ಪಿವಿ ನರಸಿಂಹ ರಾವ್ ಗೆ ಭಾರತ ರತ್ನ ನೀಡಿ: ಸ್ವಾಮಿ
ನವದೆಹಲಿ, ಡಿ.24: ಮಾಜಿ ಪ್ರಧಾನಿ ಮತ್ತು ಕಾಂಗ್ರೆಸ್ ನಾಯಕ ದಿವಂಗತ ಪಿ.ವಿ.ನರಸಿಂಹರಾವ್ ಅವರಿಗೆ ಭಾರತರತ್ನ ನೀಡುವಂತೆ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಒತ್ತಾಯಿಸಿದ್ದಾರೆ. ನರಸಿಂಹರಾವ್ ಅವರ 10ನೇ ಪುಣ್ಯಸ್ಮರಣೆ ಸಮಾರಂಭದಲ್ಲಿ ಸುಬ್ರಮಣ್ಯಸ್ವಾಮಿ ಹೀಗೊಂದು ಬೇಡಿಕೆ ಇಟ್ಟಿದ್ದಾರೆ.
ನರಸಿಂಹರಾವ್ ಅವರು ದೇಶದಲ್ಲಿ ಆರ್ಥಿಕ ಪ್ರಗತಿ ತಂದರು ಮತ್ತು ಆರ್ಥಿಕ ಪ್ರಗತಿಗೆ ಬೇಕಾದ ಉತ್ತಮ ಯೋಜನೆಗಳನ್ನು ರೂಪಿಸಿದ್ದರು. ದೇಶವನ್ನು ಆರ್ಥಿಕ ಪ್ರಗತಿಗೆ ತಂದ ನರಸಿಂಹರಾವ್ ಅವರಿಗೆ ದೇಶದ ಅತ್ಯುನ್ನತ ಗೌರವ ಸಲ್ಲಬೇಕು. ಅವರಿಗೆ ಭಾರತರತ್ನ ಪ್ರಶಸ್ತಿ ಸಲ್ಲಬೇಕು ಎಂದು ಸುಬ್ರಮಣ್ಯ ಸ್ವಾಮಿ ಹೇಳಿದರು.

ಪಿ.ವಿ.ನರಸಿಂಹರಾವ್ ನೆಹರು ಮತ್ತು ಗಾಂಧಿ ಕುಟುಂಬದವರಲ್ಲದ ಮೊದಲ ಕಾಂಗ್ರೆಸ್ ಪ್ರಧಾನಿ. 1991 ರಿಂದ 1996ರ ವರೆಗೆ ಪ್ರಧಾನಿಯಾಗಿ ನರಸಿಂಹರಾವ್ ಪೂರ್ಣಾವಧಿ ಪೂರೈಸಿದ್ದರು. 2004 ಡಿಸೆಂಬರ್ 23 ರಂದು ನರಸಿಂಹರಾವ್ ವಿಧಿವಶರಾಗಿದ್ದರು.
ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್, ಶಿಕ್ಷಕ ತಜ್ಞ ಮದನ್ ಮೋಹನ್ ಮಾಳವೀಯ, ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಅವರಿಗೂ ಭಾರತ ರತ್ನ ಪ್ರಶಸ್ತಿ ಮರಣೋತ್ತರವಾಗಿ ಲಭಿಸುವ ಸುದ್ದಿ ಹಬ್ಬಿತ್ತು.
Dr Subramanian @Swamy39 with the ninth Prime Minister of India P. V. Narasimha Rao. (Photo: Indian Express/Archive) pic.twitter.com/ubVEaNdIBO
— NATIONAL RENAISSANCE (@swamyforpm) December 23, 2014 ಇದಾದ ಬೆನ್ನಲ್ಲೇ ಭಾರತದ ಅತ್ಯುನ್ನತ ನಾಗರಿಕ ಪುರಸ್ಕಾರ 'ಭಾರತ ರತ್ನ' ಪದಕಗಳನ್ನು ತಯಾರಿಸಿಕೊಡುವಂತೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾಗೆ ನರೇಂದ್ರ ಮೋದಿ ಸರ್ಕಾರ ಕೇಳಿಕೊಂಡಿತ್ತು.
ಬಿಜೆಪಿ ಹಿರಿಯ ನಾಯಕ,ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಮದನ್ ಮೋಹನ್ ಮಾಳವೀಯಾ ಅವರಿಗೆ ಭಾರತ ರತ್ನ ನೀಡುವುದರ ಬಗ್ಗೆ ಕೇಂದ್ರ ಸರ್ಕಾರ ತನ್ನ ನಿರ್ಧಾರವನ್ನು ಬುಧವಾರ ಪ್ರಕಟಿಸಲಿದೆ.
ಯುಪಿಎ 2 ಸರ್ಕಾರ ತನ್ನ ಅವಧಿಯಲ್ಲಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಹಾಗೂ ವಿಜ್ಞಾನಿ, ಕನ್ನಡಿಗ ಪ್ರೊ.ಸಿ.ಎನ್ ಆರ್ ರಾವ್ ಅವರಿಗೆ ಭಾರರ ರತ್ನ ಪ್ರಶಸ್ತಿ ನೀಡಿ ಗೌರವಿಸಿದ್ದನ್ನು ಇಲ್ಲಿ ಸ್ಮರಿಸಬಹುದು.(ಪಿಟಿಐ)
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications