲಾಗಿತ್ತು. ಆಗಿನಿಂದಲೂ ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಪೋಷಕರು ಓಡಾಡುತ್ತಿದ್ದಾರೆ. ಮಗುವಿಗೆ 20 ದಿನಗಳಾಗಿದ್ದು, ಜನನ ಪ್ರಮಾಣ ಪತ್ರ ದೊರೆತಿಲ್ಲ.
ಗ್ರಾಮದ ಸರಪಂಚ್ ಅವರ ಬಳಿ ವಿಚಾರಿಸಿದ್ದು, ಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವರದಿ ಕೇಳಿದ್ದಾರೆ. ಆದರೆ ಅಲ್ಲಿ ಹೆರಿಗೆಯೇ ಆಗದ್ದರಿಂದ ಅಲ್ಲಿಯೂ ಗೊಂದಲ ಉಂಟಾಗಿದೆ.
ಮಗು ವಿಮಾನದಲ್ಲಿ ಜನಿಸಿದ್ದರಿಂದ ಇಂಥ ಗೊಂದಲಗಳು ಉಂಟಾಗಿವೆ ಎಂದು ಮಗುವಿನ ತಂದೆ ತಮ್ಮ ಪರದಾಟ ಹೇಳಿಕೊಂಡಿದ್ದಾರೆ.
Recommended Video
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications