ಪಿವಿ ನರಸಿಂಹ ರಾವ್ ಗೆ ಭಾರತ ರತ್ನ ನೀಡಿ: ಸ್ವಾಮಿ
ನವದೆಹಲಿ, ಡಿ.24: ಮಾಜಿ ಪ್ರಧಾನಿ ಮತ್ತು ಕಾಂಗ್ರೆಸ್ ನಾಯಕ ದಿವಂಗತ ಪಿ.ವಿ.ನರಸಿಂಹರಾವ್ ಅವರಿಗೆ ಭಾರತರತ್ನ ನೀಡುವಂತೆ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಒತ್ತಾಯಿಸಿದ್ದಾರೆ. ನರಸಿಂಹರಾವ್ ಅವರ 10ನೇ ಪುಣ್ಯಸ್ಮರಣೆ ಸಮಾರಂಭದಲ್ಲಿ ಸುಬ್ರಮಣ್ಯಸ್ವಾಮಿ ಹೀಗೊಂದು ಬೇಡಿಕೆ ಇಟ್ಟಿದ್ದಾರೆ.
ನರಸಿಂಹರಾವ್ ಅವರು ದೇಶದಲ್ಲಿ ಆರ್ಥಿಕ ಪ್ರಗತಿ ತಂದರು ಮತ್ತು ಆರ್ಥಿಕ ಪ್ರಗತಿಗೆ ಬೇಕಾದ ಉತ್ತಮ ಯೋಜನೆಗಳನ್ನು ರೂಪಿಸಿದ್ದರು. ದೇಶವನ್ನು ಆರ್ಥಿಕ ಪ್ರಗತಿಗೆ ತಂದ ನರಸಿಂಹರಾವ್ ಅವರಿಗೆ ದೇಶದ ಅತ್ಯುನ್ನತ ಗೌರವ ಸಲ್ಲಬೇಕು. ಅವರಿಗೆ ಭಾರತರತ್ನ ಪ್ರಶಸ್ತಿ ಸಲ್ಲಬೇಕು ಎಂದು ಸುಬ್ರಮಣ್ಯ ಸ್ವಾಮಿ ಹೇಳಿದರು.

ಪಿ.ವಿ.ನರಸಿಂಹರಾವ್ ನೆಹರು ಮತ್ತು ಗಾಂಧಿ ಕುಟುಂಬದವರಲ್ಲದ ಮೊದಲ ಕಾಂಗ್ರೆಸ್ ಪ್ರಧಾನಿ. 1991 ರಿಂದ 1996ರ ವರೆಗೆ ಪ್ರಧಾನಿಯಾಗಿ ನರಸಿಂಹರಾವ್ ಪೂರ್ಣಾವಧಿ ಪೂರೈಸಿದ್ದರು. 2004 ಡಿಸೆಂಬರ್ 23 ರಂದು ನರಸಿಂಹರಾವ್ ವಿಧಿವಶರಾಗಿದ್ದರು.
ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್, ಶಿಕ್ಷಕ ತಜ್ಞ ಮದನ್ ಮೋಹನ್ ಮಾಳವೀಯ, ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಅವರಿಗೂ ಭಾರತ ರತ್ನ ಪ್ರಶಸ್ತಿ ಮರಣೋತ್ತರವಾಗಿ ಲಭಿಸುವ ಸುದ್ದಿ ಹಬ್ಬಿತ್ತು.
Dr Subramanian @Swamy39 with the ninth Prime Minister of India P. V. Narasimha Rao. (Photo: Indian Express/Archive) pic.twitter.com/ubVEaNdIBO
— NATIONAL RENAISSANCE (@swamyforpm) December 23, 2014 ಇದಾದ ಬೆನ್ನಲ್ಲೇ ಭಾರತದ ಅತ್ಯುನ್ನತ ನಾಗರಿಕ ಪುರಸ್ಕಾರ 'ಭಾರತ ರತ್ನ' ಪದಕಗಳನ್ನು ತಯಾರಿಸಿಕೊಡುವಂತೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾಗೆ ನರೇಂದ್ರ ಮೋದಿ ಸರ್ಕಾರ ಕೇಳಿಕೊಂಡಿತ್ತು.
ಬಿಜೆಪಿ ಹಿರಿಯ ನಾಯಕ,ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಮದನ್ ಮೋಹನ್ ಮಾಳವೀಯಾ ಅವರಿಗೆ ಭಾರತ ರತ್ನ ನೀಡುವುದರ ಬಗ್ಗೆ ಕೇಂದ್ರ ಸರ್ಕಾರ ತನ್ನ ನಿರ್ಧಾರವನ್ನು ಬುಧವಾರ ಪ್ರಕಟಿಸಲಿದೆ.
ಯುಪಿಎ 2 ಸರ್ಕಾರ ತನ್ನ ಅವಧಿಯಲ್ಲಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಹಾಗೂ ವಿಜ್ಞಾನಿ, ಕನ್ನಡಿಗ ಪ್ರೊ.ಸಿ.ಎನ್ ಆರ್ ರಾವ್ ಅವರಿಗೆ ಭಾರರ ರತ್ನ ಪ್ರಶಸ್ತಿ ನೀಡಿ ಗೌರವಿಸಿದ್ದನ್ನು ಇಲ್ಲಿ ಸ್ಮರಿಸಬಹುದು.(ಪಿಟಿಐ)
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ










Click it and Unblock the Notifications