ಆದಿತ್ಯ ಎಲ್-1 ಯಶಸ್ವಿ ಉಡಾವಣೆ: ವಿಜ್ಞಾನಿಗಳಿಗೆ ಕೃತಜ್ಞತೆ ಸಲ್ಲಿಸಿದ ರಾಜಕೀಯ ಗಣ್ಯರು
ಆದಿತ್ಯ ಎಲ್-1 ಎಕ್ಸ್ಎಲ್ ಆವೃತ್ತಿಯ ಪಿಎಸ್ಎಲ್ವಿ ರಾಕೆಟ್ನ ಸಹಾಯದಿಂದ ಗಮ್ಯಸ್ಥಾನಕ್ಕೆ ಪಯಣಿಸುತ್ತಿದ್ದು, ಸುಮಾರು 120 ರಿಂದ 125 ದಿನಗಳ ಬಳಿಕ ನಿಗದಿತ ಕಕ್ಷೆ ತಲುಪಲಿದೆ. ಅಂದರೆ ನಾಲ್ಕು ತಿಂಗಳು ಆದಿತ್ಯ-ಎಲ್1 ಯೋಜನೆಯ ಅವಧಿಯಾಗಿದ್ದು, ಜನವರಿ ಮೊದಲ ವಾರದಲ್ಲಿ ಸೂರ್ಯಯಾನದ ನೌಕೆಯು ಎಲ್-1ಗೆ ಸೇರುವ ನಿರೀಕ್ಷೆ ಇದೆ.
ಭಾರತದ ಮಹತ್ವಾಕಾಂಕ್ಷೆಯ ಸೂರ್ಯಯಾನ ಯೋಜನೆಯ ಅಡಿಯಲ್ಲಿ ಆದಿತ್ಯ ಎಲ್-1 ಗಗನ ನೌಕೆಯನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ. ಆದಿತ್ಯ ಎಲ್-1 ಹೊತ್ತ ಪಿಎಸ್ಎಲ್ವಿ ರಾಕೆಟ್ನ ಉಡಾವಣೆ ಯಶಸ್ವಿಯಾಗಿದೆ ಎಂದು ಭಾರಾತೀಯ ಬಾಹ್ಯಾಕಾಶ ವಿಜ್ಞಾನ ಸಂಶೋಧನಾ ಸಂಸ್ಥೆ ಇಸ್ರೋ ತಿಳಿಸಿದೆ. ಶ್ರೀಹರಿಕೋಟಾದಲ್ಲಿ ಸಾವಿರಾರು ಮಂದಿ ಈ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಂಡಿದ್ದಾರೆ.

ಚಂದ್ರನ ಬಳಿಕ ಈಗ ಇಸ್ರೋ ಸೂರ್ಯ ಅಧ್ಯಯನ ನಡೆಸಲು ಆದಿತ್ಯ ಎಲ್-1 ಉಪಗ್ರಹ ಉಡಾವಣೆ ಮಾಡಲಾಗಿದ್ದು ಈ ಸಂಶೋಧನಾ ಕಾರ್ಯ ಯಶಸ್ವಿಯಾಗಲೆಂದು ನಡೆದ ಪೂಜೆ ಪುನಸ್ಕಾರಗಳು ಫಲನೀಡಿವೆ. ನಿರೀಕ್ಷೆಯಂತೆ ಆದಿತ್ಯ ಎಲ್-1 ಯಶಸ್ವಿಯಾಗಿ ಉಡಾವಣೆಯಾಗಿದ್ದು 125 ದಿನಗಳ ಬಳಿಕ ನಿಗದಿತ ಕಕ್ಷೆ ತಲುಪಲಿದೆ. ಆದಿತ್ಯ ಎಲ್-1 ಯಶಸ್ವಿ ಉಡಾವಣೆ ವಿಜ್ಞಾನಿಗಳಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.
ಆದಿತ್ಯ ಎಲ್-1 ಯಶಸ್ವಿ ಉಡಾವಣೆ: ವಿಜ್ಞಾನಿಗಳಿಗೆ ಕೃತಜ್ಞತೆ ತಿಳಿಸಿದ ಮಲ್ಲಿಕಾರ್ಜುನ ಖರ್ಗೆ
ಬಾಹ್ಯಾಕಾಶ ಸಂಸ್ಥೆ ಇಸ್ರೋ ಮೊಟ್ಟ ಮೊದಲ ಬಾರಿಗೆ ಕೈಗೊಂಡಿದ್ದ ಸೂರ್ಯಯಾನದ ಆದಿತ್ಯ ಎಲ್-1 ಯಶಸ್ವಿಯಾಗಿ ಉಡಾವಣೆಯ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖುಷಿ ವ್ಯಕ್ತಪಡಿಸಿದ್ದಾರೆ. ಸೌರ ವೀಕ್ಷಣಾ ಮಿಷನ್ ಆದಿತ್ಯ ಎಲ್-1 ಯಶಸ್ವಿ ಉಡಾವಣೆಗಾಗಿ ನಮ್ಮ ವಿಜ್ಞಾನಿಗಳು, ಬಾಹ್ಯಾಕಾಶ ಇಂಜಿನಿಯರ್ಗಳು, ಸಂಶೋಧಕರು ಮತ್ತು ಇಸ್ರೋನಲ್ಲಿರುವ ನಮ್ಮ ಕಠಿಣ ಪರಿಶ್ರಮದ ಸಿಬ್ಬಂದಿಗೆ ನಾವು ಋಣಿಯಾಗಿದ್ದೇವೆ ಮತ್ತು ಕೃತಜ್ಞರಾಗಿರುತ್ತೇವೆ ಎಂದು ತಿಳಿಸಿದ್ದಾರೆ.
ಆದಿತ್ಯ ಎಲ್-1 ಯಶಸ್ವಿ ಉಡಾವಣೆ: ಮೋದಿ ಟ್ವೀಟ್
'ಚಂದ್ರಯಾನ-3 ಯಶಸ್ಸಿನ ನಂತರ ಭಾರತ ತನ್ನ ಬಾಹ್ಯಾಕಾಶ ಯಾನವನ್ನು ಮುಂದುವರೆಸಿದೆ. ಭಾರತದ ಮೊದಲ ಸೌರ ಮಿಷನ್ ಆದಿತ್ಯ -L1 ನ ಯಶಸ್ವಿ ಉಡಾವಣೆಗಾಗಿ ನಮ್ಮ ವಿಜ್ಞಾನಿಗಳು ಮತ್ತು ಎಂಜಿನಿಯರ್ಗಳಿಗೆ ಅಭಿನಂದನೆಗಳು. ಇಡೀ ಮಾನವಕುಲದ ಕಲ್ಯಾಣಕ್ಕಾಗಿ ಬ್ರಹ್ಮಾಂಡದ ಬಗ್ಗೆ ಉತ್ತಮ ತಿಳುವಳಿಕೆಯನ್ನು ಅಭಿವೃದ್ಧಿಪಡಿಸಲು ನಮ್ಮ ದಣಿವರಿಯದ ವೈಜ್ಞಾನಿಕ ಪ್ರಯತ್ನಗಳು ಮುಂದುವರಿಯುತ್ತವೆ' ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
After the success of Chandrayaan-3, India continues its space journey.
— Narendra Modi (@narendramodi) September 2, 2023
Congratulations to our scientists and engineers at @isro for the successful launch of India’s first Solar Mission, Aditya -L1.
Our tireless scientific efforts will continue in order to develop better…
ಇದೊಂದು ಐತಿಹಾಸಿಕ ಸಾಧನೆ- ನಿತಿನ್ ಗಡ್ಕರಿ
ಆದಿತ್ಯ ಎಲ್-1 ಯಶಸ್ವಿಯಾಗಿ ಉಡಾವಣೆಯಾಗಿದ್ದು ಈ ಬಗ್ಗೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಾತನಾಡಿ, ವೈಜ್ಞಾನಿಕ ಜ್ಞಾನದ ಅನ್ವೇಷಣೆಯಲ್ಲಿ ಇದು ಐತಿಹಾಸಿಕ ಸಾಧನೆ. ಸೂರ್ಯನನ್ನು ಅಧ್ಯಯನ ಮಾಡಲು ಇಸ್ರೋ ತನ್ನ ಮೊದಲ ಬಾಹ್ಯಾಕಾಶ ಕಾರ್ಯಾಚರಣೆಯನ್ನು ವಿಜಯಶಾಲಿಯಾಗಿ ಪ್ರಾರಂಭಿಸಿದೆ. ಈ ಗಮನಾರ್ಹ ಪ್ರಯತ್ನವು ನಮ್ಮ ಹತ್ತಿರದ ನಕ್ಷತ್ರದ ರಹಸ್ಯಗಳನ್ನು ತಿಳಿಯಲು ಸಹಾಯವಾಗುತ್ತದೆ. ಜೊತೆಗೆ ಬಾಹ್ಯಾಕಾಶ ಹವಾಮಾನದ ಬಗ್ಗೆ ನಮ್ಮ ತಿಳುವಳಿಕೆಯನ್ನು ಹೆಚ್ಚಿಸುತ್ತದೆ ಎಂದು ಹೇಳಿದ್ದಾರೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications