ಕಪ್ಪೆ ಬೆವರು ನೆಕ್ಕುತ್ತಿದ್ದಾರೆ ವಿದ್ಯಾರ್ಥಿಗಳು! ಕಾರಣ ವಿಚಿತ್ರ
ನುರಪುರ (ಹಿಮಾಚಲ ಪ್ರದೇಶ), ಡಿಸೆಂಬರ್ 14: ವಿದ್ಯಾರ್ಥಿಗಳು ಕಪ್ಪೆಗಳ ಬೆವರನ್ನು ನೆಕ್ಕುತ್ತಿರುವ ವಿಚಿತ್ರ ಘಟನೆ ಹಿಮಾಚಲ ಪ್ರದೇಶದಲ್ಲಿ ವರದಿಯಾಗಿದೆ.
ಹೌದು, ಇಲ್ಲಿನ ನುರಪುರ ಪ್ರದೇಶದ ಕೆಲವು ಶಾಲೆ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಮತ್ತಿಗಾಗಿ ಕಪ್ಪೆಗಳ ಬೆವರನ್ನು ನೆಕ್ಕುತ್ತಿದ್ದಾರೆ.
ಮೊದಲು ಕಪ್ಪೆಗಳನ್ನು ಚೆನ್ನಾಗಿ ಆಡಿಸಿ ಅವು ಸುಸ್ತಾಗುವಂತೆ ಮಾಡುತ್ತಾರೆ. ಕಪ್ಪೆಗಳು ದಣಿದು ಅವು ಬೆವರು ಪ್ರಾರಂಭಿಸಿದಾಗ ಅವನ್ನು ಹಿಡಿದು ನೆಕ್ಕುತ್ತಾರೆ. ಅವುಗಳ ಬೆವರು ನೆಕ್ಕಿ ಅಮಲು ಪಡೆಯುತ್ತಿದ್ದಾರೆ ವಿದ್ಯಾರ್ಥಿಗಳು.

ಹಿಮಾಚಲ ಪ್ರದೇಶದ ಕೆಲವು ಭಾಗಗಳಲ್ಲಿ ಈ ರೀತಿಯ ಘಟನೆಗಳು ನಡೆಯುತ್ತಿರುವ ಬಗ್ಗೆ ನುರಪುರ ಕ್ಷೇತ್ರದ ಶಾಸಕರ ರಾಕೇಶ್ ಪಠಾನಿಯಾ ಅವರು ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ನುರಪುರ ಬಳಿಯ ಕಾಲೇಜಿನ ಪ್ರಾಂಶುಪಾಲರೊಬ್ಬರು ವಿದ್ಯಾರ್ಥಿಗೆ ಕಪ್ಪೆಯೊಂದಿಗೆ ಆಡದಂತೆ ಹೇಳಿದ್ದಾರೆ, ಇದರಿಂದ ಸಿಟ್ಟಾದ ವಿದ್ಯಾರ್ಥಿ ಪ್ರಾಂಶುಪಾಲರ ಮೇಲೆ ಹಲ್ಲೆ ಮಾಡಿದ್ದಾನೆ. ಈ ಘಟನೆಯ ತನಿಖೆ ನಡೆಸಿದಾಗ ವಿದ್ಯಾರ್ಥಿಗಳು ಕಪ್ಪೆಗಳನ್ನು ಅಮಲಿನ ಪದಾರ್ಥವಾಗಿ ಬೆಳಕಿಗೆ ಬಂದಿರುವುದು ಗೊತ್ತಾಗಿದೆ.
ಕಾಡುಗಳಿಂದ ಆವೃತವಾಗಿರುವ ಹಿಮಾಚಲ ಪ್ರದೇಶದಲ್ಲಿ ಕಪ್ಪೆಗಳು ಯಥೇಚ್ಛವಾಗಿ ದೊರಕುತ್ತವೆ ಹಾಗಾಗಿ ಮಾದಕ ವ್ಯಸನಿಗಳು ಕಡಿಮೆ ಖರ್ಚಿನ ಇವುಗಳನ್ನೇ ಮಾದಕ ವ್ಯಸಕ್ಕೆ ಬಳಸುತ್ತಿದ್ದಾರೆ.
ಕಪ್ಪೆ ನೆಕ್ಕುವ ಪ್ರಕರಣವನ್ನು ಹಿಮಾಚಲ ಪ್ರದೇಶ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ಎಲ್ಲಾ ಶಾಲಾ-ಕಾಲೇಜುಗಳಿಗೆ ಎಚ್ಚರಿಕೆಗಳನ್ನು ರವಾನಿಸಿದ್ದಾರೆ.
-
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price












Click it and Unblock the Notifications