ಸೈನ್ಯಕ್ಕೆ ಮತ್ತಷ್ಟು ಶಕ್ತಿ ತುಂಬಲಿರುವ ಬೆಂಗಳೂರ ಕ್ಷಿಪಣಿ
ಬೆಂಗಳೂರು, ಅ. 16: ಬೆಂಗಳೂರಿನಲ್ಲಿಯೇ ಸಂಪೂರ್ಣವಾಗಿ ತಯಾರಾದ ಕ್ಷಿಪಣಿ ಪರೀಕ್ಷಾರ್ಥ ಹಾರಾಟಕ್ಕೆ ಸಿದ್ಧವಾಗಿದೆ. ನಿರ್ಭಯ್ ಹೆಸರಿನ ಕ್ವಿಪಣಿ ಪರೀಕ್ಷೆಗೆ ಸಿದ್ಧವಾಗಿದ್ದು ಭಾರತದ ಸೈನಿಕ ಶಕ್ತಿ ಮತ್ತಷ್ಟು ಹೆಚ್ಚಲಿದೆ. ಒರಿಸ್ಸಾದ ಚಂಡಿಪುರದ ಕೇಂದ್ರದಿಂದ ಪರೀಕ್ಷಾರ್ಥ ಹಾರಾಟ ನಡೆಯಲಿದೆ.
ಅಕ್ಟೋಬರ್ 17 ರಂದು ಕ್ಷಿಪಣಿ ಪರೀಕ್ಷಾರ್ಥ ಹಾರಾಟ ನಡೆಸಲಿದೆ. ಈ ಮೊದಲು ನಿರ್ಭಯ್ ಕ್ಷಿಪಣಿಯನ್ನು ಮಾರ್ಚ್ 12, 2013ರಂದು ತಾಂತ್ರಿಕ ಪರೀಕ್ಷೆ ಮಾಡಲಾಗಿತ್ತು. ಸುಮಾರು ಎಂಟು ನೂರರಿಂದ ಸಾವಿರ ಕಿಮೀ ಸಾಮರ್ಥ್ಯದ ಕ್ಷಿಪಣಿ ಬೆಂಗಳೂರಿನ ಸಿ.ವಿ.ರಾಮನ್ ನಗರದ ರಕ್ಷಣಾ ಇಲಾಖೆ ಘಟಕದಲ್ಲಿ ತಯಾರಾಗಿರುವುದು ವಿಶೇಷ.[ಚಿತ್ರಗಳಲ್ಲಿː ಕಣ್ಮನ ಸೆಳೆದ ಸೈನಿಕರ ತಾಲೀಮು]

ಅಲ್ಲದೇ ಕ್ಷಿಪಣಿ ಹಾರಾಟ ಸಂದರ್ಭ ಚಂಡಿಪುರದಲ್ಲಿ ಮ್ಯಾರಾಥಾನ್ ಓಟವನ್ನು ಆಯೋಜಿಸಲಾಗಿದೆ ಎಂದು ಪ್ಲೈಟ್ ಅಥೋರೈಜೇಶನ್ ಬೋರ್ಡ್(ಎಫ್ಎಬಿ) ತಿಳಿಸಿದೆ.
ಕ್ಷಿಪಣಿಯನ್ನು ಬೆಳಗ್ಗೆ ಸರಿಯಾಗಿ 10 ಗಂಟೆಗೆ ಹಾರಿಸಲಾಗುವುದು. ವಾತಾವರಣದ ಪರಿಸ್ಥಿತಿ ನೋಡಿಕೊಂಡು ಸಮಯದಲ್ಲಿ ಕೊಂಚ ಬದಲಾವಣೆಯಾಗಬಹುದು ಎಂದು ಕ್ಷಿಪಣಿ ತಂತ್ರಜ್ಞಾನದ ಹಿರಿಯ ಅಧಿಕಾರಿಯೊಬ್ಬರು ಒನ್ ಇಂಡಿಯಾಗೆ ತಿಳಿಸಿದ್ದಾರೆ.[ವಿಮಾನ ಅಪಘಾತ; ಪೃಥ್ವಿ ಪರೀಕ್ಷೆ ವಿಫಲ]

ಸಾಮಾನ್ಯವಾಗಿ ಭಾರತದ ಕ್ಷಿಪಣಿಗಳು ಹೈದ್ರಾಬಾದ್ ನ ಡಿಆರ್ ಡಿಒ ಘಟಕದಲ್ಲಿ ತಯಾರಾಗುತ್ತಿದ್ದವು. ಆದರೆ 'ನಿರ್ಭಯ್' ನನ್ನು ಬೆಂಗಳೂರಿನಲ್ಲಿ ತಯಾರು ಮಾಡಲಾಗಿದೆ.ರಕ್ಷಣಾ ಇಲಾಖೆ ಇದೆ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕ್ಷಿಪಣಿ ತಯಾರಿಕೆಗೆ ಅವಕಾಶ ನೀಡಲಾಗಿದೆ. ಇದು ಭಾರತದ ಸೈನ್ಯಕ್ಕೆ ಮತ್ತಷ್ಟು ಶಕ್ತಿ ತುಂಬಲಿದೆ. ಮೂನ್ನೂರು ಕಿಮೀ ಹಾರಾಟ ನಡೆಸಿ ಮತ್ತೆ ಕೇಂದ್ರಕ್ಕೆ ಹಿಂದಿರುಗಲಿದೆ ಎಂದು ಡಿಆರ್ಡಿಒ ನಿರ್ದೇಶಕ ಡಾ.ಕೆ. ತಮಿಳ್ ಮಣಿ ತಿಳಿಸಿದ್ದಾರೆ.
ಉಳಿದ ಕ್ಷಿಪಣಿಗಳಿಗೆ ಹೋಲಿಸಿದರೆ ಇದು ಅತ್ಯಂತ ಹಗುರವಾಗಿದೆ. ಅತ್ಯಂತ ನಾಜೂಕಾಗಿ ಸಿದ್ಧಮಾಡಲಾಗಿದ್ದು ಹಾರಾಟದ ನಂತರ ದೇಶಕ್ಕೆ ಇದರ ಶಕ್ತಿಯ ಪರಿಚಯವಾಗಲಿದೆ. ಯಾವ ಕಡೆ ಬೇಕಾದರೂ ಸುಲಭವಾಗಿ ತಿರುಗುವ, ಆಕಾಶದಲ್ಲಿ ಎಂಥ ಕಸರತ್ತಿಗೂ ಒಳಗಾಗುವ ಶಕ್ತಿ ಹೊಂದಿದೆ ಎಂದು ತಿಳಿಸಿದ್ದಾರೆ.

ನಿರ್ಭಯ್ ಕಿರು ಪರಿಚಯ
ಹೆಸರು: ನಿರ್ಭಯ್
ಶಕ್ತಿ: 800 ರಿಂದ 1000 ಕಿಮೀ ಹಾರಾಟ
ಅಗಲ: 6 ಮೀಟರ್
ತೂಕ: 1,500 ಕೆಜಿ
ವೇಗ: 0.7 ಮ್ಯಾಕ್
ವೆಚ್ಚ: ಒಂದು ಕ್ಷಿಪಣಿಗೆ 10 ಕೋಟಿ
ತಯಾರಿಕೆ: ಎಡಿಇ ಕೇಂದ್ರ ಬೆಂಗಳೂರು
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications