ತಮಿಳುನಾಡು ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ!?
ನವದೆಹಲಿ, ಡಿಸೆಂಬರ್ 8: ಭಾರತೀಯ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ಸಿಂಗ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನದ ಬಗ್ಗೆ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಅನುಮಾನ ವ್ಯಕ್ತಪಡಿಸಿದ್ದಾರೆ. ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯೇ ಎಂಬ ಬಗ್ಗೆ ಅವರು ಶಂಕಿಸಿದ್ದಾರೆ. ಈ ಕುರಿತು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
"ಭಾರತೀಯ ಸೇನೆಯಲ್ಲಿ ಇರುವ ಕೆಲವೇ ಕೆಲವು ಹಿರಿಯ ಅಧಿಕಾರಿಗಳು ಕೇಂದ್ರ ಸರ್ಕಾರಕ್ಕೆ ಆಗಾಗ ಎಚ್ಚರಿಕೆ ಸಂದೇಶವನ್ನು ನೀಡುತ್ತಿದ್ದರು. ಚೀನಾದಿಂದ ಗಡಿ ರೇಖೆ ಉಲ್ಲಂಘನೆ ಆಗುತ್ತಿದೆ, ಚೀನಾದಿಂದ ಬೆದರಿಕೆಗಳು ಹೆಚ್ಚುತ್ತಿವೆ, ಚೀನಾದಿಂದ ನಿಯಮಗಳು ಪಾಲನೆ ಆಗುತ್ತಿಲ್ಲ ಎಂಬುದನ್ನು ಸರ್ಕಾರದ ಗಮನಕ್ಕೆ ತರುತ್ತಿದ್ದರು," ಎಂದು ಸಂಸದ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.
ತಮಿಳುನಾಡಿನ ನೀಲ್ಗಿರಿ ಜಿಲ್ಲೆಯ ಕುನೂರ್ ಬಳಿ ಬುಧವಾರ ನಡೆದ ಸೇನಾ ಹೆಲಿಕಾಪ್ಟರ್ ಪತನವಾಗಿದೆ. ಅದು ಹೊತ್ತಿ ಉರಿದಿರುವ ಬಗ್ಗೆ ಸುದ್ದಿಯಾಗಿದೆ ಆದರೆ ಅದರ ಹಿಂದಿನ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಸುಬ್ರಮಣಿಯನ್ ಸ್ವಾಮಿ ಶಂಕೆ ವ್ಯಕ್ತಪಡಿಸಿದ್ದಾರೆ.

ಲೇಸರ್ ದಾಳಿ ನಡೆಸಿತಾ ಚೀನಾ?:
ತಮಿಳುನಾಡು ಹೆಲಿಕಾಪ್ಟರ್ ಪತನದ ಬಗ್ಗೆ ನನಗೆ ಇನ್ನೊಂದು ವಿಷಯ ಅರ್ಥವಾಗುತ್ತಿಲ್ಲ. ಅದರಲ್ಲಿ ಒಂದು ಸೈಬರ್ ವಾರಫೇರ್ ಆಗಿದ್ದರೆ ಇನ್ನೊಂದು ಲೇಸರ್ ದಾಳಿ ಆಗಿದೆ. ಆ ಮೂಲಕ ಚೀನಾ ದಾಳಿ ನಡೆಸಿದೆಯೇ, ಅಥವಾ ಚೀನಾ ಬೆದರಿಕೆಯೊಡ್ಡುತ್ತಿದ್ದ ರೀತಿಯಲ್ಲಿ ಲೇಸರ್ ಮೂಲಕ ಈ ಘಟನೆಗೆ ಕಾರಣವಾಗಿಯೂ ಇರಬಹುದು. ಆದ್ದರಿಂದ ಈ ವಿಷಯವನ್ನು ನಾವು ತುಂಬಾ ಗಂಭೀರವಾಗಿ ತೆಗೆದುಕೊಳ್ಳಬೇಕು. ಆಂತರಿಕ ಹಾಗೂ ಬಾಹ್ಯ ರಕ್ಷಣೆ ಕುರಿತು ಹೆಚ್ಚು ಲಕ್ಷ್ಯ ವಹಿಸಬೇಕಿದೆ ಎಂದು ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.
ಏನಿದು ಸೇನಾ ಹೆಲಿಕಾಪ್ಟರ್ ಪತನದ ಹಿನ್ನೆಲೆ?:
ತಮಿಳುನಾಡಿನ ನೀಲ್ಗಿರಿ ಜಿಲ್ಲೆಯ ಕುನೂರ್ ಬಳಿ ಬುಧವಾರ ನಡೆದ ಸೇನಾ ಹೆಲಿಕಾಪ್ಟರ್ ಪತನದಲ್ಲಿ ಭಾರತದ ಮೊದಲ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಸೇರಿ ಒಟ್ಟು 13 ಜನರು ಮೃತಪಟ್ಟಿದ್ದಾರೆ. ಹೆಲಿಕಾಪ್ಟರ್ ಪತನಗೊಂಡ ಸ್ಥಳದಿಂದ ರಕ್ಷಿಸಲ್ಪಟ್ಟಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರಿಗೆ ಶೇ.80 ಸುಟ್ಟ ಗಾಯಗಳಾಗಿದ್ದು, ಜೀವನ್ಮರಣದ ಹೋರಾಟ ನಡೆಸುತ್ತಿದ್ದಾರೆ.
ಉನ್ನತ ಮಟ್ಟದ ತನಿಖೆಗೆ ಸ್ವಾಮಿ ಆಗ್ರಹ:
ಭಾರತದ ಮೊದಲ ರಕ್ಷಣಾ ಸಿಬ್ಬಂದಿಯ (ಸಿಡಿಎಸ್) ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮತ್ತು ಇತರ 11 ಮಂದಿಯನ್ನು ಬಲಿತೆಗೆದುಕೊಂಡ ತಮಿಳುನಾಡಿನ ಕೂನೂರ್ ಬಳಿ ಹೆಲಿಕಾಪ್ಟರ್ ಅಪಘಾತದ ಕುರಿತು ಸುಪ್ರೀಂ ಕೋರ್ಟ್ನ ಹಿರಿಯ ನ್ಯಾಯಾಧೀಶರಿಂದ ತನಿಖೆ ನಡೆಸುವಂತೆ ರಾಜ್ಯಸಭಾ ಸಂಸದ ಸುಬ್ರಮಣಿಯನ್ ಸ್ವಾಮಿ ಬುಧವಾರ ಒತ್ತಾಯಿಸಿದ್ದಾರೆ.
ಹೆಲಿಕಾಪ್ಟರ್ ಪತನದ ಕುರಿತು ಅಂತಿಮ ವರದಿ ಬಂದಿಲ್ಲ, ಹಾಗಾಗಿ ಏನನ್ನೂ ಹೇಳಲು ನನಗೆ ತುಂಬಾ ಕಷ್ಟವಾಗುತ್ತದೆ. ಆದರೆ ತಮಿಳುನಾಡಿನಂತಹ ಸುರಕ್ಷಿತ ವಲಯದಲ್ಲಿ ಮಿಲಿಟರಿ ವಿಮಾನ ಸ್ಫೋಟಗೊಂಡಿದೆ ಎಂದು ತೋರುತ್ತದೆ," ಎಂದಿರುವ ಸಂಸದ ಸುಬ್ರಮಣಿಯನ್ ಸ್ವಾಮಿ ಈ ಘಟನೆಯು "ಆಘಾತಕಾರಿ" ಮತ್ತು ರಾಷ್ಟ್ರೀಯ ಭದ್ರತೆಗೆ ದೊಡ್ಡ ಎಚ್ಚರಿಕೆ ಎಂದು ಸಂಸದ ಸುಬ್ರಮಣಿಯನ್ ಸ್ವಾಮಿ ಬಣ್ಣಿಸಿದ್ದಾರೆ.
"ಇದು ಅತ್ಯಂತ ಗಂಭೀರ ಹಾಗೂ ತನಿಖೆಯ ಅಗತ್ಯವಿರುವ ವಿಷಯವಾಗಿದೆ. ಸಾರ್ವಜನಿಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು, ಆದ್ದರಿಂದ ಯಾರಾದರೂ, ಸುಪ್ರೀಂ ಕೋರ್ಟ್ ಹಿರಿಯ ನ್ಯಾಯಾಧೀಶರು ಈ ಬಗ್ಗೆ ತನಿಖೆ ನಡೆಸಬೇಕು" ಎಂದು ಸ್ವಾಮಿ ಹೇಳಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications