ಯಾಸಿನ್ ಭಟ್ಕಳ್ ಪರಾರಿಗೆ ಸಂಚು ರೂಪಿಸಿದ್ದ ವಿದ್ಯಾರ್ಥಿ
ನವದೆಹಲಿ, ಮಾರ್ಚ್, 21: ಉಗ್ರ ಯಾಸಿನ್ ಭಟ್ಕಳ್ ನನ್ನು ಜೈಲಿನಿಂದ ಪರಾರಿ ಮಾಡಲು ಉಗ್ರ ಸಂಘಟನೆಗಳು ಸಂಚು ರೂಪಿಸಿದ್ದವು ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. 19 ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಅಶಿಕ್ ಅಹಮದ್ ನನ್ನು ಗುಪ್ತಚರ ದಳ ಬಂಧಿಸಿದ ನಂತರ ಈ ಮಾಹಿತಿ ಗೊತ್ತಾಗಿದೆ.
ಹೂಗ್ಲಿಯ ನಿವಾಸಿಯಾಗಿದ್ದ ಅಶಿಕ್ ಅಹಮದ್ ನನ್ನು ಉಗ್ರ ಚಟುವಟಿಕೆ ಅನುಮಾನದ ಆಧಾರದ ಮೇಲೆ ಗುಪ್ತಚರ ದಳ ಬಂಧನ ಮಾಡಿತ್ತು. ಜುಂದ್-ಅಲ್-ಖಲೀಫಾ-ಹಿಂದ್ ಸಂಘಟನೆ ಪರ ಕೆಲಸ ಮಾಡುತ್ತಿದ್ದ ಆರೋಪದಲ್ಲಿ ಅಶಿಕ್ ಅಹಮದ್ ನನ್ನು ಗುರುವಾರ ಬಂಧನ ಮಾಡಲಾಗಿತ್ತು. ಈತ ಉಗ್ರ ಸಂಘಟನೆ ಐಎಸ್ ಐಎಸ್ ಜತೆ ಸಹ ಸಂಪರ್ಕ ಇಟ್ಟುಕೊಂಡಿದ್ದ.[ಉಗ್ರ ಯಾಸಿನ್ ಭಟ್ಕಳ್ ಜೇಬಿನಲ್ಲಿ ಇದ್ದದ್ದಾದರೂ ಏನು?]
ಅಶಿಕ್ ಅಹಮದ್ ಮತ್ತು ಹೈದ್ರಾಬಾದಿನ ಮೊಹಮದ್ ನಫೀಜ್ ಯಾಸಿನ್ ಭಟ್ಕಳ್ ನನ್ನು ಜೈಲಿನಿಂದ ಪರಾರಿ ಮಾಡಿಸಲು ಸಂಚು ರೂಪಿಸಿದ್ದರು. ತಿಹಾರ್ ಜೈಲಿನಲ್ಲಿರುವ ಯಾಸೀನ್ ಬಿಡುಗಡೆ ಮಾಡಿಸುವ ಉದ್ದೇಶ ಹೊಂದಿದ್ದರು ಎಂದು ವಿಚಾರಣೆ ವೇಳೆ ಗೊತ್ತಾಗಿದೆ.

ಇಡೀ ಕಾರ್ಯತಂತ್ರದ ಬಗ್ಗೆ ಅಹಮದ್ ಮಾಹಿತಿ ನೀಡಿಲ್ಲ. ಆದರೆ, ಜೆಕೆಎಚ್ ಸಂಘಟನೆಯ ಮುಂಬರುವ ಯೋಜನೆಗಳಲ್ಲಿ ಯಾಸಿನ್ ಭಟ್ಕಳ್ನನ್ನು ಜೈಲಿನಿಂದ ಬಿಡುಗಡೆ ಮಾಡಿಸುವುದೂ ಒಂದಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಅಹಮದ್ ಹಾಗೂ ನಫೀಜ್ ನಡೆಸಿರುವ ಸಂಭಾಷಣೆಗಳಿಂದ ಈ ಮಾಹಿತಿ ಲಭ್ಯವಾಗಿದೆ ಎಂದು ತನಿಖಾಧಿಕಾರಿಯೊಬ್ಬರು ತಿಳಿಸಿದ್ದಾರೆ.[ಪತ್ನಿಗೆ ಕರೆ ಮಾಡಿದ್ದ ಯಾಸಿನ್]
ಅಶಿಕ್ ಅಹಮದ್ ಉಗ್ರ ಸಂಘಟನೆಗಳೊಂದಿಗೆ ನಿಕಟ ಸಂಪರ್ಕ ಹೊಂದಿದ್ದ. ತನ್ನ ಸ್ನೇಹಿತರನ್ನು ಬಳಸಿಕೊಂಡು ಯಾಸಿನ್ ಭಟ್ಕಳ್ ನನ್ನು ಜೈಲಿನಿಂದ ಪರಾರಿ ಮಾಡಲು ಯತ್ನ ನಡೆಸಿದ್ದ ಎಂಬ ಆಘಾತಕಾರಿ ಅಂಶ ಇದೀಗ ಬಯಲಾಗಿದೆ.
ಯಾಸಿನ್ ಭಟ್ಕಳ್ ಯಾರು?
ಇಂಡಿಯನ್ ಮುಜಾಹಿದೀನ್ ಉಗ್ರಗಾಮಿ ಸಂಘಟನೆಯ ಭಾರತದ ಹೊಣೆ ಹೊತ್ತಿದ್ದ ಯಾಸಿನ್ ಭಟ್ಕಳ್ ಮೇಲೆ ಸರಣಿ ಬಾಂಬ್ ಸ್ಫೋಟ ನಡೆಸಿದ ಆರೋಪವಿದೆ. ಸದ್ಯ ತಿಹಾರ್ ಜೈಲಿನಲ್ಲಿ ಬಿಗಿ ಭದ್ರತೆ ನಡುವೆ ಇಡಲಾಗಿದೆ.
-
Karnataka Weather: ಮಾರ್ಚ್ 12ರ ವರೆಗೆ ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುನ್ಸೂಚನೆ -
ಬೆಂಗಳೂರು, ವಿದ್ಯಾಕಾಶಿ ಧಾರವಾಡದಲ್ಲಿ "ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್" ಆರಂಭ: ಬಜೆಟ್ನಲ್ಲಿ ಘೋಷಣೆ -
Karnataka Highways: 1846 ಕಿಮೀ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ 5000 ಕೋಟಿ ರೂ ಘೋಷಣೆ -
ಕರ್ನಾಟಕದ 66 ಆರ್ಟಿಓಗಳಲ್ಲಿ ಡಿಜಿಟಲ್ ವ್ಯವಸ್ಥೆ: ವಾಹನ ತೋರಿಸಿದರಷ್ಟೇ ಫಿಟ್ನೆಸ್ ಪ್ರಮಾಣಪತ್ರ, ಏನಿದು? -
ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ: ಇದು ನಿಜಕ್ಕೂ ಕಾರ್ಯಸಾಧುವೆ? ತಜ್ಞರು ಹೇಳುವುದೇನು? -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ












Click it and Unblock the Notifications