ಜೆಇಇ ಪರೀಕ್ಷೆ: ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ ಸರ್ಕಾರ
ನವದೆಹಲಿ, ಅಕ್ಟೋಬರ್ 13: ಕೋವಿಡ್ 19ರ ಕಾರಣದಿಂದ ಪ್ರಸಕ್ತ ಸಾಲಿನ ಜೆಇಇ ಅಡ್ವಾನ್ಸಡ್ ಪ್ರವೇಶ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ಭಾರತೀಯ ತಂತ್ರಜ್ಞಾನ ಸಂಸ್ಥೆಯ (ಐಐಟಿ) ಪ್ರವೇಶ ಆಕಾಂಕ್ಷಿ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ.
ಈ ಬಾರಿ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿಗಳು 2021ರಲ್ಲಿ ನಡೆಯುವ ಜೆಇಇ ಪರೀಕ್ಷೆಗೆ ನೇರವಾಗಿ ಹಾಜರಾಗಬಹುದು ಎಂದು ಜಂಟಿ ಪ್ರವೇಶಾತಿ ಮಂಡಳಿ (ಜೆಎಬಿ) ಮಂಗಳವಾರ ತಿಳಿಸಿದೆ. ದೇಶದಾದ್ಯಂತ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮೇನ್ ಅನ್ನು ನಡೆಸಲಾಗುತ್ತದೆ. ದೇಶದ 23 ಐಐಟಿಗಳಿಗೆ ಪ್ರವೇಶ ನೀಡಲು ಜೆಇಇ ಅಡ್ವಾನ್ಸಡ್ ಪರೀಕ್ಷೆಯನ್ನು ನಡೆಸಲಾಗುತ್ತದೆ. ಜೆಇಇ ಅಡ್ವಾನ್ಸಡ್ಗೆ ಹಾಜರಾಗಲು ಜೆಇಇ ಮೇನ್ ಕಡ್ಡಾಯವಾಗಿದೆ.
ಪ್ರಸ್ತುತ ಒಬ್ಬ ಅಭ್ಯರ್ಥಿಗೆ ಐಐಟಿ ಪ್ರವೇಶ ಪರೀಕ್ಷೆಯಲ್ಲಿ ಎರಡು ಬಾರಿ ಮಾತ್ರ ಪ್ರಯತ್ನ ನಡೆಸಲು ಅವಕಾಶ ನೀಡಲಾಗುತ್ತದೆ. ಆದರೆ ಈ ವರ್ಷ ಪರೀಕ್ಷೆ ಬರೆಯಲು ಸಾಧ್ಯವಾಗದ ಕೊನೆಯ ವರ್ಷದಲ್ಲಿ ಇರುವ ಅಥವಾ ಎರಡನೆಯ ಪ್ರಯತ್ನದ ಅಭ್ಯರ್ಥಿಗಳಿಗೆ ವಿನಾಯಿತಿ ನೀಡಲಾಗುತ್ತಿದೆ.

ಐಐಟಿ ಪ್ರವೇಶ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿಗಳು ಮುಂದಿನ ವರ್ಷ ಪರೀಕ್ಷೆಗೆ ಹಾಜರಾಗಲು ಹೆಚ್ಚುವರಿ ಅವಕಾಶ ಪಡೆದುಕೊಳ್ಳಲಿದ್ದಾರೆ. ಈ ಬಗ್ಗೆ ಮಂಗಳವಾರ ನಡೆದ ಜಂಟಿ ಪ್ರವೇಶಾತಿ ಮಂಡಳಿಯ ತುರ್ತು ಸಭೆಯಲ್ಲಿ ತೀರ್ಮಾನಿಸಲಾಯಿತು.
-
SSLC ಪರೀಕ್ಷೆ 2026: ಪರೀಕ್ಷಾ ಹಾಲ್ಗೆ ಹೋಗುವ ಮುನ್ನ ನಿಮ್ಮ ಕೈಯಲ್ಲಿ ಈ ವಸ್ತುಗಳಿವೆಯಾ? ಒಮ್ಮೆ ಚೆಕ್ ಮಾಡಿಕೊಳ್ಳಿ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
ಇಂದಿನಿಂದ SSLC ಪರೀಕ್ಷೆ: 8.66 ಲಕ್ಷ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಶುಭಹಾರೈಕೆ; ಆತಂಕಬೇಡ ಎಂದ ಸರ್ಕಾರ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ












Click it and Unblock the Notifications