ಕೊಟ್ಟಾಯಂನಲ್ಲಿ ವಿದ್ಯಾರ್ಥಿ Ragging, ಕಿಡ್ನಿ ಫೇಲ್ಯೂರ್
ಕೇರಳದಲ್ಲಿ ನಡೆದಿರುವ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಪ್ರಕರಣ ದಿಗ್ಭ್ರಮೆ ಉಂಟು ಮಾಡಿದೆ. ಸದ್ಯಕ್ಕೆ ಅಲ್ಲಿನ ಪೊಲೀಸರು ಆರೋಪಿಗಳ ಪೈಕಿ ಕೆಲವರನ್ನು ಬಂಧಿಸಿದ್ದು, ತಲೆ ತಪ್ಪಿಸಿಕೊಂಡವರ ಶೋಧದಲ್ಲಿ ತೊಡಗಿದ್ದಾರೆ
ತ್ರಿಸ್ಸೂರ್, ಡಿಸೆಂಬರ್ 19: ಇಪ್ಪತ್ತೆರಡು ವರ್ಷದ ವಿದ್ಯಾರ್ಥಿ ಮೇಲೆ Ragging ನಡೆದು, ಕಿಡ್ನಿ ವೈಫಲ್ಯವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಒ.ಎಸ್.ಅವಿನಾಶ್ ಚಿಕಿತ್ಸೆ ಪಡೆಯುತ್ತಿರುವ ಪಾಲಿಟೆಕ್ನಿಕ್ ವಿದ್ಯಾರ್ಥಿ. ಆತನೂ ಸೇರಿದಂತೆ ಎಂಟು ವಿದ್ಯಾರ್ಥಿಗಳನ್ನು ಡಿಸೆಂಬರ್ 2ರ ರಾತ್ರಿ ಬೆತ್ತಲೆ ಮಾಡಿ, Ragging ನಡೆಸಿದ್ದರು.
ಕೊಟ್ಟಾಯಂನ ಸರಕಾರಿ ಪಾಲಿಟೆಕ್ನಿಕ್ ಇನ್ ಸ್ಟಿಟ್ಯೂಟ್ ನಲ್ಲಿ ಓದುತ್ತಿದ್ದ ಅವಿನಾಶ್ ನನ್ನು ಬೆತ್ತಲು ಮಾಡಿ ಐದು ಗಂಟೆಗೂ ಹೆಚ್ಚು ಕಾಲ ಕಠಿಣವಾದ ಚಟುವಟಿಕೆಗಳನ್ನು ಮಾಡಿಸಿದ್ದರು. ಒಂಬತ್ತು ಆರೋಪಿಗಳ ಪೈಕಿ ಜೆರಿನ್, ಸರನ್, ಮನು, ರೈಸನ್ ಹಾಗೂ ಜಯಕೃಷ್ಣನ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.
ಬಲವಂತವಾಗಿ ಅವಿನಾಶ್ ಬಾಯಲ್ಲಿ ಮದ್ಯ ಸುರಿದಿದ್ದಾರೆ. ಇದರಿಂದ ಕಿಡ್ನಿ ಮೇಲೆ ಪರಿಣಾಮ ಬೀರಿದೆ ಎಂದು ಡಾ.ಅಬ್ದುಲ್ ಶಿಜಿ ತಿಳಿಸಿದ್ದಾರೆ.[ಫಿನಾಯಿಲ್ ಕುಡಿಸಿದ ಪ್ರಕರಣ: ಮೂವರು ವಿದ್ಯಾರ್ಥಿನಿಯರ ಬಂಧನ]

ಈಗಾಗಲೇ ಅವಿನಾಶ್ ಗೆ ನಾಲ್ಕು ಸುತ್ತು ಕಿಡ್ನಿ ಡಯಾಲಿಸಿಸ್ ಮಾಡಲಾಗಿದೆ. ಮುಂಚೆಗಿಂತ ಪರಿಸ್ಥಿತಿ ಸುಧಾರಿಸಿದೆ ಎಂದು ವೈದ್ಯರು ತಿಳಿಸಿದ್ದಾರೆ. "ನಮ್ಮನ್ನು ಬೆತ್ತಲು ಮಾಡಿ ಗಂಟೆಗಟ್ಟಲೆ ತೊಂದರೆ ಕೊಟ್ಟರು. ನೆಲದ ಮೇಲೆ ಈಜುಕೊಳ ಇದೆ ಅನ್ನೋ ರೀತಿ ಈಜಿ ಎಂದರು. ಒಂದು ಕೋಣೆಯಲ್ಲಿ ಕೂಡಿ ಹಾಕಿ ಜೋರು ದನಿಯಲ್ಲಿ ಹಾಡಲು ಹೇಳಿದರು. ಸುಸ್ತಾಗಿ ಕುಸಿದು ಬೀಳುವ ಸ್ಥಿತಿ ತಲುಪಿದರೂ ಹಿಂಸೆ ನೀಡುವುದನ್ನು ಮುಂದುವರಿಸಿದರು' ಎಂದು ಅವಿನಾಶ್ ತಿಳಿಸಿದ್ದಾನೆ.
ದಲಿತ ಕುಟುಂಬಕ್ಕೆ ಸೇರಿದ ಅವಿನಾಶ್ ತಂದೆಗೆ ಸಣ್ಣದೊಂದು ಕೆಲಸ ಇದೆ. ಅವರಿಗೆ ವೈದ್ಯಕೀಯ ವೆಚ್ಚ ಭರಿಸುವ ಆರ್ಥಿಕ ಚೈತನ್ಯ ಕೂಡ ಇಲ್ಲ. 'ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕು. ಮುಂದೆ ಯಾರಿಗೂ ನನ್ನ ಮಗನಿಗಾದ ರೀತಿಯ ತೊಂದರೆ ಆಗಬಾರದು' ಎಂದಿದ್ದಾರೆ ಅವಿನಾಶ್ ತಂದೆ ಶಿವದಾಸನ್.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications