Ahmedabad Plane Crash: ಪ್ರಧಾನಿ ಮೋದಿ, ಅಮಿತ್ ಶಾ ರಾಜೀನಾಮೆಗೆ ಬಿಜೆಪಿ ನಾಯಕನೇ ಆಗ್ರಹ: ಯಾರದು?
ನವದೆಹಲಿ, ಜೂನ್ 13: ಗುಜರಾತ್ ರಾಜಧಾನಿ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿದ್ದು, ಇಡೀ ವಿಮಾನ ನಿಲ್ದಾಣದಾದ್ಯಂತ ದಟ್ಟ ಹೊಗೆ ಹಾಗೂ ಬೆಂಖಿ ಆವರಿಸಿದೆ. ಅಹಮದಾಬಾದ್ ಏರ್ಪೋರ್ಟ್ ಬಳಿ ಟೇಕ್ ಆಫ್ ಆಗುತ್ತಿದ್ದಏರ್ ಇಂಡಿಯಾ ವಿಮಾನ ಏಕಾಏಕಿ ವಿಮಾನ ಪತನಗೊಂಡ ಪರಿಣಾಮ ದಟ್ಟವಾದ ಹೊಗೆ ಕಾಣಿಸಿಕೊಂಡಿದ್ದು, 242 ಜನ ಪ್ರಯಾಣಿಕರಲ್ಲಿ 241 ಮಂದಿ ಪ್ರಯಾಣಿಕರು ಮೃತಪಟ್ಟಿದ್ದು, ಓರ್ವ ವ್ಯಕ್ತಿ ಮಾತ್ರ ಬದುಕುಳಿದಿದ್ದಾರೆ.
ಅಹಮದಾಬಾದ್ ಏರ್ಪೋರ್ಟ್ ಬಳಿ ಮೇಧಿನಿ ನಗರ್ನಲ್ಲಿ ಈ ಘಟನೆ ಸಂಭವಿಸಿದೆ. ಬೋಯಿಂಗ್ 787-8 ಡ್ರೀಮ್ಲೈನರ್ ವಿಮಾನವು 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ 242 ಜನರೊಂದಿಗೆ ಲಂಡನ್ಗೆ ತೆರಳುತ್ತಿತ್ತು. ವಿಮಾನವು ನಗರದ ವಿಮಾನ ನಿಲ್ದಾಣದಿಂದ ಸ್ವಲ್ಪ ದೂರದಲ್ಲಿರುವ ಫೋರೆನ್ಸಿಕ್ ಕ್ರಾಸ್ ರಸ್ತೆಯ ಬಳಿ ಪತನಗೊಂಡಿದ್ದು, ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆದರೆ, ಓರ್ವ ವ್ಯಕ್ತಿಯನ್ನ ಹೊರತು ಪಡಿಸಿ 241 ಮಂದಿ ಮೃತಪಟ್ಟಿದ್ದಾರೆ.

ಗುಜರಾತ್ ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಗುರುವಾರ ಏರ್ ಇಂಡಿಯಾ ವಿಮಾನ ಪತನವಾಗಿದ್ದು ಭಾರತದ ಅತ್ಯಂತ ಭೀಕರ ವಿಮಾನ ದುರಂತಗಳಲ್ಲಿ ಇದು ಒಂದಾಗಿದ್ದು,ಈ ದುರಂತದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಆಗ್ರಹಿಸಿದ್ದಾರೆ.
When a train derailed in 1950s, Lal Bahadur Shashtri resigned. On the same morality I demand PM Modi, HM Amit Shah and Civil Aviation Naidu resign so that a free& fair inquiry is held. All that Modi and associates have been doing so far is galavanting which must stop must stop.
— Subramanian Swamy (@Swamy39) June 12, 2025
1950 ರಲ್ಲಿ ಅರಿಯಲೂರ್ ರೈಲು ಅಪಘಾತದ ನಂತರ ರೈಲ್ವೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಉದಾಹರಣೆ ನೀಡಿದ ಸುಬ್ರಮಣಿಯನ್ ಸ್ವಾಮಿ, ಈ ಭೀಕರ ರೈಲು ಅಪಘಾತದಲ್ಲಿ ಸುಮಾರು 150 ಜನರು ಸಾವನ್ನಪ್ಪಿದ್ದರು ಮತ್ತು ಅದರ ನೈತಿಕ ಹೊಣೆ ಹೊತ್ತು ಶಾಸ್ತ್ರಿ ರಾಜೀನಾಮೆ ನೀಡಿದ್ದರು ಎಂದು ಸುಬ್ರಮಣಿಯನ್ ಸ್ವಾಮಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
1950ರಲ್ಲಿ ರೈಲು ಅಪಘಾತ ಸಂಭವಿಸಿದಾಗ, ಲಾಲ್ ಬಹದ್ದೂರ್ ಶಾಸ್ತ್ರಿ ರಾಜೀನಾಮೆ ನೀಡಿದ್ದರು. ಅದೇ ನೈತಿಕತೆಯ ಆಧಾರದಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ನಾಗರಿಕ ವಿಮಾನ ಸಚಿವ ರಾಮ್ ಮೋಹನ್ ನಾಯ್ಡು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡುವ ಮೂಲಕ, ಮುಕ್ತ ಹಾಗೂ ನ್ಯಾಯಸಮ್ಮತ ತನಿಖೆಗೆ ಅವಕಾಶ ಮಾಡಿಕೊಡಬೇಕು ಎಂದು ನಾನು ಆಗ್ರಹಿಸುತ್ತೇನೆ ಎಂದು ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.
-
ವೆಸ್ಟ್ ಇಂಡೀಸ್ ವಿರುದ್ಧ ಭಾರತ ಗೆಲುವು: ಎರಡು ಬೌಂಡರಿಗಳ ಬಗ್ಗೆ ಯಾರೂ ಮಾತನಾಡಲಿಲ್ಲ ಎಂದು ಬೂಮ್ರಾ ಬೇಸರ -
ಇರಾನ್ ಸುಪ್ರೀಂ ಯತೊಲ್ಲಾ ಅಲಿ ಖಮೇನಿ ಅಂತ್ಯ: ವಿಶ್ವದ ಮೇಲೆ 5 ಪರಿಣಾಮ ಸಾಧ್ಯತೆ: ಆಶಿಶ್ ಸಾರಡ್ಕ ಬರಹ -
ಬೆಂಗಳೂರಿನ ಎಂ.ಎಸ್.ರಾಮಯ್ಯ ಕಾಲೇಜಿನಲ್ಲಿ ಹೇಗಿದ್ರು ನೋಡಿ ರಶ್ಮಿಕಾ ಮಂದಣ್ಣ, ವಿಡಿಯೋ ವೈರಲ್ -
PV Sindhu: ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಪತಿ ಸ್ವಿಮ್ಮಿಂಗ್ ಪೂಲ್ನಲ್ಲಿ ಈಜು ಸಾಹಸ: ಫಿಟ್ನೆಸ್ ತಜ್ಞರು ಹೇಳಿದ್ದೇನು? -
Viral : ರ್ಯಾಪಿಡೋ ಬುಕ್ ಮಾಡಿದವನಿಗೆ ಕಾದಿತ್ತು ಬಿಗ್ ಶಾಕ್: ತನ್ನ ಶಾಲೆಯ 'ಕ್ಲಾಸ್ ಟಾಪರ್' ಈಗ ರ್ಯಾಪಿಡೋ ರೈಡರ್ -
High Speed Rail: ಬೆಂಗಳೂರು-ಹೈದರಾಬಾದ್ ತಲುಪಲು 2 ಗಂಟೆ ಸಾಕು, 3 ಕಡೆ ಎಂಟ್ರಿ, ಮಹತ್ವದ ಅಪ್ಡೇಟ್ -
Sanju Samson: ವೆಸ್ಟ್ ಇಂಡೀಸ್ ವಿರುದ್ಧ ಅಬ್ಬರ: ತೆಗಳಿದ ಬಾಯಲ್ಲೇ ಸಂಜು ಸ್ಯಾಮ್ಸನ್ಗೆ ಗೌತಮ್ ಗಂಭೀರ್ ಶಹಭಾಸ್ಗಿರಿ -
Gold Rate: ಚಿನ್ನ, ಬೆಳ್ಳಿ ದರದಲ್ಲಿ ಏರಿಳಿತ; ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ? -
ಒಂದೇ ವರ್ಷದಲ್ಲಿ 800 ಕೋಟಿ ರೂ ಮೌಲ್ಯದ ಕಂಪನಿ ಕಟ್ಟಿದ 23ರ ಹರೆಯದ ಅಂಜಲಿ ಸರ್ದಾನಾ -
Lunar Eclipse 2026:ನಾಳೆ ಕೇತುಗ್ರಸ್ತ ಚಂದ್ರಗ್ರಹಣ: ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ದರ್ಶನದ ಸಮಯ ಬದಲು, ಗ್ರಹಣ ಶಾಂತಿ ಹೋಮ -
Vrial News: ಕೆಲಸದಿಂದ ತೆಗೆದ ಬಳಿಕ ಪುಕ್ಕಟೆ ಸಹಾಯ ಕೇಳಿದ ಮಾಜಿ ಬಾಸ್: ನೌಕರ ಕೊಟ್ಟ ಉತ್ತರ ವೈರಲ್ -
ಹೊಸ ಮನೆಯಲ್ಲಿ ರಶ್ಮಿಕಾ-ವಿಜಯ್ ಸತ್ಯನಾರಾಯಣ ಪೂಜೆ: ಹುಟ್ಟೂರಿಗೆ ಬಂದ ನವದಂಪತಿಗೆ ಗ್ರಾಮಸ್ಥರಿಂದ ಅದ್ಧೂರಿ ಸ್ವಾಗತ












Click it and Unblock the Notifications